nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    ತುಮಕೂರು May 5, 2026

    ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ

    By adminMay 5, 2026No Comments2 Mins Read
    sira

    ತುಮಕೂರು: ಶಿಕ್ಷಣದ ರೂವಾರಿ ಮಹಾತ್ಮ ಜ್ಯೋತಿಬಾ ಫುಲೆ ಅವರ 200ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ತುಮಕೂರಿನ ಕೊಡಿಪಾಳ್ಯ ಮತ್ತು ಬಾಳಬಸವನಹಳ್ಳಿಯಲ್ಲಿ ಒಂದು ದಿನದ ಮಕ್ಕಳ ಬೇಸಿಗೆ ಶಿಬಿರ ಮಾಡಲಾಯಿತು.

    “ಮಹಾನ್ ವ್ಯಕ್ತಿಗಳ ಜೀವನ ಹಾಗೂ ಸಂಘರ್ಷ ವನ್ನು ಪರಿಚಯಿಸುವ ಮೂಲಕ, ಅವರು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ಹೇಳಿಕೊಡುವುದರ ಮೂಲಕ ಮಾತ್ರವೇ ಮಕ್ಕಳನ್ನು ನೀತಿ ನೈತಿಕತೆ ಹಾಗೂ ಮೌಲ್ಯಾಧಾರಿತ ವ್ಯಕ್ತಿಯನ್ನಾಗಿ ಮಾಡಲು ಸಾಧ್ಯ” ಎಂದು ಎಐಡಿಎಸ್ಓ ಜಿಲ್ಲಾ ಸೆಕ್ರಟೆರಿಯಟ್ ಸದಸ್ಯರಾದ ಭರತ್ ಅವರು ಶಿಬಿರ ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಶಿಬಿರದ ಮೋದಲ ಅಧಿವೇಶನದಲ್ಲಿ ಶೋಷಣೆ ವಿರುದ್ಧ ಶಿಕ್ಷಣದ ಕಿಡಿ ಹಚ್ಚಿದ ಜ್ಯೋತಿ ರಾವ್  ಫುಲೆ ಅವರ ಜೀವನ ಚರಿತ್ರೆ ಕುರಿತು ಅವರು ಮಾತನಾಡುತ್ತಾ, “ಶತಮಾನಗಳ ಕಾಲ ಕವಿದಿದ್ದ ಅಂಧಕಾರವನ್ನು ಹೊಡೆದೋಡಿಸಲು ಜ್ಞಾನದ ಬೆಳಕನ್ನು ನೀಡಲು ಅವರು ಶಾಲೆಗಳನ್ನು ಆರಂಭಿಸಿದರು. ಶಿಕ್ಷಣದಿಂದ ಮಾತ್ರವೇ ಮನುಷ್ಯರು ವಿಮರ್ಶಾತ್ಮಕ ಧೋರಣೆ ಮತ್ತು ಆತ್ಮ ಸ್ಥೈರ್ಯ ವನ್ನು ಹೊಂದಲು ಸಾಧ್ಯ” ಎಂಬುದನ್ನು ಅವರು ಬಲವಾಗಿ ಹೇಳಿದರು. “ಶಿಕ್ಷಣವು ಸಾರ್ವತ್ರಿಕವಾಗಿರಬೇಕು ಮತ್ತು ಎಷ್ಟೇ ಸಂಖ್ಯೆ ಇದ್ದರೂ ಅದು ಎಲ್ಲರನ್ನೂ ತಲುಪುವಂತೆ ಇರಬೇಕು”  ಎಂದು ಹೋರಾಟಗಳನ್ನು ಕಟ್ಟಿದರು. ಅವರ ಹೋರಾಟದ ಪ್ರತಿಫಲವಾಗಿ ಇಂದು ಹೆಣ್ಣು ಮಕ್ಕಳು, ಕೆಳ ಸಮುದಾಯ ಸೇರಿದಂತೆ ಎಲ್ಲರೂ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ನಮ್ಮನ್ನು ಆಳುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂದು ಅಶ್ಲೀಲ ಸಿನಿಮಾ, ಮದ್ಯ,ಮಾದಕ ವಸ್ತುಗಳ ಮಾರಾಟ ಹಾಗೂ ಶಿಕ್ಷಣದಲ್ಲಿ ಮೌಲ್ಯ ಆಧಾರಿತ ಪಠ್ಯದ ಕೊರತೆಯಿಂದಾಗಿ ಮಕ್ಕಳು ದುಶ್ಚಟಗಳಿಗೆ ಬಲಿ ಬೀಳುವಂತೆ ಮಾಡುತ್ತಿದ್ದಾರೆ. ಇನ್ನೊಂದು ಕಡೆ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಬಡ – ಮಧ್ಯಮ ವರ್ಗದ ಮಕ್ಕಳನ್ನು ಸಂಪೂರ್ಣವಾಗಿ ಶಿಕ್ಷಣದಿಂದ ದೂರ ಮಾಡುತ್ತಿವೆ ಎಂದರು.

    ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿ ಸಮುದಾಯವು ಮಹಾತ್ಮ ಜ್ಯೋತಿಬಾ ಫುಲೆ ಅವರ ಸಾರ್ವತ್ರಿಕ ಶಿಕ್ಷಣದ ಕೂಗಿನೊಂದಿಗೆ ನಮ್ಮೂರ ಶಾಲೆ ಉಳಿಸಲು ಮುಂದೆ ಬರಬೇಕು ಎಂದು ಹೇಳಿದರು.

    ಈ ಶಿಬಿರದಲ್ಲಿ ಮಕ್ಕಳಿಗಾಗಿ ಕಥೆಗಳು, ಆಟೋಟಗಳು, ಹಾಡುಗಳು ಹಾಗೂ ಇನ್ನಿತರ ಚಟುವಟಿಕೆಗಳು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಎಐಡಿಎಸ್ ಓ ಜಿಲ್ಲಾ ಸದಸ್ಯರಾದ ಭರತ್ ಸೈಯದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದುಶ್ಚಟ ಬಿಟ್ಟು ಕ್ರೀಡೆಯಲ್ಲಿ ತೊಡಗಲು ಕರೆ: ಶಾಸಕ ಕೆ.ಎನ್.ರಾಜಣ್ಣ

    May 3, 2026

    ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ

    May 3, 2026

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    Leave A Reply Cancel Reply

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ…

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.