ಪಾವಗಡ: ರಾಜವಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರ್. ಹೊಸಕೋಟೆ ಗ್ರಾಮದ ಯುವಕ ಸಾವಿನಲ್ಲೂ ಸಹ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದು, ಈ ತ್ಯಾಗಿ ಯುವಕನ ಮನೆಗೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಕೆಲ ದಿನಗಳ ಹಿಂದೆ ಪಾವಗಡ ಪಟ್ಟಣದ ಹೊರವಲಯದಲ್ಲಿ ಆರ್. ಹೊಸಕೋಟೆ ಗ್ರಾಮದ 39 ವರ್ಷದ ಯುವಕ ಹನುಮಂತರಾಯಪ್ಪ ಅಪಘಾತಕ್ಕಿಡಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಪಡೆಯುವಾಗ ಚಿಕಿತ್ಸೆ ಫಲಕಾ ರಿಯಾಗದೆ ಸಾವನ್ನಪ್ಪಿದ್ದು, ಸಾವಿನಲ್ಲೂ ಸಹ ಪೋಷಕರು ಯುವಕನ ಮೂತ್ರಪಿಂಡ ಹಾಗೂ ಅಂಗಾಂಗಗಳನ್ನು 4 ರೋಗಿಗಳಿಗೆ ದಾನ ಮಾಡಿ, ಅಮೂಲ್ಯ ಜೀವಗಳನ್ನು ಉಳಿಸಿ ಸಾರ್ಥಕತೆ ಮೆರೆದಿದ್ದಾರೆ.
ಸಾರ್ಥಕತೆ ಮೆರೆದ ಯುವಕನ ಕುಟುಂಬಕ್ಕೆ ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿ ಆರ್ಥಿಕ ಸಹಾಯ ನೀಡಿ, ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಕೈ ಜೋಡಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಸದಸ್ಯರಾದ ಸಾಯಿ, ನಂದೀಶ್, ಜಗದೀಶ್, ನರೇಶ್, ಶಂಕರ್, ಮೋಹನ್, ಮುರಳಿ ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB