nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    ಕೊರಟಗೆರೆ June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    By adminJune 12, 2026No Comments2 Mins Read
    lokayukta
    ಕೊರಟಗೆರೆ ತಾಪಂ ಸಭಾಂಗಣದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಲೋಕಾಯುಕ್ತ ಎಸ್ಪಿ ವಿವೇಕಾನಂದ ಗಿ.ತುಳಸಿಗೇರಿ.

    ಕೊರಟಗೆರೆ: ಗ್ರಾಮೀಣ ಭಾಗದಿಂದ ಸಮಸ್ಯೆಗಳನ್ನ ತರುವ ಜನಸಾಮಾನ್ಯರ ಸಮಸ್ಯೆಗಳಿಗೆ ಅಧಿಕಾರಿವರ್ಗ ಬಗೆಹರಿಸಿದ್ರೇ ಲೋಕಾಯುಕ್ತ ಇಲಾಖೆಗೆ ಅರ್ಜಿಗಳೇ ಬರೋದಿಲ್ಲ. ಜನಸಾಮಾನ್ಯರ ಅರ್ಜಿಗಳನ್ನು ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಜವಾಬ್ದಾರಿ ಎಂದು ತುಮಕೂರು ಲೋಕಾಯುಕ್ತ ಎಸ್ಪಿ ವಿವೇಕಾನಂದ ಗಿ.ತುಳಸಿಗೇರಿ ಕಿವಿಮಾತು ಹೇಳಿದರು.

    ಕೊರಟಗೆರೆ ಪಟ್ಟಣದ ತಾಪಂ ಸಭಾಂಗಣದಲ್ಲಿ ತುಮಕೂರು ಲೋಕಾಯುಕ್ತ ಇಲಾಖೆಯಿಂದ ಬುಧವಾರ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದುಕೊರತೆ ಸಭೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಕಲ್ಲುಕ್ವಾರೆ ಮತ್ತು ಕಲ್ಲುಬಂಡೆ ಬ್ಸಾಸ್ಟ್ನಿಂದ ಬುಕ್ಕಾಪಟ್ಟಣ ರೈತರಿಗೆ ಸಮಸ್ಯೆ, ರೈತರ ಜಮೀನು ದಾಖಲೆ ಇಲ್ಲದೇ ಅಕ್ರಮವಾಗಿ ಪರಬಾರೇ, ಸುವರ್ಣಮುಖಿ ನದಿಯ ಒತ್ತುವರಿ, ರೇಷನ್ ಕಾರ್ಡಿಗಾಗಿ ಅಲೆದಾಟ, ಮನೆಗಳ ಇಸ್ವತ್ತು ಸಮಸ್ಯೆ, ಸಾಗುವಳಿ ಚೀಟಿಯಿಂದ ಪಹಣಿ, ರೈತರ ಜಮೀನು ಸರ್ವೆಗೆ ಮೀನಾಮೇಷ ಸೇರಿದಂತೆ ಹತ್ತಾರು ಸಮಸ್ಯೆಗಳು ಲೋಕಾಯುಕ್ತ ಅಧಿಕಾರಿಗಳ ಗಮನ ಸೆಳೆದವು.

    ಸಭೆಯಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧ್ಯಕ್ಷ ಡಾ.ಸಂತೋಷ್, ಪೊಲೀಸ್ ಉಪಾಧ್ಯಕ್ಷ ಮಂಜುನಾಥ, ನಿರೀಕ್ಷಕ ರಾಜು.ಟಿ, ತಹಶೀಲ್ದಾರ್ ಮಂಜುನಾಥ, ತಾಪಂ ಇಓ ಅಪೂರ್ವ, ಸಿಪಿಐ ಪುರುಷೋತ್ತಮ್, ಪುರಸಭೆ ಸಿಇಓ ಉಮೇಶ್, ಸಮಾಜ ಕಲ್ಯಾಣ ಯಮುನಾ, ಸಿಡಿಪಿಓ ಗಂಗಾಧರ್, ಕೆಆರ್‌ಐಡಿಎಲ್ ಎಇಇ ಸಿಂಧು, ಬಿಸಿಎಂ ಅನಂತರಾಜು ಸೇರಿದಂತೆ ಇತರರು ಇದ್ದರು.

    56 ಜನರಿಂದ ಅರ್ಜಿಗಳು ಸ್ವೀಕಾರ:

    ಜಮೀನು ಸರ್ವೆ, ನದಿ–ರಸ್ತೆ ಒತ್ತುವರಿ, ಅಕ್ರಮ ಕಟ್ಟಡಗಳ ನಿರ್ಮಾಣ, ಪಡಿತರ ಚೀಟಿ ಸಮಸ್ಯೆ, ಗ್ರಾಪಂ ಇಸ್ವತ್ತು, ಕಲ್ಲುಕ್ವಾರೆ ಶಬ್ದ, ಮಾಹಿತಿನೇ ನೀಡೋದಿಲ್ಲ, ಪಹಣಿ ಸಮಸ್ಯೆ, ಸಾಗುವಳಿ ಚೀಟಿ ಸೇರಿದಂತೆ ಗಣಿ ಮತ್ತು ಭೂವಿಜ್ಞಾನ, ಆಹಾರ, ಸರ್ವೆ, ಕಂದಾಯ, ಗ್ರಾಪಂಗೆ ಸೇರಿದ ೫೬ಜನರಿಂದ ಸಮಸ್ಯೆಗಳ ಅರ್ಜಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿ ಕೆಲವನ್ನು ಸ್ಥಳದಲ್ಲೇ ಬಗೆಹರಿಸಿ ಇನ್ನೂಳಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ನದಿ ಒತ್ತುವರಿ ತೆರವಿಗೆ ಮೀನಾಮೇಷ:

    ಕೊರಟಗೆರೆ ಪಟ್ಟಣದಲ್ಲಿ ಹಾದುಹೋಗುವ ಸುವರ್ಣಮುಖಿ ನದಿಯು ಮುಕ್ಕಾಲು ಭಾಗದಷ್ಟು ಜಮೀನು ಖಾಸಗಿ ವ್ಯಕ್ತಿಗಳ ಒತ್ತುವರಿಗೆ ಬಲಿಯಾಗಿದೆ. ಇದರಲ್ಲಿ ಖಾಸಗಿ ಕಟ್ಟಡಗಳನ್ನ ನಿರ್ಮಿಸಿಕೊಂಡಿರುತ್ತಾರೆ ಹನುಮಂತಪುರ ಸರ್ವೆ ನಂ.17, 18ಮತ್ತು ೧೯ ಅಕ್ರಮವಾಗಿ 160 ಕ್ಕೂ ಅಧಿಕ 2012 ಕೂಡ ಅನುಮತಿ ಪಡೆದು ಇಲ್ಲಿಯವರೆಗೂ ಕಾಮಗಾರಿ ಪೂರ್ಣಗೊಳ್ಳದೆ ಅನಧಿಕೃತವಾಗಿ ಇಸ್ವತ್ತು ಮಾಡಲಾಗಿದೆ ಮತ್ತು ಬೋಡಬಂಡೇನಹಳ್ಳಿ ಸರ್ವೆ ನಂ.೪೪ರಲ್ಲಿ ಅಕ್ರಮವಾಗಿ ಹತ್ತಾರು ಎಕರೇ ಅಕ್ರಮ ವಾಗಿ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಮಾಡಲಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳ ಹಾಗೂ ಒತ್ತುವರಿ ಮಾಡಿಕೊಂಡಿರುವ ಖಾಸಗಿ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು, ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ಭೂಕಬಳಿಕೆ ನ್ಯಾಯಮಂಡಳಿಗೆ ದೂರು ನೀಡಿ ಕ್ರಮ ಕೈಗೊಳ್ಳದೆ ಹೋದರೆ ತಾಲೂಕು ಕಚೇರಿ ಮುಂದೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದ್ದಾರೆ.

    ಮಠದ ಆಸ್ತಿ ಅಕ್ರಮ ಪರಬಾರೆ:

    ಮುಜರಾಯಿ ಇಲಾಖೆಯ ಮಠದ ಧಾರ್ಮಿಕ ಕಾರ್ಯಗಳಿಗೆ ನೀಡಿದ ಕೋಡ್ಲಹಳ್ಳಿಯ ಬಳ್ಳಾರಿ ಉಜ್ಜಯಿನಿ ಪೀಠದ ಖಾಸಾ ಶಾಖಾ ಸತ್ಯಧರ್ಮದ ಮಠದ ಸುಮಾರು 18 ಎಕರೇ ಇನಾಂ ಭೂಮಿ ಖಾಸಗಿ ವ್ಯಕ್ತಿಗಳ ಹೆಸರಿಗೆ ಅಕ್ರಮವಾಗಿ ವರ್ಗಾವಣೆ ಮತ್ತು ಕೋಡ್ಲಹಳ್ಳಿಯಲ್ಲಿ ಇಲ್ಲದೇ ಇರುವ ದೇವರ ಹೆಸರಿನಲ್ಲಿ 15 ಕೋಟಿಗೂ ಅಧಿಕ ತಸ್ತಿಕ್ ಹಣವನ್ನು ಬೆಂಗಳೂರಿನ ಉತ್ತಾರಾಧಿ ಮಠಕ್ಕೆ ಅನಧಿಕೃತವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಹೈಕೋರ್ಟ್ ವಕೀಲ ಪರಮೇಶಾರಾಧ್ಯ ಲೋಕಾಯುಕ್ತ ಎಸ್ಪಿಗೆ ದೂರು ಸಲ್ಲಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.