nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    ತುಮಕೂರು April 2, 2026

    ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ

    By adminApril 2, 2026No Comments2 Mins Read
    siddaganga

    ತುಮಕೂರು: ಸಿದ್ದಗಂಗಾ ಮಠದಲ್ಲಿ ಪದ್ಮಭೂಷಣ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 119ನೇ ಜಯಂತೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮ ಇಂದು ನೆರವೇರಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ದ್ರೌಪದಿ ಮುರ್ಮು ,  ಕನ್ನಡದಲ್ಲೇ ಭಾಷಣ ಆರಂಭಿಸಿ “ಸಹೋದರ ಸಹೋದರಿಯರೇ, ತಮಗೆಲ್ಲರಿಗೂ ನನ್ನ ಸ್ವಪ್ರೇಮ ನಮಸ್ಕಾರಗಳು. ಓಂ ನಮಃ ಶಿವಾಯ! ಶ್ರೀ ಶಿವಕುಮಾರ್ ಸ್ವಾಮೀಜಿಯವರ ಜಯಂತಿಯಂದು ಇಲ್ಲಿರುವುದು ನನಗೆ ಬಹಳ ಸಂತೋಷ ತಂದಿದೆ. ಅವರು ನಮ್ಮ ಸಮಾಜ ಮತ್ತು ರಾಷ್ಟ್ರಕ್ಕೆ ಆತ್ಮದ ಸ್ವರೂಪವನ್ನು ನೀಡಿದವರು. ಸಿದ್ದಗಂಗಾ ಮಠದಲ್ಲಿ ಅನ್ನಗಂಗೆ, ಕರುಣಾಗಂಗೆ ಮತ್ತು ಶಿಕ್ಷಣಗಂಗೆ ನಿರಂತರವಾಗಿ ಹರಿಯುತ್ತಿದೆ. ವಂಚಿತರಿಗೆ ಶಿಕ್ಷಣ ನೀಡುವುದು ದೇಶದ ಭವಿಷ್ಯವನ್ನು ನಿರ್ಮಿಸುವುದಕ್ಕೆ ಸಮಾನ. ಬಸವಣ್ಣನವರ ‘ಕಾಯಕವೇ ಕೈಲಾಸ’ ತತ್ವ ಮತ್ತು ಭಗವದ್ಗೀತೆಯ ನಿಷ್ಕಾಮ ಕರ್ಮಯೋಗದಂತೆ ಸ್ವಾಮೀಜಿಯವರು ಬದುಕಿದ್ದಾರೆ. ಕರ್ನಾಟಕದ ಜನರು ರಾಷ್ಟ್ರ ನಿರ್ಮಾಣದಲ್ಲಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ” ಎಂದು ತಿಳಿಸಿದರು.


    Provided by
    Provided by

    ರಾಜ್ಯ ಸರ್ಕಾರದ ಪರವಾಗಿ ಮಾತನಾಡಿದ ಗೃಹ ಸಚಿವ  ಡಾ.ಜಿ.ಪರಮೇಶ್ವರ್, “ಗೌರವಾನ್ವಿತ ರಾಷ್ಟ್ರಪತಿಗಳೇ, ಈ ತುಮಕೂರು ಜಿಲ್ಲೆ ಸಂಸ್ಕೃತಿ ಮತ್ತು ಆಧ್ಯಾತ್ಮದ ಸಂಗಮವಾಗಿದೆ. ಸಿದ್ದಗಂಗಾ ಮಠವು ಪೂಜ್ಯ ಶಿವಕುಮಾರ ಸ್ವಾಮೀಜಿಯವರ ಆದರ್ಶಗಳಿಂದ ಪ್ರೇರಿತವಾಗಿದೆ. 1930ರಲ್ಲಿ ಮಠದ ಜವಾಬ್ದಾರಿ ವಹಿಸಿಕೊಂಡ ಅವರು, ಅಕ್ಷರ ಮತ್ತು ಅನ್ನದಾಸೋಹದ ಮೂಲಕ ಲಕ್ಷಾಂತರ ಮಕ್ಕಳ ಬದುಕನ್ನು ರೂಪಿಸಿದ್ದಾರೆ. ಇದು ಕೇವಲ ಧಾರ್ಮಿಕ ಸಂಸ್ಥೆಯಲ್ಲ, ಬದಲಾಗಿ ಮಾನವೀಯತೆಯ ಜೀವಂತ ಉದಾಹರಣೆಯಾಗಿದೆ. ಬಸವಣ್ಣನವರ 12ನೇ ಶತಮಾನದ ಸಮಾನತೆಯ ತತ್ವಗಳನ್ನು ಸ್ವಾಮೀಜಿಯವರು ಈ ಕಾಲದಲ್ಲಿ ಆಚರಣೆಗೆ ತಂದಿದ್ದಾರೆ” ಎಂದರು.

    ರಾಜ್ಯಪಾಲರಾದ  ಡಾ.ಥಾವರ್ ಚಂದ್ ಗೆಹಲೋಟ್ ಮಾತನಾಡಿ, “ಪರಮಪೂಜ್ಯ ತ್ರಿವಿಧ ದಾಸೋಹಿ ಶಿವಕುಮಾರ ಮಹಾಯೋಗಿಗಳ ಜನ್ಮೋತ್ಸವದಲ್ಲಿ ಭಾಗವಹಿಸಿರುವುದು ನನ್ನ ಸೌಭಾಗ್ಯ. ಅವರಿಗೆ ಸೇವೆಯು ಕೇವಲ ಕರ್ತವ್ಯವಲ್ಲ, ಅದೊಂದು ಸಾಧನೆಯಾಗಿತ್ತು. ‘ಸಬ್ಕಾ ಸಾತ್, ಸಬ್ಕಾ ವಿಕಾಸ್’ ಎಂಬ ತತ್ವದಂತೆ ಮಠವು ಸಮಾಜದ ಆರ್ಥಿಕ ಮತ್ತು ಸಾಮಾಜಿಕ ಪರಿವರ್ತನೆಗೆ ಶ್ರಮಿಸುತ್ತಿದೆ. ಪ್ರಸ್ತುತ ಸಿದ್ದಲಿಂಗ ಮಹಾಸ್ವಾಮಿಗಳು ಈ ಮಹಾನ್ ಪರಂಪರೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

    “ನಮ್ಮ ಪರಮಪೂಜ್ಯ ಗುರುದೇವರು 111 ವರ್ಷಗಳ ಕಾಲ ಬದುಕಿ, ಅದರಲ್ಲಿ 89 ವರ್ಷಗಳನ್ನು ಸಮಾಜ ಸೇವೆಗಾಗಿ ಒಂದೇ ಸ್ಥಾನದಲ್ಲಿ ನಿರಂತರವಾಗಿ ಮೀಸಲಿಟ್ಟಿದ್ದು ಒಂದು ಪವಾಡ. ಗ್ರಾಮಾಂತರ ಮಕ್ಕಳ ಶಿಕ್ಷಣ, ಅದರಲ್ಲೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅವರು ನೀಡಿದ ಒತ್ತು ಅಪಾರ. ಮಠಗಳು ‘ಭಾವಿಸದೆಯೇ ಕೊಡುವ ಕಲ್ಪವೃಕ್ಷಗಳಂತೆ’ ಸಮಾಜಕ್ಕೆ ಸೇವೆ ಸಲ್ಲಿಸುತ್ತಿವೆ. ರಾಷ್ಟ್ರಪತಿಗಳು ಒಬ್ಬ ಸಾಮಾನ್ಯ ಗ್ರಾಮೀಣ ಬುಡಕಟ್ಟು ಸಮುದಾಯದಿಂದ ಬಂದು ಇಷ್ಟು ಎತ್ತರಕ್ಕೆ ಬೆಳೆದಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ.”

    -ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ

    ಕೇಂದ್ರ ಸಚಿವ ವಿ. ಸೋಮಣ್ಣ ಮಾತನಾಡಿ, “ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ ಪಾದಗಳಿಗೆ ಪ್ರಣಾಮಗಳು. ಈ ದೇಶದ ಅತ್ಯುನ್ನತ ಸಂವಿಧಾನಾತ್ಮಕ ಹುದ್ದೆಯನ್ನು ಅಲಂಕರಿಸಿದ ಘನವೆತ್ತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ನಮ್ಮೊಂದಿಗೆ ಇರುವುದು ಅತ್ಯಂತ ಸಂತೋಷದ ಸಂಗತಿ. ಅವರು ತಮ್ಮ ಸೇವಾ ಭಾವನೆ ಮತ್ತು ಮಾನವೀಯ ಮೌಲ್ಯಗಳ ಮೂಲಕ ದೇಶಕ್ಕೆ ವಿಶೇಷ ಸಂದೇಶ ನೀಡಿದ್ದಾರೆ. ನಡೆದಾಡುವ ದೇವರು ಪೂಜ್ಯ ಶಿವಕುಮಾರ ಸ್ವಾಮೀಜಿಯವರು ‘ಕಾಯಕವೇ ಕೈಲಾಸ’ ಎಂಬ ಬಸವಣ್ಣನವರ ತತ್ವವನ್ನು ಪಾಲಿಸಿ, ಜಾತ್ಯತೀತವಾಗಿ ತ್ರಿವಿಧ ದಾಸೋಹ ನಡೆಸಿದ್ದಾರೆ. ಅವರ ಭೌತಿಕ ಶರೀರ ಅಳಿದಿರಬಹುದು, ಆದರೆ ಅವರ ಸೇವಾ ಕಾರ್ಯಗಳು ಜನಮಾನಸದಲ್ಲಿ ಶಾಶ್ವತವಾಗಿವೆ” ಎಂದರು.

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, “ಸಿದ್ದಗಂಗಾ ಮಠವು ಆಧುನಿಕ ಸಂಸ್ಕಾರ ಕೇಂದ್ರವಾಗಿದೆ. ಇಲ್ಲಿನ ಅನ್ನದಾಸೋಹವು ಕೇವಲ ಹಸಿವು ನೀಗಿಸುವುದಲ್ಲ, ಅದು ಮಕ್ಕಳಿಗೆ ಸಂಸ್ಕಾರ ಮತ್ತು ಜ್ಞಾನ ನೀಡುವ ಪುಣ್ಯದ ಅನ್ನವಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದಂತೆ, ‘ಉತ್ತರದಲ್ಲಿ ಗಂಗೆ ಇದ್ದರೆ, ದಕ್ಷಿಣದಲ್ಲಿ ಸಿದ್ದಗಂಗೆ ಇದೆ’. ಗಂಗೆ ಪಾಪಗಳನ್ನು ತೊಳೆದರೆ, ಸಿದ್ದಗಂಗೆ ಲಕ್ಷಾಂತರ ಬಡವರ ಬದುಕಿನ ಕತ್ತಲನ್ನು ದೂರ ಮಾಡುತ್ತದೆ. ಯಾರು ಹಸಿವಿನಿಂದ ಇರಬಾರದು ಮತ್ತು ಹಣವಿಲ್ಲದ ಕಾರಣಕ್ಕೆ ಜ್ಞಾನದಿಂದ ವಂಚಿತರಾಗಬಾರದು ಎಂಬುದು ಸ್ವಾಮೀಜಿಯವರ ಕಾಯಕ ಸಿದ್ಧಾಂತವಾಗಿತ್ತು” ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.