nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ
    • ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ
    • ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!
    • ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!
    • ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ
    • ಖರ್ಗೆ ಭಾಷಣ ಮಾಡಿದ್ದ ಸ್ಥಳದಲ್ಲಿ ಶುದ್ಧೀಕರಣ ಹೋಮ: ವಿಧಾನ ಪರಿಷತ್ ನಲ್ಲಿ ಖಂಡನಾ ನಿರ್ಣಯ ಅಂಗೀಕಾರ
    • ಆರ್ ಎಸ್ ಎಸ್ ಜಾತಿವಾದ, ಕೋಮುವಾದದ ‘ಸಾವಿರ ತಲೆಯ ವಿಷಪೂರಿತ ಹಾವು’: ಸಚಿವ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ
    • ಹನೂರು ಶೂಟೌಟ್ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    ಜಿಲ್ಲಾ ಸುದ್ದಿ February 25, 2026

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    By adminFebruary 25, 2026No Comments2 Mins Read

    ರಾಯಚೂರು: ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಸಲಹೆ ನೀಡಿದರು.

    ಫೆ.24ರ ಮಂಗಳವಾರ ದಂದು ನಗರದ ಕೃಷಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಪ್ರತಿಯೊಬ್ಬರು ಕ್ರೀಡಾ ಮನೋಭಾವನೆಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಬದಲಾದ ಜೀವನ ಶೈಲಿ ಮತ್ತು ಆಹಾರ ಕ್ರಮಗಳಿಂದ ಒತ್ತಡ ಉಂಟಾಗುವುದು ಸಾಮಾನ್ಯವಾಗಿದೆ. ಹೀಗಾಗಿ ಪ್ರತಿ ನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಹೀಗಾಗಿ ಎರಡು ದಿನಗಳ ಕಾಲ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅವಕಾಶ ಸಿಕ್ಕಾಗ ಇದೆ ರೀತಿಯಲ್ಲಿ ಕ್ರೀಡೆಗಳನ್ನು ಏರ್ಪಡಿಸಿ, ನೌಕರರು ಮತ್ತು ಸಿಬ್ಬಂದಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದರು.

    ಸರ್ಕಾರಿ ನೌಕರರು ಮುಖ್ಯವಾಗಿ ಜನಸಾಮಾನ್ಯರ ನಿರೀಕ್ಷೆಯಂತೆ ಕೆಲಸ ನಿರ್ವಹಿಸಬೇಕು. ಕುಟುಂಬ ನಿರ್ವಹಣೆ ಜೊತೆಗೆ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರತಿಯೊಬ್ಬರು ವಾಟ್ಸಪ್, ಪೇಸಬುಕ್ ಮತ್ತು ಇನ್ನೀತರ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ವಾಟ್ಸಪ್ ಮತ್ತು ಇನ್ನಿತರ ಸಾಮಾಜಿಕ ಜಾಲತಾಣಗಳನ್ನು ಬಳಸಬೇಕು. ವಾಟ್ಸಾಪ್ ಮತ್ತು ಇನ್ನೀತರೆ ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಬೇಕು. ಸರ್ಕಾರಿ ಅಧಿಕಾರಿಗಳು, ನೌಕರರು ಕಾಲಕ್ಕೆ ತಕ್ಕಂತೆ ಕಾರ್ಯ ಶೈಲಿಯನ್ನು ಮಾರ್ಪಾಡು ಮಾಡಿಕೊಳ್ಳಬೇಕು ಎಂದು ಸಿಇಓ ಅವರು ಮಹತ್ವ ಸಲಹೆ ನೀಡಿದರು.

    ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ವಿಭಾಗೀಯ ಉಪಾಧ್ಯಕ್ಷರು ಮತ್ತು ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಕೃಷ್ಣ ಶಾವಂತಗೇರಿ ಅವರು ಮಾತನಾಡಿ, ಸರ್ಕಾರಿ ನೌಕರರು ಒಂದು ಕುಟುಂಬದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ರಾಜ್ಯಾದ್ಯಂತ ನೌಕರರಿಗಾಗಿಯೇ ಕ್ರೀಡಾಕೂಟಗಳನ್ನು ಏರ್ಪಡಿಸಿ ನೌಕರರು ಪ್ರತಿ ನಿತ್ಯದ ಜಂಜಾಟಗಳಿಂದ ಹೊರಬರುವಂತೆ ಮಾಡಲಾಗುತ್ತಿದೆ. ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನೌಕರರು ಇಂಥ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿದಾಗ ಹೊಸ ಉಲ್ಲಾಸ ಮೂಡುತ್ತದೆ ಎಂದರು.

    ಇದಕ್ಕೂ ಮುಂಚೆ ಕ್ರೀಡಾಕೂಟಕ್ಕೆ ಧ್ವಜಾರೋಹಣ, ಕ್ರೀಡಾ ಜ್ಯೋತಿ ಸ್ವೀಕರಿಸುವುದರ ಮೂಲಕ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

    ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವರಾಜ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಡಾ.ಟಿ.ರೋಣಿ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ವಿಜಯಶಂಕರ, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪವಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಡಾ.ಸುರೇಂದ್ರ ಬಾಬು, ಆಯುಷ್ ಇಲಾಖೆಯ ಡಾ.ಶಂಕರಗೌಡ, ಯುವಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಈರೇಶ ನಾಯಕ ಸೇರಿದಂತೆ ವಿವಿಧ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಗಳ ಅಧಿಕಾಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

    August 17, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ನಾಗರ ಪಂಚಮಿ ದಿನವೇ ದುರಂತ – ಹಾವು ಕಡಿದು ವಾಟರ್ಮ್ಯಾನ್ ದುರ್ಮರಣ

    August 18, 2026

    ಬೀದರ್: ನಾಗರ ಪಂಚಮಿ ಹಬ್ಬದ ಸಂಭ್ರಮದ ದಿನವೇ ದುರಂತವೊಂದು ಸಂಭವಿಸಿದ್ದು, ನೀರು ಪೂರೈಕೆ ಮಾಡಲು ತೆರಳಿದ್ದ ಗ್ರಾಮ ಪಂಚಾಯಿತಿ ವಾಟರ್ಮ್ಯಾನ್…

    ಕಲಬುರಗಿ: ಕುಟುಂಬ ಕಲಹ; ಪತಿಯನ್ನು ಕೊಡಲಿಯಿಂದ ಹೊಡೆದು ಕೊಂದ ಪತ್ನಿ

    August 18, 2026

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.