nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
    ತಿಪಟೂರು May 23, 2026

    ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ

    By adminMay 23, 2026No Comments2 Mins Read
    k shadakshari

    ತಿಪಟೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಮಾಡದಿದ್ದರೆ, ಅಂತಹವರ ಹುದ್ದೆಯಿಂದ ನಿರ್ಗಮಿಸಬಹುದು ಇಲ್ಲವಾದರೆ, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ. ಷಡಕ್ಷರಿ ಎಚ್ಚರಿಕೆ ನೀಡಿದರು.

    ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರುಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಬಲಪಡಿಸಬೇಕು. ಶೀಘ್ರದಲ್ಲೇ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪಕ್ಷದ ಚಿಹ್ನೆ ಬರಬಹುದಾದ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಕಾರ್ಯಕರ್ತರನ್ನು ಸನ್ನದ್ಧಗೊಳಿಸಬೇಕು. ಯಾರಿಗೆ ಪಕ್ಷ ನೀಡಿರುವ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಿಲ್ಲವೋ ಅವರು ರಾಜೀನಾಮೆ ನೀಡಿ, ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ತಾಲ್ಲೂಕಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ನನ್ನೊಂದಿಗೆ ಚರ್ಚಿಸಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಪಕ್ಷ ಸದೃಢವಾಗಿದ್ದು, ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ವರಿಷ್ಠರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೇನೂರು ಕಾಂತರಾಜು ಮಾತನಾಡಿ, ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸಬೇಕು. ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಶಾಸಕರೊಂದಿಗೆ ನೇರವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.

    ಕೆಪಿಸಿಸಿ ಸದಸ್ಯ ಎ.ಯೋಗೇಶ್ ಮಾತನಾಡಿ, ಪಕ್ಷವನ್ನು ಬಲವಾಗಿ ಕಟ್ಟಲು ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಮ್ಮ ನೆಚ್ಚಿನ ಶಾಸಕರಾದ ಕೆ.ಷಡಕ್ಷರಿ ರವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸದೃಢಗೊಳಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಟಿ.ಎನ್.ಪ್ರಕಾಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜ್, ಪರಿಶಿಷ್ಟ ಜಾತಿ ಘಟಕದ ಕೊಪ್ಪ ಶಾಂತಪ್ಪ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಹೂರ್ ಬಾನು ಸೇರಿದಂತೆ ನಗರಸಭೆ ಮಾಜಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.

    ಮುಖಂಡರುಗಳ ಬೇಸರ:

    ಸರ್ಕಾರ ಬಂದು ಮೂರು ವರ್ಷ ಕಳೆದರೂ ನಮ್ಮ ಸಮಸ್ಯೆಗಳನ್ನು ಯಾರೂ ಕೂಡ ಆಲಿಸುತ್ತಿಲ್ಲ ಹಾಗೂ ಪರಿಹಾರ ದೊರಕಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ. ತಾಲೂಕಿನಲ್ಲಿ ಅಧಿಕಾರಿಗಳ ದರ್ಬಾರ್ ನಿಂದ ಮುಖಂಡರು ಹಾಗೂ ಕಾರ್ಯಕರ್ತರು ರೋಸಿ ಹೋಗಿದ್ದಾರೆ. ತಾಲೂಕಿನಲ್ಲಿ ತಾವುಗಳು ಬಿಟ್ಟರೆ, ಇನ್ಯಾವುದೇ ಸ್ಥಳೀಯ ಸಂಸ್ಥೆ, ಎಪಿಎಂಸಿ ಹಾಗೂ ನಗರಸಭೆ ಆಡಳಿತ ಇಲ್ಲವಾದದ್ದರಿಂದ ಅಧಿಕಾರಿಗಳು ನಮ್ಮ ಮಾತನ್ನು ಕೇಳುತ್ತಿಲ್ಲ. ನಮ್ಮ ಮಾತಿಗೆ ಕಿಂಚಿತ್ತು ಬೆಲೆ ಕೊಡುವ ಬೆಲೆ ಕೊಡದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಸಭೆಯಲ್ಲಿ ಕೆಲವು ಮುಖಂಡರುಗಳು ಬೇಸರ ವ್ಯಕ್ತಪಡಿಸಿ, ಹೀಗೆ ಮುಂದುವರೆದರೆ, ಮತದಾರರಲ್ಲಿ ಮತವನ್ನು ಕೇಳಲು ಕಷ್ಟವಾಗುತ್ತದೆ. ಗ್ರಾಮೀಣ ಮತ್ತು ನಗರ ಭಾಗದಲ್ಲಿ ಪಕ್ಷ ಸಂಘಟನೆ ಮಾಡಲು ಕಷ್ಟವಾಗುತ್ತದೆ. ತಾವುಗಳು (ಶಾಸಕರು) ಕೂಡಲೇ ಅಧಿಕಾರಿಗಳ ಸಭೆ ಕರೆದು, ಸಾರ್ವಜನಿಕರಿಗೆ ಮತ್ತು ಮುಖಂಡರುಗಳಿಗೆ ಸ್ಪಂದಿಸಿ, ಕಚೇರಿಗಳಿಗೆ ಸಾರ್ವಜನಿಕರು, ವಯೋವೃದ್ಧರು, ಮಹಿಳೆಯರು ಮತ್ತು ರೈತರು ಬಂದಾಗ ಅವರಿಗೆ ಆಗಿರುವ ಅನ್ಯಾಯವನ್ನು ಅಥವಾ ಇನ್ಯಾವುದೇ ಸರ್ಕಾರಿ ಕೆಲಸವನ್ನು ಚಾಚು ತಪ್ಪದೆ ಪರಿಹಾರ ರೂಪದಲ್ಲಿ ಮಾಡುವಂತೆ ಸರಿಪಡಿಸುವಂತೆ ಸೂಚಿಸಿ, ಅಧಿಕಾರಿಗಳ ನಡವಳಿಕೆಗಳನ್ನು ಬದಲಾವಣೆ ಮಾಡಿಕೊಳ್ಳುವಂತೆ ತಿಳಿಸಬೇಕೆಂದು ಸಭೆಯಲ್ಲಿ ಮುಖಂಡರುಗಳು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಎಸ್.ಜಾನಕಿ ಅವರ ಸ್ವರ ಮಾಧುರ್ಯಕ್ಕೆ ಸೋಲದವರಿಲ್ಲ: ಮಾದಿಹಳ್ಳಿ ಉಮೇಶ್

    July 24, 2026

    ಹುಟ್ಟುಹಬ್ಬದಂದು ಹಮ್ಮಿಕೊಂಡ ಸಾಮಾಜಿಕ ಕಾರ್ಯಗಳಿಗೆ ತಡೆ: ತಿಪಟೂರು ತಾಲೂಕು ಆಡಳಿತ ವಿರುದ್ಧ ಅಶ್ವಥ್ ನಾರಾಯಣ್ ಆಕ್ರೋಶ

    July 24, 2026

    ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್

    July 23, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ…

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.