nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    March 29, 2026

    ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು

    March 29, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    • ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು
    • ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ
    • ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ
    • ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ
    • ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಎಲ್ ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ ನಿಂದ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ
    • ಸವಾಲುಗಳು ಸಾಧನೆಯ ಹಾದಿಗೆ ಅಡ್ಡಿಯಾಗಬಾರದು: ಅಂಧ ಕ್ರಿಕೆಟ್ ಪಟು ದೀಪಿಕಾ ಟಿ.ಸಿ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ
    ಜಿಲ್ಲಾ ಸುದ್ದಿ March 29, 2026

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    By adminMarch 29, 2026No Comments2 Mins Read
    shrinivas

    ಸರಗೂರು:  ಶಾಸಕ ಅನಿಲ್ ಚಿಕ್ಕಮಾದುರವರ ಅಭಿವೃದ್ಧಿ ಕೆಲಸಗಳು 99 ಭಾಗದಷ್ಟು ಕಣ್ಣು ಮುಂದೆ ಇದ್ದರೂ ಸಹಿಸಲಾಗದೆ ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದು ಪ.ಪಂ. ಸದಸ್ಯ ಹಾಗೂ ನಾಯಕ ಸಮಾಜದ ಉಪಾಧ್ಯಕ್ಷ ಶ್ರೀನಿವಾಸ ಆಕ್ರೋಶ ವ್ಯಕ್ತಪಡಿಸಿದರು.

    ತಾಲ್ಲೂಕಿನ ಜನತೆ ಅನಿಲ್ ಚಿಕ್ಕಮಾದು ಅವರನ್ನು ಅವರ ಅಭಿವೃದ್ಧಿ ಕೆಲಸಗಳನ್ನು ನೋಡಿ ಮೂರು ಬಾರಿ ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ಅದನ್ನು ನೋಡಲಾಗದೇ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಿಗೂ 365 ದಿನಗಳಲ್ಲಿ 300 ದಿನಗಳು ಜನರ ಮಧ್ಯದಲ್ಲಿ ಶಾಸಕರು ಇರುತ್ತಾರೆ. ಜನರೊಂದಿಗೆ ಇದ್ದು ಅವರ ಕಷ್ಟ ಪರಿಹರಿಸಲು ಮನೆ ಮಗನಂತೆ ಶ್ರಮಿಸುತ್ತಿದ್ದಾರೆ. ಇಂತಹ ಶಾಸಕರ ವಿರುದ್ಧ ಮಾತನಾಡಲೂ ಯೋಗ್ಯತೆ ಬೇಕು ಅಂತಾ ಅವರು ತಿರುಗೇಟು ನೀಡಿದ್ದಾರೆ.


    Provided by
    Provided by

    ಅನಿಲ್ ಚಿಕ್ಕಮಾದುರವರು ಯಾವುದೇ ಗ್ರಾಮಗಳಲ್ಲಿ ಜಾತಿ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎರಡು ತಾಲೂಕಿನಲ್ಲಿ ಶಾಂತಿಯುತವಾಗಿ ಹೊಂದಾಣಿಕೆಯಲ್ಲಿ ನೋಡಿಕೊಂಡು ಬರುತ್ತಿದ್ದಾರೆ ಎಂದರು.

    ತಂದೆಯಾದ ಎಸ್. ಚಿಕ್ಕಮಾದು ಹಾಗೂ ರಾಜಕೀಯ ಗುರುಗಳಾದ ಆರ್.ಧ್ರುವನಾರಾಯಣ್ ಅವರು ಹೇಳಿಕೊಟ್ಟ ಅದೇ ದಾರಿಯಲ್ಲಿ ಶಾಸಕರು ನಡೆಯುತ್ತಿದ್ದಾರೆ. ಎಲ್ಲಾ ಸಮುದಾಯದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರನ್ನು ಪ್ರೀತಿ ವಿಶ್ವಾಸದಿಂದ ಕಂಡು ಜನಸೇವೆ, ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸಮುದಾಯದ ಸಮಾಜಕ್ಕೆ ಭವನಕ್ಕೆ ಅನುದಾನ ಹಾಗೂ ಗ್ರಾಮಗಳಲ್ಲಿ ಮೃತಪಟ್ಟ ವ್ಯಕ್ತಿಗಳಿಗೂ ಅವರ ಕೈಲಾದಷ್ಟು ಸಹಾಯ ಮಾಡಿಕೊಂಡು ಬರುತ್ತಿದ್ದಾರೆ. ಅವರ ಕುಟುಂಬದವರು ಕೂಡ ಜನರ ಸೇವೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

    ಪಟ್ಟಣದಲ್ಲಿ ಮಿನಿ ವಿಧಾನಸೌಧ ಕಾಮಗಾರಿ ನಡೆಯುತ್ತಿದೆ. ಕಲ್ಲಂಬಾಳು ಗ್ರಾಮದಿಂದ ಕಟ್ಟೆಹುಣಸೂರು ಗ್ರಾಮ ಮಾರ್ಗವಾಗಿ ರಸ್ತೆ ಕಾಮಗಾರಿ, ಸಾಗರೆ ಗ್ರಾಮದಿಂದ ಅಗತ್ತೂರು ಮಾರ್ಗವಾಗಿ ಬಿದರಹಳ್ಳಿ ಕಳಸೂರುರವರಗೆ, ಕಾಡಂಚಿನ ಭಾಗದ ಚಿಕ್ಕಬರಗಿ ರಸ್ತೆ ಕಾಮಗಾರಿ, ಮುತ್ತಿಗೆಹುಂಡಿ ಗ್ರಾಮದ ಬಳಿ ಎತ ನೀರಾವರಿ ಯೋಜನೆಯಡಿ ಹಂತ ಕಾಮಗಾರಿ, ಪಟ್ಟಣದ ಬಳಿ ಹಂಚೀಪುರ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ 100 ಬೆಡ್ ಆಸ್ಪತ್ರೆ, ಬಸ್ ಡಿಪೋ, ಆಗ್ನಿ ಶಾಮಕದಳ, ಕೋರ್ಟ್ ಕಚೇರಿಗಳಿಗೆ ಜಾಗವನ್ನು ಗುರುತಿಸಿದ್ದಾರೆ ಎಂದ ಅವರು, ತಾಲೂಕಿನ ಪ್ರಮುಖ ಬೇಡಿಕೆಯಾದ ಹ್ಯಾಂಡ್ ಪೋಸ್ಟ್ ದಿಂದ ಹೆಡಿಯಾಲ ಗ್ರಾಮದವರೆಗೂ ಡಬಲ್ ರಸ್ತೆಯಾಗಬೇಕು ಎಂಬ ಬೇಡಿಕೆ ಸರ್ಕಾರ ಮಟ್ಟದಲ್ಲಿದ್ದು ಶೀಘ್ರವೇ ಜಾರಿಗೆ ಬರಲಿದೆ ಅಂತಾ ತಿಳಿಸಿದರು.

    ಕಬಿನಿ ಜಲಾಶಯದ ಅಡ್ಡವಾಗಿ ನಿರ್ಮಾಣಗೊಂಡಿರುವ ತುಂಬಸೋಗೆ ಗ್ರಾಮದ ಸೇತುವೆ ತುಂಬಾ ಶಿಥಿಲಗೊಂಡಿದೆ ಎಂದು ನಾವು ಶಾಸಕರ ಗಮನಕ್ಕೆ ತಂದಿದ್ದೆವು. ಈ ಬಗ್ಗೆ ಅವರು ಕ್ರಮವಹಿಸಿದ್ದು, ಶೀಘ್ರವೇ ಕಾಮಗಾರಿಗಳಿಗೆ ಅವರು ಚಾಲನೆ ನೀಡುತ್ತಾರೆ ಎಂದು ಅವರು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು

    March 29, 2026

    2030ಕ್ಕೆ ಒಲಿಂಪಿಕ್ಸ್ ಆತಿಥ್ಯ ವಹಿಸಲು ಭಾರತ ಶಕ್ತ: ಕೇಂದ್ರ ಸಚಿವ ವಿ.ಸೋಮಣ್ಣ

    March 28, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದು ಅಭಿವೃದ್ಧಿ ಕಾರ್ಯ ಸಹಿಸಲಾಗದೇ ವಿರೋಧ ಪಕ್ಷಗಳಿಂದ ಟೀಕೆ: ಪ.ಪಂ. ಸದಸ್ಯ ಶ್ರೀನಿವಾಸ ಕಿಡಿ

    March 29, 2026

    ಸರಗೂರು:  ಶಾಸಕ ಅನಿಲ್ ಚಿಕ್ಕಮಾದುರವರ ಅಭಿವೃದ್ಧಿ ಕೆಲಸಗಳು 99 ಭಾಗದಷ್ಟು ಕಣ್ಣು ಮುಂದೆ ಇದ್ದರೂ ಸಹಿಸಲಾಗದೆ ವಿರೋಧ ಪಕ್ಷದವರು ಟೀಕೆ…

    ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸಿ: ಶಾಸಕ ಅನಿಲ್ ಚಿಕ್ಕಮಾದು ಕಿವಿಮಾತು

    March 29, 2026

    ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಮೃತ ರೈತ ರಮೇಶ್ ಮನೆಗೆ ತಾಲ್ಲೂಕು ಆಡಳಿತ ಭೇಟಿ

    March 29, 2026

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.