ಮಧುಗಿರಿ: ತಾಲ್ಲೂಕಿನ ಐ.ಡಿ.ಹಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ರೈತನ ಮೇಲೆ ಕರಡಿ ದಾಳಿ ಮಾಡಿದ ಘಟನೆ ಶನಿವಾರ ರಾತ್ರಿ 9 ಗಂಟೆ ಸಮಯದಲ್ಲಿ ನಡೆದಿದೆ.
ಮಲ್ಲೇರಂಗಪ್ಪ(57) ಕರಡಿಯ ದಾಳಿಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಇವರು ಕಡು ಬಡತನ ಹೊಂದಿದ ಕುಟುಂಬದ ರೈತರಾಗಿದ್ದು, ವ್ಯವಸಾಯದಿಂದ ಜೀವನ ನಡೆಸುತ್ತಿದ್ದಾರೆ.
ಕರಡಿಯ ದಾಳಿಯಿಂದಾಗಿ ಇವರ ತಲೆಯ ಮೇಲ್ಭಾಗ ಹಾಗೂ ಕೈ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುವನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದ ಸುತ್ತಮುತ್ತ ಹಳ್ಳಿಗಳಲ್ಲಿ ಈ ಹಿಂದೆ ಕುರಿಗಳ ಮೇಲೆ ದಾಳಿ ಮಾಡಿದ್ದು, ಹಾಗೆ ರಸ್ತೆಯಲ್ಲಿ ಹೋಗುವಾಗ ವಾಹನ ಸವಾರರಿಗೂ ಸಹ ಕಾಣಿಸಿಕೊಂಡಿದೆ ಈ ಭಾಗದ ಜನರಲ್ಲಿ ಆತಂಕ ಹೆಚ್ಚಾಗಿದ್ದು ಅರಣ್ಯಾಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಜಲಾಲ್ ಭಾಷಾ ಐಡಿಹಳ್ಳಿ ಮನವಿ ಮಾಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB