ಸರಗೂರು: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರದಂದು ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಬೇಕಾದ ಸಭೆಯಲ್ಲಿ ತಹಶೀಲ್ದಾರ್ ಹಾಗೂ ಅಧಿಕಾರಿಗಳು ಗೈರು ಹಾಜರಾದ ಹಿನ್ನೆಲೆಯಲ್ಲಿ ಸಮಾಜದ ಮುಖಂಡರು ಸಭೆಯಿಂದ ಹೊರ ನಡೆದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕೊತ್ತೇಗಾಲ ತಿಮ್ಮಯ್ಯ ರವರು ಸಭೆಯನ್ನು 11 ಗಂಟೆಗೆ ಸಭೆಯನ್ನು ನಿಗದಿ ಮಾಡಿ 1 ಗಂಟೆಯಾದರೂ ಸಭೆಗೆ ಬರಲಿಲ್ಲ.
ತಹಶೀಲ್ದಾರ್ ರವರು ಅವರೇ ಪೂರ್ವ ಭಾವಿ ಸಭೆಯ ದಿನಾಂಕವನ್ನು ನಿಗದಿ ಪಡಿಸಿ ಅವರೇ ಸಭೆಗೆ ಬಾರದೆ ನಮ್ಮ ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದ್ದಾರೆ, ಸಮಾಜ ಕಲ್ಯಾಣ ಇಲಾಖೆ ರವರು ಸಮಿತಿ ಕಾರ್ಯದರ್ಶಿಯಾಗಿದ್ದು ಅವರು ಕೂಡಾ ಮುಖಂಡರಿಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಬೇಕಿತ್ತು. ಆದರೆ ಅಧಿಕಾರಿಗಳ ಗೈರು ಹಾಜರಿಯಿಂದಾಗಿ ಸಭೆಯನ್ನು ಮುಂದೂಡುವಂತಾಗಿದೆ. ಸಭೆ ಮಾಡಲು ಬೆರಳೆಣಿಕೆಯಷ್ಟು ಅಧಿಕಾರಿಗಳು ಬರುತ್ತಾರೆ, ರಾಷ್ಟ್ರ ನಾಯಕರ ಜಯಂತಿ ಪೂರ್ವಭಾವಿ ಸಭೆಗೆ ತಾಲ್ಲೂಕಿನ ಶಾಸಕರು ಕೂಡ ಬರುವುದಿಲ್ಲ.ಅಧಿಕಾರಿಗಳು ಸಭೆಗಳನ್ನು ಮಾಡಬೇಕಾದರೆ ಕಾಟಾಚಾರಕ್ಕೆ ಮಾಡುತ್ತಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಯಂತಿಯನ್ನು ಚರ್ಚಿಸುವ ಉದ್ದೇಶದಿಂದ ಸಭೆ ಕರೆಯಲಾಗಿತ್ತು. ಸಭೆಗೆ ಸಮಾಜದ ಯಜಮಾನರು, ಅಧ್ಯಕ್ಷರು, ಸಂಘ ಸಂಸ್ಥೆಗಳು ಸದಸ್ಯರೆಲ್ಲ ಹಾಜರಿದ್ದರೂ ಸಭೆಗೆ ಬರಬೇಕಾದ ಅಧಿಕಾರಿಗಳು ಬರಲೇ ಇಲ್ಲ. ಅಧಿಕಾರಿಗಳಿಲ್ಲದೆ ಸಭೆ ಪೂರ್ಣವಾಗುವುದಿಲ್ಲ. ಯಾವ ಪುರುಷಾರ್ಥಕ್ಕಾಗಿ ಸಭೆ ಮಾಡುತ್ತಿರಾ ಎಂದು ಮುಖಂಡರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಮುಖಂಡರಾದ ಪುಟ್ಟ ಹನುಮಯ್ಯ, ಶ್ರೀನಿವಾಸ, ದಸಂಸ ಮುಖಂಡರಾದ ಕೂಡಗಿ ಗೋವಿಂದರಾಜು, ಅಣ್ಣಯ್ಯಸ್ವಾಮಿ, ಶಿವಕುಮಾರ್ , ಇನ್ನೂ ಮುಖಂಡರು ಸೇರಿದಂತೆ ಕೆಲವು ಅಧಿಕಾರಿಗಳು ಭಾಗಿಯಾಗಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


