nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    • ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ
    • ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ
    • ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ
    ಜಿಲ್ಲಾ ಸುದ್ದಿ June 16, 2026

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    By adminJune 16, 2026No Comments2 Mins Read
    bidar.jpg

    Provided by
    Provided by

    ಔರಾದ್: ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಆಯ್ಕೆಯಾಗಿದ್ದಾರೆ.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜಿಲ್ಲಾ ಘಟಕದ ವತಿಯಿಂದ ಗೌಪ್ಯ ಮತದಾನದ ಮೂಲಕ ಚುನಾವಣೆ ನಡೆಸಲಾಗಿದ್ದು, ಫಲಿತಾಂಶವನ್ನು ಜಿಲ್ಲಾ ಅಧ್ಯಕ್ಷ ಆನಂದ್ ದೇವಪ್ಪ ಪ್ರಕಟಿಸಿದರು. ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ್ ಮೊಕ್ತೆದಾರ್ ಚುನಾಯಿತರಾದರೆ, ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಅವಿರೋಧವಾಗಿ ಆಯ್ಕೆಯಾದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಆನಂದ್ ದೇವಪ್ಪ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸವಿದ್ದು, ಪತ್ರಕರ್ತರ ಹಿತಾಸಕ್ತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

    ಸಂಘದ ವಿರುದ್ಧ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡದೆ, ಎಲ್ಲ ಪತ್ರಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಬೀದರದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಲು ಜಿಲ್ಲೆಯ ಪತ್ರಕರ್ತರ ಸಹಕಾರವೇ ಕಾರಣವಾಗಿದೆ ಎಂದು ಅವರು ತಿಳಿಸಿದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಸ್ವಾಮಿ ಮಾತನಾಡಿ, ಸಂಘದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಪತ್ರಕರ್ತರಿಗೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ತಲುಪಿಸಲು ಸಂಘವು ಸದಾ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

    ಚುನಾವಣೆಯ ಬಳಿಕ ಎರಡನೇ ಅವಧಿಗೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶಿವಾನಂದ್ ಮೊಕ್ತೇದಾರ್ ಹಾಗೂ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ದೇಶಮುಖ ಅವರನ್ನು ಸತ್ಕರಿಸಿ ಅಭಿನಂದಿಸಲಾಯಿತು

    ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರಥ್ವಿರಾಜ್ ಎಸ್, ಕಾರ್ಯದರ್ಶಿಗಳಾದ ಸಂತೋಷ ಚೆಟ್ಟೆ, ಸ್ವಾಮಿದಾಸ್ ನಾಗುರೆ, ಕಾರ್ಯಕಾರಿ ಸದಸ್ಯರಾದ ಶರಣಪ್ಪ ಚಿಟಮೆ, ಶ್ರೀಕಾಂತ ಪಾಟೀಲ, ಚನ್ನಬಸವ ಮೊಕ್ತೆದಾರ್, ಮಲ್ಲಪ್ಪ ಗೌಡ, ಸುನಿಲ್ ಜಿರೋಬೆ, ಮನ್ಮಥ ಸ್ವಾಮಿ, ಸುಧೀರ ಪಾಂಡ್ರೆ, ರವೀಂದ್ರ ಮೊಕ್ತೆದಾರ್, ಅಹ್ಮದ್ ಜಂಬಗಿ, ಲಕ್ಷ್ಮಣ ರಾಠೋಡ್, ರವಿಕುಮಾರ್ ಶಿಂಧೆ, ಅವಿನಾಶ ಪಾಂಡ್ರೆ, ಸೂರ್ಯಕಾಂತ ಎಕಲಾರ, ಶಿವಕುಮಾರ ಸ್ವಾಮಿ, ಅಂಬ್ರೇಶ ಚಿದ್ರೆ, ರಾಜಕುಮಾರ ಚಾಂಬೋಳೆ, ರವಿಕುಮಾರ್ ಮಠಪತಿ, ಅಮರ ಸ್ವಾಮಿ, ಅಂಬಾದಾಸ್ ನಳಗೆ, ಅಮರನಾಥ, ವಿನೋದ ಚಿದ್ರೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    ಔರಾದ್: ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನಿಲಕುಮಾರ್ ದೇಶಮುಖ ಆಯ್ಕೆಯಾಗಿದ್ದಾರೆ.…

    ಜೂ.19: ಪಾವಗಡದಲ್ಲಿ ಜ್ಞಾನ ಬೋಧಿನಿ ಶಾಲೆಯ SPL ಚುನಾವಣೆ

    June 16, 2026

    ವೈ.ಎನ್.ಹೊಸಕೋಟೆ: ಲಕ್ಷ್ಮೀನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಿಜಿಟಲ್ ಎಕ್ಸ್–ರೇ ಘಟಕ ಆರಂಭ

    June 16, 2026

    ಸೋಮನ ಬ್ಯಾಂಕ್ ಖಾತೆ ಹ್ಯಾಕ್ ಆಗೋಯ್ತ್..| ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 4)

    June 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.