nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.
    ರಾಜ್ಯ ಸುದ್ದಿ March 11, 2026

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    By adminMarch 11, 2026No Comments3 Mins Read
    bheema gayana

    ಬೆಂಗಳೂರು: ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆ ತರಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಡಾ.ಬಿ.ಆರ್.ಅಂಬೇಡ್ಕರ್. ಅವರು ಭಾರತ ದೇಶದ ನಿಜ ಭಾಗ್ಯವಿಧಾತ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು.

    ನಗರದ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಡಾ. ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಡಾ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಏರ್ಪಡಿಸಿದ್ದ “ಭೀಮ ಗಾಯನ”ವಿಶೇಷ ಸಂಗೀತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ನಮ್ಮ ಸಂವಿಧಾನ ಪೀಠಿಕೆಯು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಐಕ್ಯತೆ ಮತ್ತು ಭ್ರಾತೃತ್ವದ ಬದ್ಧತೆಯನ್ನು ಪ್ರತಿಪಾದಿಸುತ್ತದೆ.ಅಂಬೇಡ್ಕರ್ ರಚಿತ ಈ ಸಂವಿಧಾನದ ಪೀಠಿಕೆಯೇ ಅವರು ಒಬ್ಬ ವಿಶ್ವ ಮಾನವ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದ ಅವರು ಬಾಬಾ ಸಾಹೇಬರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಭಾರತದ ಎಲ್ಲ ಪ್ರಜೆಗಳ ಸಮಾನ ಹಕ್ಕುಗಳಿಗೆ ಹೋರಾಡಿದವರು. ಅವರ ಆಶಯ ಆದರ್ಶಗಳನ್ನು ಈ ದೇಶದ ಯುವ ಸಮುದಾಯ ಅರ್ಥ ಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ಕೊಟ್ಟರು.

    ಮಹಿಳೆಯರಿಗೆ ಹೆಚ್ಚಿನ ಹಕ್ಕುಗಳನ್ನು ಪ್ರತಿಪಾದಿಸಿದ ಹಿಂದು ಕೋಡ್ ಬಿಲ್ಲನು ತಿರಸ್ಕರಿಸಿದ ಸಂದರ್ಭದಲ್ಲಿ ಅಂಬೇಡ್ಕರ್ ಅವರು ತಮ್ಮ ಸಚಿವ ಪದವಿಗೆ ರಾಜಿನಾಮೆ ನೀಡುತ್ತಾರೆ. ಅಂತಹ ಕಾರ್ಯ ನಿಷ್ಠೆ ಇಂದಿನ ಸಂದರ್ಭದಲ್ಲಿ ಕಾಣುವುದೇ ಅತ್ಯಂತ ವಿರಳ. ಹಾಗಾಗಿ ಅಂಬೇಡ್ಕರ್ ಇಂದಿಗೂ ನಮಗೆ ಅತ್ಯಂತ ಪ್ರಸ್ತುತ ಎಂದ ಅವರು, ದೇಶದಲ್ಲಿ ಮಹಿಳೆಯರನ್ನು ಒಂದು ವರ್ಗವನ್ನಾಗಿಸಿ ಮನೆಗೆ ಸೀಮಿತವಾಗಿರಿಸಿದ್ದ ಪರಿಸ್ಥಿತಿ ಒಂದು ಕಾಲದಲ್ಲಿ ಇತ್ತು, ಅಂತಹ ಸಂದರ್ಭದಲ್ಲಿ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರು ಮಹಿಳೆಯರ ಶಿಕ್ಷಣಕ್ಕೆ ಹೋರಾಡಿದವರು. ಇಂದು ಅವರ ಪುಣ್ಯಸ್ಮರಣೆಯ ದಿನದಂದು ನಾವೆಲ್ಲರೂ ಕೃತಜ್ಞತಾ ಭಾವದಿಂದ ಅವರನ್ನು ನೆನೆಯಬೇಕಿದೆ ಎಂದರು.

    ಹಾಡುಗಳು ಹೋರಾಟದ ಸಾಧನ : ಪಿಚ್ಚಳ್ಳಿ ಶ್ರೀನಿವಾಸ್

    ಜಾನಪದ ಕಲಾವಿದರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಮಾತನಾಡಿ ಕನ್ನಡ ನಾಡಿನಲ್ಲಿ ಸಾಮಾಜಿಕ ಹೋರಾಟಗಳಲ್ಲಿ ಹಾಡುಗಳು ಅತ್ಯಂತ ಪ್ರಬಲ ಸಾಧನವಾಗಿದ್ದವು. ಇಂದಿನ ಯುವ ಜನತೆಗೆ “ಭೀಮ ಗಾಯನ”ದ ಹಾಡುಗಳು ಅಂಬೇಡ್ಕರ್ ಅವರ ಬದುಕಿನ ಹೋರಾಟಗಳ, ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸುತ್ತದೆ ಎಂದರು. ನಾವೆಲ್ಲರೂ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಬೇಕು. ತನ್ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಿಕೊಳ್ಳಬೇಕು ಎಂದರು.

    ಅಂಬೇಡ್ಕರ್ ಅವರನ್ನು ಇಂಗ್ಲೆಂಡ್ ನಲ್ಲಿ ನಡೆದ ಎರಡನೇ ದುಂಡು ಮೇಜಿನ ಸಭೆಗೆ ಆಹ್ವಾನಿಸಬೇಕೆಂದು ಕರ್ನಾಟಕದ ಕೆಜಿಎಫ್ ನ ದಲಿತ, ಕಾರ್ಮಿಕ ವರ್ಗದ ಸುಮಾರು 13 ಸಾವಿರ ಜನರು ಟೆಲಿಗ್ರಾಂ ಗಳನ್ನು ಕಳಿಸಿದ್ದರು. ಈ ಐತಿಹಾಸಿಕ ವಿಷಯದಿಂದ ಅಚ್ಚರಿಗೊಳಗಾದ ಬಾಬಾ ಸಾಹೇಬರು ಸಭೆಯಿಂದ ಮರಳಿದ ನಂತರ ಕೆಜಿಎಫ್ ಗೆ ಭೇಟಿ ನೀಡಿದರು. ಇದು ಅವರ ನಾಯಕತ್ವ ಗುಣದ ಒಂದು ಉದಾಹರಣೆ ಎಂದು ಅವರು ತಿಳಿಸಿದರು.

    ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ  ಪ್ರೊ.ರಮೇಶ.ಬಿ, ಅವರು ಮಾತನಾಡಿ ಭೀಮ ಗಾಯನವು ಒಂದು ಅದ್ಬುತವಾದ ಹಾಗೂ ಅರ್ಥಪೂರ್ಣವಾದ ಕಾರ್ಯಕ್ರಮವಾಗಿದ್ದು ಅಂಬೇಡ್ಕರ್ ಕುರಿತ ಗಾಯನವು ವಿದ್ಯಾರ್ಥಿಗಳಲ್ಲಿ ಅವರ ತತ್ವ ಹಾಗೂ ಆಶಯಗಳ ಅರಿವು ಮೂಡಿಸುತ್ತದೆ ಎಂದು ತಿಳಿಸಿದರು.

    ಸಮಾರಂಭದಲ್ಲಿ ಸಂವಿಧಾನ ಪೀಠಿಕೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಭೋಧಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ದಕ್ಷಿಣ ಭಾರತದಲ್ಲಿ ಬುದ್ಧ ವಿಹಾರಗಳನ್ನು ನವೀಕರಿಸಿ, ಪುನರ್ ನಿರ್ಮಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದರು. ಮೈಸೂರು ಅರಸರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಅವರು, ಬೆಂಗಳೂರಿನಲ್ಲಿ ಬೌದ್ಧ ಧರ್ಮದ ಚಟುವಟಿಕೆಗಳಿಗೆ ಅತ್ಯಂತ ಸೂಕ್ತ ಪರಿಸರವಿದ್ದು, ಭೂಮಿ ಒದಗಿಸಬೇಕಾಗಿ ಕೋರಿದ್ದರು. ಅದರಂತೆ, ಅರಸರು 5 ಎಕರೆ ಜಾಗವನ್ನು ನೀಡಿದರು ಎಂದು ಮತ್ತು ಆ ಜಾಗದಲ್ಲಿ ವಿಹಾರಗಳನ್ನು ನಿರ್ಮಿಸಿ ಬೌಧ ಧರ್ಮದ ಪ್ರಚಾರ ನಡೆಸಲಾಗುವುದು ಎಂದು ತಮ್ಮ ಪುಸ್ತಕದಲ್ಲಿ ಬರೆದಿದ್ದರು ಎಂದರು.

    ಅದೇ ರೀತಿ ಕರ್ನಾಟಕದಲ್ಲಿ ಒಟ್ಟು 12 ಸ್ಥಳಗಳಿಗೆ ಅಂಬೇಡ್ಕರ್ ಅವರು ಭೇಟಿ ನೀಡಿದ್ದು, ಈ ಸ್ಥಳಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಭೀಮ ಗಾಯನ ಕಾರ್ಯದಕ್ರಮವನ್ನು ಹಮ್ಮಿಕೊಂಡಿದೆ ಎಂದು ಮಾಹಿತಿ ನೀಡಿದರು.

    ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ ನಡೆದ “ಭೀಮ ಗಾಯನ” ಕಾರ್ಯಕ್ರಮವನ್ನು ಮೈಸೂರಿನ ʼಅಮ್ಮ ವಸುಂಧರೆ ಕಾಲತಂಡʼದ ಕಲಾವಿದರು ಪ್ರಸ್ತುತಪಡಿಸಿದರು.

    ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ ಮಾವಳ್ಳಿ ಶಂಕರ್, ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೋ.ಕೆ.ಆರ್.ಜಲಜಾ, ಸಿಂಡಿಕೇಟ್ ಸದಸ್ಯರಾದ ಡಾ. ಫ್ರಾನ್ಸಿಸ್ ಹಾಗೂ ವಿಶ್ವವಿದ್ಯಾನಿಲಯದ ಬೋಧಕ/ ಬೋಧಕೇತರ ಸಿಬ್ಬಂದಿ ಹಾಗೂ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.