ಸಿರಾ: ಮೀನು ಒಂದು ಪೌಷ್ಟಿಕ ಮತ್ತು ಪೋಷಕ ಆಹಾರ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು. ನಗರದ ಮೀನುಗಾರಿಕಾ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ಸ್ಯ ಆಶ್ರಯ ಯೋಜನೆಯಡಿಯಲ್ಲಿ ಮೀನುಗಾರರಿಗೆ ಮನೆಗಳ ಹಕ್ಕು ಪತ್ರ ಹಾಗೂ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿರಾ ಭಾಗದಲ್ಲಿ ಈ ಹಿಂದೆ ಮಳೆ ಬಂದು ಕೆರೆಗಳು ತುಂಬಿದಾಗ ಮಾತ್ರ ಮೀನಿನ ಮರಿಗಳನ್ನು ಸಾಕುವ ಮೂಲಕ ಮೀನು ಕೃಷಿ ನಡೆದಿತ್ತು. ಇದೀಗ ಕಳ್ಳಂಬೆಳ್ಳ, ಸಿರಾ, ಮುದ rollerskates ಸೇರಿದಂತೆ ಅನೇಕ ಕೆರೆಗಳಿಗೆ ಹೇಮಾವತಿಯ ನೀರು ಹರಿದ ಪರಿಣಾಮ ತಾಲೂಕಿನ ಬಹುತೇಕ ಕೆರೆಗಳಲ್ಲಿ ಮೀನು ಸಾಕಾಣಿಕೆಯು ಹೆಚ್ಚಾಗಿ ನಡೆಯುತ್ತಿದ್ದು ಮೀನು ಸಾಕಾಣಿಕೆದಾರರು ಆರ್ಥಿಕವಾಗಿ ಸದೃಢಗೊಳ್ಳಲು ಕಾರಣವಾಗಿದೆ ಎಂದರು.
ಸಿರಾ ಭಾಗದಲ್ಲಿ ಅತಿ ಹೆಚ್ಚು ಮೀನು ಸಾಕಾಣಿಕೆಗೆ ಒತ್ತು ಸಿಗಲು ದಯಾನಂದ ಸಾಗರ್ ಅವರಂತಹ ಅನೇಕ ಮಂದಿಯ ಮೀನುಗಾರಿಕೆಯ ಕಾಳಜಿ ಕಾರಣವಾಗಿದೆ. ವಿವಿಧ ಉತ್ತಮ ತಳಿಯ ಮೀನು ಮರಿಗಳ ಸಾಕಣಿಕೆಗೆ ಗುತ್ತಿಗೆದಾರರು ಮುಂದಾಗಬೇಕು. ಮೀನುಗಾರರಿಗೆ ವಿವಿಧ ಯೋಜನೆಗಳ ಸೌಲಭ್ಯ ಲಭಿಸುವಂತಾಗಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಪ್ರಮುಖವಾಗಿ ಸಮುದಾಯ ಕೆರೆಗಳು, ಕೃಷಿ ಹೊಂಡ, ತಡೆ ಅಣೆಕಟ್ಟು, ಗೋಕಟ್ಟೆ, ನಾಲಾಬದು, ಬೋರ್ವೆಲ್ ಆಧಾರಿತ ನೀರು ಸಂಗ್ರಹಣಾ ಕೊಳಗಳು, ನೀರಾವರಿ ಬಾವಿಗಳು ಹಾಗೂ ಪಾಂಡ್ ಗಳು ಮುಂತಾದ ಜಲ ಸಂಪನ್ಮೂಲಗಳಲ್ಲಿ ಮೀನು ಸಾಕಣೆಗೆ ವಿಪುಲ ಅವಕಾಶವಿದೆ. ಈ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಂಡು ಮೀನು ಸಾಕಣೆ ಮಾಡಿದರೆ ಗ್ರಾಮೀಣ ಮಟ್ಟದಲ್ಲಿ ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಆಹಾರ ದೊರೆತಂತಾಗುತ್ತದೆಯಲ್ಲದೆ ರೈತರ ಆರ್ಥಿಕ ಅಭಿವೃದ್ಧಿಗೂ ಸಹ ಸಹಕಾರಿಯಾಗುತ್ತದೆ ಎಂದು ಜಯಚಂದ್ರ ತಿಳಿಸಿದರು.
ಜಿಲ್ಲಾ ಮೀನುಗಾರಿಕಾ ಉಪ ನಿರ್ದೇಶಕ ನಂಜುಂಡಪ್ಪ, ಸಿರಾ ಸಹಾಯಕ ನಿರ್ದೇಶಕ ಕೆ.ಕೆ.ಮಹೇಶ್ವರಪ್ಪ, ಮಹರ್ಷಿ ಪ.ಪಂ ಮೀನು ಉತ್ಪಾದನೆ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಪಂಜಗಾನಹಳ್ಳಿ ದಯಾನಂದ ಸಾಗರ್, ಸಪ್ತಗಿರಿ ಬಡಾವಣೆಯ ತಿಪ್ಪೇಸ್ವಾಮಿ ಸೇರಿದಂತೆ ಅನೇಕ ಪ್ರಮುಖರು ಇದ್ದರು. ಮೀನಿನ ಬಲೆ, ದೋಣಿ ಸೇರಿದಂತೆ ವಿವಿಧ ಸವಲತ್ತುಗಳನ್ನು ಮೀನುಗಾರರಿಗೆ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಯಿತು.
ಮೀನಿನ ಮಾಂಸ ನಮ್ಮ ದೇಹದ ದೃಢತೆಗೆ ಮತ್ತು ಆರೋಗ್ಯಕ್ಕೆ ಅಗತ್ಯವಾದ ಸಸಾರಜನಕ, ಜೀವಸತ್ವ ಮತ್ತು ಲವಣಗಳನ್ನು ಒದಗಿಸುತ್ತದೆ. ಇತರೆ ಮಾಂಸಗಳಿಗಿಂತ ಶ್ರೇಷ್ಠ ಮತ್ತು ಕಡಿಮೆ ವೆಚ್ಚದಲ್ಲಿ ದೊರೆಯುತ್ತದೆ. ಸಿರಾ ಭಾಗದಲ್ಲಿ ಹೇಮಾವತಿಯ ನೀರು ಕೆರೆಗಳನ್ನು ತುಂಬಿದ ಪರಿಣಾಮ ಮೀನು ಕೃಷಿ ಹೆಚ್ಚಾಗಿದ್ದು ಸಿರಾ ನಗರದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.
| ಟಿ.ಬಿ.ಜಯಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


