ತುಮಕೂರು: ಕ್ಯಾತ್ಸಂದ್ರ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಸುಮಾರು 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುತ್ತಾರೆ. ಕೋಲುಮುಖ, ಗಿಡ್ಡಮೂಗು, ಕುರುಚಲು ಗಡ್ಡ ಮೀಸೆ ಬಿಟ್ಟಿದ್ದು, ಹುಬ್ಬು ಹಲ್ಲಿನಂತೆ ಕಂಡುಬರುತ್ತಾರೆ. ಈತನ ಮೈಮೇಲೆ ಕಪ್ಪು ಬಿಳಿ ಬಣ್ಣದ ಉದ್ದನೆಯ ಗೆರೆಗಳುಳ್ಳ ತುಂಬು ತೋಳಿನ ಶರ್ಟ್, ಬಿಳಿ ಬೂದು ಬಣ್ಣದ ಪ್ಯಾಂಟ್, ಪಾಚಿ ಬಣ್ಣದ ಟವಲ್ ಧರಿಸಿದ್ದಾರೆ.
ಅದೇ ರೀತಿ ಹಿರೇಹಳ್ಳಿ ದಾಬಸ್ಪೇಟೆ ರೈಲ್ವೆ ನಿಲ್ದಾಣಗಳ ಮಧ್ಯೆ ಚಲಿಸುವ ರೈಲಿಗೆ ಸಿಲುಕಿ ಸುಮಾರು 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುತ್ತಾರೆ. ಕೋಲು ಮುಖ, ಬಿಡ್ಡೆಯ ಮೂಗು, ಗಡ್ಡ ಮೀಸೆ ಬಿಟ್ಟಿರುತ್ತಾರೆ. ಎಡಗಾಲು ಪಾದದ ಮೇಲೆ ಹಳೆಯ ಗಾಯದ ಗುರುತುಗಳಿವೆ. ಇವರ ಮೈಮೇಲೆ ಸಿಮೆಂಟ್ ಕಲರ್ ನ ರೆಡಿಮೇಡ್ ಫುಲ್ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ನೀಲಿ ಬಣ್ಣದ ಅಂಡರ್ ವೇರ್ ಧರಿಸಿದ್ದಾನೆ.
ಈ ಇಬ್ಬರು ಅಪರಿಚಿತ ವ್ಯಕ್ತಿಗಳ ವಾರಸುದಾರರು ಯಾರಾದರೂ ಇದ್ದಲ್ಲಿ ಸಹಾಯಕ ಆರಕ್ಷಕ ಉಪನಿರೀಕ್ಷಕರು, ತುಮಕೂರು ರೈಲ್ವೆ ಪೊಲೀಸ್ ಹೊರ ಉಪಠಾಣೆ, ತುಮಕೂರು. ಹೆಚ್ಚಿನ ಮಾಹಿತಿಗಾಗಿ 9480802142 ಇವರನ್ನು ಸಂಪರ್ಕಿಸುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


