nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    ಲೇಖನ May 25, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    By adminMay 25, 2026No Comments2 Mins Read
    ai data centers

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಉಷ್ಣಾಂಶದ ಏರಿಕೆ, ಅಸ್ಥಿರ ಹವಾಮಾನ, ಭಾರೀ ಗುಡುಗು–ಮಿಂಚು ಹಾಗೂ ಆಲಿಕಲ್ಲು ಮಳೆಯಂತಹ ಅಸಾಮಾನ್ಯ ಹವಾಮಾನ ಬದಲಾವಣೆಗಳು ಜನರನ್ನು ಕಂಗೆಡಿಸುತ್ತಿವೆ. ನಗರದಲ್ಲಿ ಹೆಚ್ಚುತ್ತಿರುವ ಕಾಂಕ್ರೀಟ್ ಕಟ್ಟಡಗಳು, ವಾಹನಗಳ ಸಂಖ್ಯೆ ಮತ್ತು ಹಸಿರು ಪ್ರದೇಶಗಳ ಕುಸಿತದ ಜೊತೆಗೆ ಈಗ ವೇಗವಾಗಿ ವಿಸ್ತರಿಸುತ್ತಿರುವ ಕೃತಕ ಬುದ್ಧಿಮತ್ತೆ (AI) ಡೇಟಾ ಸೆಂಟರ್‌ ಗಳು ನಗರದ “ಹೀಟ್ ಐಲ್ಯಾಂಡ್” (Heat Island) ಪರಿಣಾಮವನ್ನು ತೀವ್ರಗೊಳಿಸುತ್ತಿವೆ ಎಂದು ಪರಿಸರ ತಜ್ಞರು ಗಂಭೀರ ಎಚ್ಚರಿಕೆ ನೀಡಿದ್ದಾರೆ.

    ಮಾಧ್ಯಮ ವರದಿಗಳ ಆಧಾರದ ಪ್ರಕಾರ,  ಡೇಟಾ ಸೆಂಟರ್‌ ಎಂದರೆ ಅತಿ ದೊಡ್ಡ ಗಣಕ ಶಕ್ತಿ (Computational Power) ಹೊಂದಿರುವ ವಿಶೇಷ ತಾಂತ್ರಿಕ ಕೇಂದ್ರ. ಕೃತಕ ಬುದ್ಧಿಮತ್ತೆ (AI) ಹಾಗೂ ಮೆಷಿನ್ ಲರ್ನಿಂಗ್ (Machine Learning) ಮಾದರಿಗಳಿಗೆ ತರಬೇತಿ ನೀಡಲು, ಅವುಗಳನ್ನು ಕಾರ್ಯಗತಗೊಳಿಸಲು ಹಾಗೂ ವೇಗವಾಗಿ ಡೇಟಾ ಸಂಸ್ಕರಣೆ ಮತ್ತು ವಿಶ್ಲೇಷಣೆ ಮಾಡಲು ಈ ಕೇಂದ್ರಗಳನ್ನು ಬಳಸಲಾಗುತ್ತದೆ. ರಾಜ್ಯದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆಯ ಮಾಹಿತಿ ಪ್ರಕಾರ, ಪ್ರಸ್ತುತ ಬೆಂಗಳೂರಿನಲ್ಲಿ 31 ಡೇಟಾ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ ಎರಡು ಹೊಸ ಸೆಂಟರ್‌ಗಳು ನಿರ್ಮಾಣ ಹಂತದಲ್ಲಿವೆ. ಬೆಂಗಳೂರನ್ನು ಹೊರತುಪಡಿಸಿದರೆ ಸದ್ಯ ಮಂಗಳೂರಿನಲ್ಲಿ ಮಾತ್ರ ಒಂದು ಡೇಟಾ ಸೆಂಟರ್ ಇದೆ. ಮುಂದಿನ ದಿನಗಳಲ್ಲಿ ಇವುಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

    ಈ AI ಡೇಟಾ ಸೆಂಟರ್‌ಗಳು ನಿರಂತರವಾಗಿ ಕಾರ್ಯನಿರ್ವಹಿಸಲು ಕೋಟ್ಯಂತರ ಲೀಟರ್ ನೀರು ಹಾಗೂ ಅಪಾರ ಪ್ರಮಾಣದ ವಿದ್ಯುತ್ ಅಗತ್ಯವಿರುತ್ತದೆ.  ಸಾವಿರಾರು ಸರ್ವರ್‌ಗಳು ದಿನದ 24 ಗಂಟೆಯೂ ಕೆಲಸ ಮಾಡುವುದರಿಂದ ಭಾರೀ ಪ್ರಮಾಣದ ಉಷ್ಣ (Heat) ಉತ್ಪತ್ತಿಯಾಗುತ್ತದೆ. ಈ ಸರ್ವರ್‌ಗಳನ್ನು ತಂಪಾಗಿಡಲು (Cooling) ಅತ್ಯಾಧುನಿಕ ತಂತ್ರಜ್ಞಾನ ಬಳಸಲಾಗುತ್ತದೆ. ಜಾಗತಿಕ ಅಂಕಿಅಂಶಗಳ ಪ್ರಕಾರ, 1 ಮೆಗಾವಾಟ್ ಸಾಮರ್ಥ್ಯದ AI ಡೇಟಾ ಸೆಂಟರ್ ವರ್ಷಕ್ಕೆ ಸರಾಸರಿ 2.5 ಕೋಟಿ ಲೀಟರ್ ನೀರನ್ನು ಬಳಸುತ್ತದೆ. 1 ಮೆಗಾವಾಟ್ ಸಾಮರ್ಥ್ಯದ ಡೇಟಾ ಸೆಂಟರ್ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಿದರೆ ಪ್ರತಿ ಗಂಟೆಗೆ ಸುಮಾರು 1,000 ಯೂನಿಟ್ ವಿದ್ಯುತ್ ಬಳಸುತ್ತದೆ. ಅಂದರೆ ದಿನಕ್ಕೆ ಬರೋಬ್ಬರಿ 24,000 ಯೂನಿಟ್ ವಿದ್ಯುತ್ ವ್ಯಯವಾಗುತ್ತದೆ.

    “AI ಡೇಟಾ ಸೆಂಟರ್‌ಗಳು ಕೇವಲ ವಿದ್ಯುತ್ ಮತ್ತು ನೀರನ್ನು ಮಾತ್ರ ಬಳಸುವುದಿಲ್ಲ, ಅವುಗಳಿಂದ ಹೊರಬರುವ ಎಲೆಕ್ಟ್ರಾನಿಕ್ ತ್ಯಾಜ್ಯವೂ (E-waste) ದೊಡ್ಡ ಸಮಸ್ಯೆಯಾಗಿದೆ. ಎಲ್ಲ ಕ್ಷೇತ್ರಗಳಿಗೂ ಅನಿಯಂತ್ರಿತವಾಗಿ AI ಬಳಸುವ ಅಗತ್ಯವಿಲ್ಲ. ಅಗತ್ಯವಿರುವ ಪ್ರಮುಖ ಕ್ಷೇತ್ರಗಳಿಗೆ ಮಾತ್ರ ಇದರ ಬಳಕೆಯನ್ನು ಮಿತಿಗೊಳಿಸಲು ಸರ್ಕಾರ ವಿಶೇಷ ನೀತಿ ರೂಪಿಸಬೇಕು” ಎಂದು ಸಲಹೆ ನೀಡಿದ್ದಾರೆ.


    ಅಲಯನ್ಸ್ ವಿಶ್ವವಿದ್ಯಾಲಯದ ನೈಸರ್ಗಿಕ ಪರಿಹಾರಗಳ ಕೇಂದ್ರದ ಮುಖ್ಯಸ್ಥ ಮಿಥುನ್ ಹನುಮೇಶ್ ಕಳವಳ ವ್ಯಕ್ತಪಡಿಸಿ, “ಬೆಂಗಳೂರು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಡೇಟಾ ಸೆಂಟರ್‌ಗಳು ದಿನಕ್ಕೆ ಕೋಟ್ಯಂತರ ಲೀಟರ್ ನೀರು ಬಳಸಿದರೆ ಪರಿಸ್ಥಿತಿ ಇನ್ನಷ್ಟು ಕೈಮೀರಬಹುದು. ಜಾಗತಿಕವಾಗಿ ಅನೇಕ ದೇಶಗಳಲ್ಲಿ ಡೇಟಾ ಸೆಂಟರ್‌ಗಳನ್ನು ಕಡಲ ತೀರ ಪ್ರದೇಶಗಳು ಅಥವಾ ತಂಪಾದ ಹವಾಮಾನ ಇರುವಲ್ಲಿ ನಿರ್ಮಿಸಲಾಗುತ್ತಿದೆ” ಎಂದಿದ್ದಾರೆ.

    ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಈ ಹಿಂದೆ ಎಚ್ಚರಿಸಿದ್ದು, “ನಾವು ಚಾಟ್‌ ಜಿಪಿಟಿಗೆ ಕೇವಲ ಐದು ಪ್ರಶ್ನೆಗಳನ್ನು ಕೇಳಿದರೂ ಸುಮಾರು 500 ಮಿಲಿ ನೀರು ಬಳಕೆಯಾಗುತ್ತದೆ. ಹೀಗಾಗಿ ಲಕ್ಷಾಂತರ ಜನ ಬಳಸುವಾಗ ಇದರ ಒಟ್ಟು ನೀರಿನ ಬಳಕೆ ಎಷ್ಟಿರಬಹುದು ಎಂಬುದನ್ನು ಯೋಚಿಸಬೇಕು” ಎಂದಿದ್ದರು.

    ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆಯ ಕಾರ್ಯದರ್ಶಿ ಮಂಜುಳಾ ಎನ್. ಅವರ ಪ್ರಕಾರ, “ಡೇಟಾ ಸೆಂಟರ್‌ ಗಳು ಇಂದಿನ ತಂತ್ರಜ್ಞಾನ ಯುಗಕ್ಕೆ ಅನಿವಾರ್ಯ. ಆದರೆ, ಹೊಸದಾಗಿ ರೂಪಿಸಲಾಗುತ್ತಿರುವ ನೀತಿಯಲ್ಲಿ ನೀರು ಮತ್ತು ವಿದ್ಯುತ್‌ ನ ಸಮರ್ಥ ಬಳಕೆ, ಶಾಖ ಹೊರಸೂಸುವಿಕೆ ನಿಯಂತ್ರಣ ಹಾಗೂ ಪರಿಸರದ ಮೇಲಿನ ಪರಿಣಾಮಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

    ಈಗಾಗಲೇ ಟ್ರಾಫಿಕ್, ಮಾಲಿನ್ಯ ಹಾಗೂ ತಾಪಮಾನ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿಗೆ, AI ಡೇಟಾ ಸೆಂಟರ್‌ ಗಳ ಅತಿಯಾದ ವಿಸ್ತರಣೆ ಪರಿಸರ ಸಮತೋಲನಕ್ಕೆ ಹೊಸ ಸವಾಲಾಗಿ ಪರಿಣಮಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಔರಾದ್ (ಬೀದರ್): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ಔರಾದ್ ತಾಲೂಕು ಘಟಕದ ವತಿಯಿಂದ ಆಯೋಜಿಸಲಾಗಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ…

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ

    July 28, 2026

    ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.