ಗುಬ್ಬಿ: ರೈತರ ಸಮಸ್ಯೆಯನ್ನು ಆಲಿಸಲು ಕಂದಾಯ ಅಧಿಕಾರಿಗಳು ಪ್ರತಿನಿತ್ಯ ಪೋತಿ ಖಾತೆ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಕಡಬ ಹೋಬಳಿ ಕೊಪ್ಪ ಗ್ರಾಮ ಪಂಚಾಯತ್ನಲ್ಲಿ ನಡೆಯುತ್ತಿದ್ದ ಪೋತಿ ಖಾತೆ ಆಂದೋಲನಕ್ಕೆ ಆಗಮಿಸಿ ಮಾತನಾಡಿದ ಅವರು ಕಂದಾಯ ಸಚಿವರು, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಸೂಚನೆಯ ಮೇರೆಗೆ ಸಾರ್ವಜನಿಕ ಸಮಸ್ಯೆಗಳಿದ್ದಲ್ಲಿ ನೇರವಾಗಿ ತೆರಳಿ ಸಮಸ್ಯೆಗಳನ್ನು ಆಲಿಸುವಂತೆ ಸೂಚಿಸಿದ ಹಿನ್ನೆಲೆ ಗುಬ್ಬಿ ತಾಲೂಕಿನಲಿ ಪ್ರವಾಸ ಮಾಡುತ್ತಿದ್ದು, ಕಂದಾಯ ಇಲಾಖೆ ವತಿಯಿಂದ ಪೋತಿ ಖಾತೆ ಆಂದೋಲನ ಅಭಿಯಾನ ಮಾಡಲಾಗುತ್ತಿದೆ. ಜಿಲ್ಲೆಯ 34 ಹೋಬಳಿಗಳಲ್ಲಿ 6 ಸಾವಿರ ಬಾಕಿ ಇದ್ದು ಜಿಲ್ಲೆಯಲ್ಲಿ ಯಾರು ಅಲೆದಾಟ ಮಾಡದಂತೆ ಮಾಡುವ ನಿಟ್ಟಿನಲ್ಲಿ ರೈತರ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡಬೇಕಿದೆ. ಪೋತಿ ಖಾತೆಗೆ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಆಧಾರ್ ನೀಡುವಂತೆ ಮಾಹಿತಿ ನೀಡಿ ವಂಶವೃಕ್ಷವನ್ನು ನಾಡ ಕಚೇರಿಯಲ್ಲಿ ನೀಡಲಿದ್ದು, ಇದರಿಂದ ವಂಚಿತರಾದರೆ ಸಿವಿಲ್ ಗೆ ಹೋಗಬೇಕಾಗುತ್ತದೆ ಎಂದು ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಪೋತಿ ಖಾತೆ ಬಗ್ಗೆ ಪ್ರತಿನಿತ್ಯ ರಿವೀವ್ ಮಾಡಲಾಗುತ್ತಿದ್ದು, ಡಿಸೆಂಬರ್ ಒಳಗಾಗಿ ಸಂಪೂರ್ಣವಾಗಿ ಮುಗಿಸುವ ಆಶಯವಿದೆ. ಪೋತಿ ಖಾತೆ ಮಾಡಿಸಿಕೊಳ್ಳದೆ ಹೋದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುವರು, ಈಗಾಗಲೇ ಒಂದುವರೆ ಲಕ್ಷ ಪೋತಿ ಖಾತೆ ಆಗಿದ್ದು, ಕಂದಾಯ ಗ್ರಾಮವನ್ನು ಮಾಡಿ ಗಿನ್ನಿಸ್ ಬುಕ್ ನಲ್ಲಿ ದಾಖಲು ಆಗಿದೆ ಎಂದು ತಿಳಿಸಿದರು.
ಜೂನ್ 30 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭ ಆಗಲಿದ್ದು, ಆಯಾ ಬಿ ಎಲ್ ಓ ಗಳು ಮತದಾರರ ಮನೆ ಮನೆಗೆ ತೆರಳಿ ಅವರಿಗೆ ಎರಡು ಫಾರಂ ನೀಡಿ ಅದನ್ನು ತುಂಬಲು ಸಹರಿಸುತ್ತಾರೆ ಈಗಾಗಲೇ ಈ ಬಗ್ಗೆ ಇವರಿಗೆ ತರಬೇತಿ ನೀಡಲಾಗಿದೆ ಎಂದರು.
ಜೊತೆಗೆ ಈಗಾಗಲೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಭೆಯನ್ನು ಮಾಡಿ ಅರಿವು ಮೂಡಿಸುವ ಕಾರ್ಯವನ್ನು ಜಿಲ್ಲೆಯಲ್ಲಿ ತಾಲೂಕಿನಲ್ಲಿಯೂ ಮಾಡಿದ್ದು, ಬಿಎಲ್ ಒ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನಿಮಿರೆಷನ್ ಫಾರಂ ಎರಡೆರಡು ನೀಡಲಿದ್ದು, ಅದನ್ನು ಭರ್ತಿ ಮಾಡುವ ಬಗ್ಗೆ ಕಾರ್ಯಗಾರವನ್ನು ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 98.4 ರಷ್ಟು ಪ್ರೋಲಜಿನಿ ಮ್ಯಾಪಿಂಗ್ ಆಗಿದ್ದು, ಆಗಿರುವವರು ಯಾರು ಸಹ ಮತ್ತೆ ಯಾವುದೇ ದಾಖಲೆಗಳನ್ನು ನೀಡುವ ಅವಶ್ಯಕತೆ ಇಲ್ಲ. ಎನಿಮಿರೆಷನ್ ಫಾರಂ ಅನ್ನು ಭರ್ತಿ ಮಾಡಿ ಕೊಡದೆ ಹೋದಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಆಗುವುದಿಲ್ಲ, ಪ್ರತಿಯೊಬ್ಬ ಮತದಾರರು ಸಹ ಅರ್ಜಿಯನ್ನು ಭರ್ತಿ ಮಾಡಿ ಕೊಡಬೇಕು. 10 ದಿನಗಳ ಕಾಲಾವಧಿ ಯೊಳಗೆ ಫಾರಂ ಅನ್ನು ಮತದಾರರ ಮನೆಗೆ ತಲುಪಿಸುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರಚಾರ ಮಾಡಲಾಗುತ್ತಿದೆ. ಇದು ಪ್ರತಿ ಬಾರಿ ಮಾಡುವ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಅಲ್ಲ, ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಇದಾಗಿದ್ದು, ಜಿಲ್ಲೆಯಲ್ಲಿ 28 ಲಕ್ಷ ಮತದಾರರು ಇದ್ದು ಯಾರು ಸಹ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ ಅವರು ಬೆಸ್ಕಾಂ ಐಇಇ ಅಧಿಕಾರಿಗಳು ವಾರಕ್ಕೊಮ್ಮೆ ವಿದ್ಯುತ್ ನೀಡುತ್ತಿರುವ ಬಗ್ಗೆ ತಾವೇ ಹಾಜರಾಗಿ ಮಾಹಿತಿ ಕೊಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಜಿಲ್ಲೆಯಲ್ಲಿ 98.4 ರಷ್ಟು ಪ್ರೋಲಜಿನಿ ಮ್ಯಾಪಿಂಗ್ ಆಗಿದ್ದು, ಆಗಿರುವವರು ಯಾರು ಸಹ ಮತ್ತೆ ಯಾವುದೇ ದಾಖಲೆಗಳನ್ನು ನೀಡುವ ಅವಶ್ಯಕತೆ ಇಲ್ಲ. ಎನಿಮಿರೆಷನ್ ಫಾರಂ ಅನ್ನು ಭರ್ತಿ ಮಾಡಿ ಕೊಡದೆ ಹೋದಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಆಗುವುದಿಲ್ಲ, ಪ್ರತಿಯೊಬ್ಬ ಮತದಾರರು ಸಹ ಅರ್ಜಿಯನ್ನು ಭರ್ತಿ ಮಾಡಿ ಕೊಡಬೇಕು. 10 ದಿನಗಳ ಕಾಲಾವಧಿ ಯೊಳಗೆ ಫಾರಂ ಅನ್ನು ಮತದಾರರ ಮನೆಗೆ ತಲುಪಿಸುವಂತೆ ಸೂಚನೆ ನೀಡಿದ್ದು, ಈ ಬಗ್ಗೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರಚಾರ ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗುಬ್ಬಿ ತಹಶೀಲ್ದಾರ್, ತಾ.ಪಂ ಇಒ ಸರ್ವೆ ಎ ಡಿ ಎಲ್ ಆರ್ ತಿ ಪಿಡಿಒ, ಗ್ರಾಮ ಆಡಳಿತಾಧಿಕಾರಿಗಳು ಗ್ರಾ.ಪಂ ಮಾಜಿ ಸದಸ್ಯ ರಮೇಶ್ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




