ಕುಣಿಗಲ್: ಜನಗಣತಿ ತರಬೇತಿ ವೇಳೆಯಲ್ಲಿ ಶಿಕ್ಷಕಿಯೊಬ್ಬರು ತೀವ್ರ ರಕ್ತದೊತ್ತಡದಿಂದ ಕುಸಿದು ಬಿದ್ದ ಘಟನೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ. ಬಿದನಗೆರೆ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಆರ್.ಮಂಜುಳ (45) ಕುಸಿದು ಬಿದ್ದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನ ಗಣತಿ ಅಂಗವಾಗಿ ಶಿಕ್ಷಕರಿಗೆ ತರಬೇತಿ ನೀಡುತ್ತಿದ್ದು, ಎಂದಿನಂತೆ ಶಿಕ್ಷಕಿ ಮಂಜುಳ ಮಂಗಳವಾರ ಜನಗಣತಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ತರಬೇತಿ ವೇಳೆ ಶಿಕ್ಷಕಿ ಆರ್.ಮಂಜುಳ ದಿಢೀರನೇ ಕುಸಿದು ಬಿದ್ದರು. ತಕ್ಷಣ ಅಲ್ಲಿಯೇ ಇದ್ದ ತಹಶೀಲ್ದಾರ್ ಎನ್.ಆರ್.ಕರಿಯಾನಾಯ್ಕ ತಮ್ಮ ಸರ್ಕಾರಿ ಬುಲೆರೋ ವಾಹನದಲ್ಲಿ ಶಿಕ್ಷಕಿಯನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಶಿಕ್ಷಕಿ ಮಂಜುಳ ಆರೋಗ್ಯವನ್ನು ವಿಚಾರಿಸಿದ ತಹಶೀಲ್ದಾರ್ ಅವರನ್ನು ಮನೆಗೆ ಕಳಿಸಿಕೊಟ್ಟರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಮತಾಮಣಿ, ಜನಗಣತಿ ತರಬೇತಿಗೆ ಶಿಕ್ಷಕರನ್ನು ಕಳಿಸಿ ಕೊಡುವ ವೇಳೆಯಲ್ಲಿ ಅವರ ಆರೋಗ್ಯವನ್ನು ವಿಚಾರಿಸಲಾಗಿದ್ದು, ಆರೋಗ್ಯ ಸರಿಯಿಲ್ಲದವರಿಂದ ಮಾಹಿತಿ ಪಡೆದು ಅವರನ್ನು ಕಾರ್ಯಾಗಾರದಿಂದ ಕೈಬಿಡಲಾಗಿದೆ. ಆದರೆ ಶಿಕ್ಷಕಿ ಆರ್.ಮಂಜುಳ ಅವರ ಆರೋಗ್ಯದ ಬಗ್ಗೆ ಮಾಹಿತಿ ಇಲ್ಲದ ಕಾರಣ ಅವರನ್ನು ತರಬೇತಿಗೆ ತಾಲೂಕು ಕಚೇರಿಯಲ್ಲಿ ಆಯ್ಕೆ ಮಾಡಿದ್ದಾರೆ, ಮಂಜುಳ ಬದಲಿಗೆ ಮತ್ತೊಬ್ಬ ಶಿಕ್ಷಕರನ್ನು ನೇಮಕ ಮಾಡಲಾಗುವುದೆಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


