ತುರುವೇಕೆರೆ: ಬಸವಣ್ಣನವರ ಆದರ್ಶಗಳನ್ನು ಪಾಲಿಸಿಕೊಂಡು ಸಮಾಜದ ಪಿಡುಗುಗಳನ್ನು ಹೋಗಲಾಡಿಸಲು ಪ್ರಯತ್ನ ಪಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಟ್ಟಣದ ಶ್ರೀಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ತಾಲ್ಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಘಟಕ, ಮಹಿಳಾ ಮತ್ತು ಯುವ ಘಟಕ ಹಾಗೂ ಎಲ್ಲಾ ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಮಹೋತ್ಸವ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಹಾಗೂ ತಾಲ್ಲೂಕು ಮಹಿಳಾ ಮತ್ತು ಯುವ ಘಟಕಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು ಮಾತನಾಡಿ, ಹಿಂದಿನ ದಿನಗಳಲ್ಲಿ ಬಸವೇಶ್ವರ ಜಯಂತಿಯನ್ನು ಮನೆಯಲ್ಲಿನ ಎತ್ತುಗಳನ್ನು ಸಿಂಗರಿಸಿ, ಪೂಜಿಸಿ ಬಸವಣ್ಣನ ಜಯಂತಿ ಎಂದು ಆಚರಿಸಲಾಗುತ್ತಿತ್ತು. 1936ರ ನಂತರ ವೈಚಾರಿಕತೆಯಿಂದ ಬಸವೇಶ್ವರ ತತ್ವಗಳನ್ನು ಅರಿತುಕೊಂಡು ಜಯಂತಿಯನ್ನು ಆಚರಿಸಲಾಗುತ್ತಿದೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ರಾಜ್ಯಧ್ಯಕ್ಷೆ ಮುಕ್ತಾಂಬ ಮಾತನಾಡಿ, 12 ನೇ ಶತಮಾನದಲ್ಲಿಯೇ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಿ ಮಹಿಳಾ ಮೀಸಲಾತಿ ನೀಡಿದ್ದರು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಮಹಿಳೆಯರು ಶೇ.33ರಷ್ಟು ಮೀಸಲಾತಿ ಪಡೆಯಲು ಸಾಧ್ಯವಾಗದಂತಾಗಿದೆ ಎಂದರು.
ಗುಬ್ಬಿ ತಾಲ್ಲೂಕಿನ ಗೊಲ್ಲಹಳ್ಳಿ ಸಿದ್ದಲಿಂಗೇಶ್ವರ ಮಹಾ ಸಂಸ್ಥಾನದ ಡಾ.ಶ್ರೀ ವಿಭವ ವಿದ್ಯಾಶಂಕರ ದೇಶಿಕೇಂದ್ರ ಮಹಾಸ್ವಾಮಿಜಿಗಳ ನೇತೃತ್ವದಲ್ಲಿ ಬೆಳಿಗ್ಗೆ 7ಕ್ಕೆ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ನಡೆಯಿತು. ವಿಶೇಷ ಸಾಧನೆ ಮಾಡಿದ ಕೊಪ್ಪ ಗ್ರಾಮದ ಶರಣ ಕೆ.ಆರ್. ಶಿವರಾಮ್ (ಕೊಪ್ಪ) ಹಾಗೂ ಚೌಡೇನಹಳ್ಳಿ ಗ್ರಾಮದ ಕುಮಾರಿ ಸ್ಪೂರ್ತಿ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಜಿಲ್ಲಾಧ್ಯಕ್ಷ ಡಾ. ಪರಮೇಶ್, ಮಹಿಳಾ ಘಟಕದ ರಾಜ್ಯ ಸಮಿತಿ ಸದಸ್ಯೆ ನಾಗರತ್ನಮ್ಮ, ಯುವ ಘಟಕದ ರಾಜ್ಯಧ್ಯಕ್ಷ ಮನೋಹರ್ ಅಬ್ಬಿಗೆರೆ, ಜಿಲ್ಲಾಧ್ಯಕ್ಷ ದರ್ಶನ್, ತಾಲ್ಲೂಕು ಮಹಿಳಾ ಅಧ್ಯಕ್ಷೆ ದೇವಮ್ಮ ಶಂಕರಪ್ಪ, ಕ.ಸಾ.ಪ. ಅಧ್ಯಕ್ಷೆ ರೂಪ ಶ್ರೀ, ತಾಲ್ಲೂಕು ಯುವಘಟಕದ ಅಧ್ಯಕ್ಷ ನಿಜಗುಣ, ಜಿಲ್ಲಾಘಟಕದ ಕಾರ್ಯದರ್ಶಿ ಟಿ.ಎಂ. ವಿಜಯಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಡಗಿಹಳ್ಳಿಸಿದ್ದಲಿಂಗಪ್ಪ, ನೊಳಂಬ ಲಿಂಗಾಯತ ಸಂಘದ ನಿರ್ದೇಶಕ ಎಂ.ದೇವರಾಜು, ವೀರಶೈವ ಸೇವಾ ಸಮಾಜದ ಟ್ರಸ್ಟ್ ಅಧ್ಯಕ್ಷ ಗುರುಚನ್ನಬಸವಯ್ಯ, ಪಾರ್ವತಿ ಮಹಿಳಾ ಸಮಾಜದ ಅಧ್ಯಕ್ಷೆ ಪುಷ್ಪಕುಮಾರ್, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಬಡಗರಹಳ್ಳಿನಾಗರಾಜು, ಮಾಜಿ ಅಧ್ಯಕ್ಷ ಪಿ.ಎಚ್.ಧನಪಾಲ್, ಲಿಂಗಾಯತ ಮುಖಂಡರಾದ ಯಡೇಹಳ್ಳಿವಿಶ್ವನಾಥ್, ವೆಂಕಟಾಪುರ ಯೋಗೇಶ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಿವಾನಂದಯ್ಯ, ಕೋಶಾಧ್ಯಕ್ಷ ಡಿ.ಎಂ.ಸುರೇಶ್, ಯುವ ಘಟಕದ ಕಾರ್ಯದರ್ಶಿ ಶಿವರಾಜು, ಸುನಿಲ್ ಬಾಬು ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


