ತುಮಕೂರು: ಶಿಕ್ಷಣದ ರೂವಾರಿ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ತುಮಕೂರಿನ ಕೊಡಿಪಾಳ್ಯ ಮತ್ತು ಬಾಳಬಸವನಹಳ್ಳಿಯಲ್ಲಿ ಒಂದು ದಿನದ ಮಕ್ಕಳ ಬೇಸಿಗೆ ಶಿಬಿರ ಮಾಡಲಾಯಿತು.
“ಮಹಾನ್ ವ್ಯಕ್ತಿಗಳ ಜೀವನ ಹಾಗೂ ಸಂಘರ್ಷ ವನ್ನು ಪರಿಚಯಿಸುವ ಮೂಲಕ, ಅವರು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ಹೇಳಿಕೊಡುವುದರ ಮೂಲಕ ಮಾತ್ರವೇ ಮಕ್ಕಳನ್ನು ನೀತಿ ನೈತಿಕತೆ ಹಾಗೂ ಮೌಲ್ಯಾಧಾರಿತ ವ್ಯಕ್ತಿಯನ್ನಾಗಿ ಮಾಡಲು ಸಾಧ್ಯ” ಎಂದು ಎಐಡಿಎಸ್ಓ ಜಿಲ್ಲಾ ಸೆಕ್ರಟೆರಿಯಟ್ ಸದಸ್ಯರಾದ ಭರತ್ ಅವರು ಶಿಬಿರ ಉದ್ದೇಶಿಸಿ ಮಾತನಾಡಿದರು.
ಶಿಬಿರದ ಮೋದಲ ಅಧಿವೇಶನದಲ್ಲಿ ಶೋಷಣೆ ವಿರುದ್ಧ ಶಿಕ್ಷಣದ ಕಿಡಿ ಹಚ್ಚಿದ ಜ್ಯೋತಿ ರಾವ್ ಫುಲೆ ಅವರ ಜೀವನ ಚರಿತ್ರೆ ಕುರಿತು ಅವರು ಮಾತನಾಡುತ್ತಾ, “ಶತಮಾನಗಳ ಕಾಲ ಕವಿದಿದ್ದ ಅಂಧಕಾರವನ್ನು ಹೊಡೆದೋಡಿಸಲು ಜ್ಞಾನದ ಬೆಳಕನ್ನು ನೀಡಲು ಅವರು ಶಾಲೆಗಳನ್ನು ಆರಂಭಿಸಿದರು. ಶಿಕ್ಷಣದಿಂದ ಮಾತ್ರವೇ ಮನುಷ್ಯರು ವಿಮರ್ಶಾತ್ಮಕ ಧೋರಣೆ ಮತ್ತು ಆತ್ಮ ಸ್ಥೈರ್ಯ ವನ್ನು ಹೊಂದಲು ಸಾಧ್ಯ” ಎಂಬುದನ್ನು ಅವರು ಬಲವಾಗಿ ಹೇಳಿದರು. “ಶಿಕ್ಷಣವು ಸಾರ್ವತ್ರಿಕವಾಗಿರಬೇಕು ಮತ್ತು ಎಷ್ಟೇ ಸಂಖ್ಯೆ ಇದ್ದರೂ ಅದು ಎಲ್ಲರನ್ನೂ ತಲುಪುವಂತೆ ಇರಬೇಕು” ಎಂದು ಹೋರಾಟಗಳನ್ನು ಕಟ್ಟಿದರು. ಅವರ ಹೋರಾಟದ ಪ್ರತಿಫಲವಾಗಿ ಇಂದು ಹೆಣ್ಣು ಮಕ್ಕಳು, ಕೆಳ ಸಮುದಾಯ ಸೇರಿದಂತೆ ಎಲ್ಲರೂ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ನಮ್ಮನ್ನು ಆಳುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂದು ಅಶ್ಲೀಲ ಸಿನಿಮಾ, ಮದ್ಯ,ಮಾದಕ ವಸ್ತುಗಳ ಮಾರಾಟ ಹಾಗೂ ಶಿಕ್ಷಣದಲ್ಲಿ ಮೌಲ್ಯ ಆಧಾರಿತ ಪಠ್ಯದ ಕೊರತೆಯಿಂದಾಗಿ ಮಕ್ಕಳು ದುಶ್ಚಟಗಳಿಗೆ ಬಲಿ ಬೀಳುವಂತೆ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ – ಮಧ್ಯಮ ವರ್ಗದ ಮಕ್ಕಳನ್ನು ಸಂಪೂರ್ಣವಾಗಿ ಶಿಕ್ಷಣದಿಂದ ದೂರ ಮಾಡುತ್ತಿವೆ ಎಂದರು.
ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಸಮುದಾಯವು ಮಹಾತ್ಮ ಜ್ಯೋತಿಬಾ ಫುಲೆ ಅವರ ಸಾರ್ವತ್ರಿಕ ಶಿಕ್ಷಣದ ಕೂಗಿನೊಂದಿಗೆ ನಮ್ಮೂರ ಶಾಲೆ ಉಳಿಸಲು ಮುಂದೆ ಬರಬೇಕು ಎಂದು ಹೇಳಿದರು.
ಈ ಶಿಬಿರದಲ್ಲಿ ಮಕ್ಕಳಿಗಾಗಿ ಕಥೆಗಳು, ಆಟೋಟಗಳು, ಹಾಡುಗಳು ಹಾಗೂ ಇನ್ನಿತರ ಚಟುವಟಿಕೆಗಳು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಎಐಡಿಎಸ್ ಓ ಜಿಲ್ಲಾ ಸದಸ್ಯರಾದ ಭರತ್ ಸೈಯದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


