nammatumakuru

    Subscribe to Updates

    Get the latest creative news from FooBar about art, design and business.

    What's Hot

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026
    Facebook Twitter Instagram
    ಟ್ರೆಂಡಿಂಗ್
    • “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ
    • ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ
    ತುಮಕೂರು July 5, 2026

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    By adminJuly 5, 2026No Comments3 Mins Read
    v a bhuvana

    ತುಮಕೂರು: ಕರ್ತವ್ಯದ ಒತ್ತಡಕ್ಕೆ ಸಿಲುಕಿ ಬೆಳ್ಳಂಬೆಳಗ್ಗೆಯೇ ಕೆಲಸಕ್ಕೆ ಹೊರಟಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ (VA) ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿರುವ ಮನಕಲಕುವ ಘಟನೆ ಶನಿವಾರ ನಡೆದಿದೆ. ಮತದಾರರ ಪಟ್ಟಿ ಪರಿಷ್ಕರಣೆಯ ಎಸ್‌ ಐಆರ್ (SIR) ಕೆಲಸದ ಭರದಲ್ಲಿ ಜೀವ ಕಳೆದುಕೊಂಡ ನೌಕರಳ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಸಹೋದ್ಯೋಗಿಗಳು ಹಾಗೂ ಪೋಷಕರು ಜಿಲ್ಲಾಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

    ಮೃತ ಮಹಿಳಾ ನೌಕರರನ್ನು ಗೂಳೂರು ಕಂದಾಯ ವೃತ್ತದ ಗ್ರಾಮ ಲೆಕ್ಕಿಗರಾದ ಭುವನಾ (26) ಎಂದು ಗುರುತಿಸಲಾಗಿದೆ. ಭುವನಾ ಅವರು ನೆಲಮಂಗಲದ ಟಿ.ಬೇಗೂರಿನ ವರದನಾಯಕನಪಾಳ್ಯದ ನಿವಾಸಿಯಾಗಿದ್ದು, ಶುಕ್ರವಾರ ಮುಂಜಾನೆ 5.45ಕ್ಕೆ ಮನೆಯಿಂದ ಹೊರಟು ತುಮಕೂರು ಬಸ್ ನಿಲ್ದಾಣ ತಲುಪಿದ್ದರು. ಅಲ್ಲಿಂದ ದ್ವಿಚಕ್ರ ವಾಹನದಲ್ಲಿ ತಮ್ಮ ಕರ್ತವ್ಯದ ಸ್ಥಳವಾದ ಗೂಳೂರಿಗೆ ಎಸ್‌ ಐಆರ್ ಕಾರ್ಯಕ್ಕಾಗಿ 7.35ರ ಸಮಯದಲ್ಲಿ ತೆರಳುತ್ತಿದ್ದರು.

    ಗೂಳೂರು ರಸ್ತೆಯ ಬೇವಿನ ಮರದಮ್ಮ ಗುಡಿ ಬಳಿ ಬರುತ್ತಿದ್ದಂತೆ ವೇಗವಾಗಿ ಬಂದ ತಮಿಳುನಾಡು ಮೂಲದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಭುವನಾ ಅವರ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣವೇ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಭುವನಾ ಅವರಿಗೆ ಭಾನುವಾರ (ಇಂದು) ವರನ ಕಡೆಯವರಿಂದ ಎದುರುಗೊಳ್ಳುವ ಕಾರ್ಯಕ್ರಮ ನಿಗದಿಯಾಗಿತ್ತು. ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನವೇ ಅವರು ಸಾವನ್ನಪ್ಪಿರುವುದು ಇಡೀ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ.

    ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಮುರುಗನ್ (50) ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ, ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

    “ಟಾರ್ಗೆಟ್” ಆಸೆಗೆ ಬಲಿಯಾದರೇ ನೌಕರರು?

    ಘಟನೆಯ ವಿಷಯ ತಿಳಿಯುತ್ತಿದ್ದಂತೆ ಕಂದಾಯ ಹಾಗೂ ಇತರೆ ಇಲಾಖೆಯ ನೌಕರರು ಸಿದ್ದಗಂಗಾ ಆಸ್ಪತ್ರೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ತುಮಕೂರು ಜಿಲ್ಲೆಯನ್ನು ಎಸ್‌ ಐಆರ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತರಬೇಕೆಂಬ ಹಠಕ್ಕೆ ಬಿದ್ದು, ಮೇಲಾಧಿಕಾರಿಗಳು ನೌಕರರ ಮೇಲೆ ವಿಪರೀತ ಒತ್ತಡ ಹೇರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರ ಆರೋಪ ಮಾಡಿದ್ದಾರೆ.

    ಪೋಷಕರ ಆಕ್ರೋಶ: ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ವಿರುದ್ಧ ಭುವನಾ ಅವರ ಪೋಷಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. “ರಾತ್ರಿ 10 ಗಂಟೆಯವರೆಗೂ ಮೀಟಿಂಗ್ ಮಾಡುತ್ತೀರಾ, ಮತ್ತೆ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆ ಕರೆಯುತ್ತೀರಾ? ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತೆಗೆದುಕೊಳ್ಳುತ್ತೀರಾ?” ಎಂದು ದುಃಖ ತಡೆಯಲಾರದೆ ಆಕ್ರೋಶ ವ್ಯಕ್ತಪಡಿಸಿದರು.

    ನಂತರ ಡಿಸಿ ಕಚೇರಿ ಮೆಟ್ಟಿಲುಗಳ ಬಳಿ ಧರಣಿ ಕುಳಿತ ನೌಕರರು, “ಎಸ್‌ ಐಆರ್ ಮನೆ ಮನೆ ಭೇಟಿಗೆ ಜುಲೈ 29ರವರೆಗೂ ಸಮಯಾವಕಾಶವಿದೆ. ಅಂತಿಮ ಪಟ್ಟಿ ಪ್ರಕಟವಾಗುವುದು ಅಕ್ಟೋಬರ್‌ ನಲ್ಲಿ. ಹೀಗಿದ್ದರೂ ಇಷ್ಟೊಂದು ಒತ್ತಡ ಹಾಕಿ ನೌಕರರ ಜೀವವನ್ನೇಕೆ ಬಲಿ ಪಡೆಯುತ್ತೀರಿ? ಕಂದಾಯ ಸಚಿವರಾದ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರೇ ಸ್ಥಳಕ್ಕೆ ಬಂದು ನಮ್ಮ ಅಹವಾಲು ಆಲಿಸಬೇಕು” ಎಂದು ಪಟ್ಟು ಹಿಡಿದು ರಾತ್ರಿ 10 ಗಂಟೆಯಾದರೂ ಧರಣಿ ಮುಂದುವರಿಸಿದ್ದರು.

    ಯಾರನ್ನು ಹೊಣೆ ಮಾಡಬೇಕು ಗೊತ್ತಿಲ್ಲ: ಡಿಸಿ ಶುಭ ಕಲ್ಯಾಣ್

    shubha kalyan

    ಪ್ರತಿಭಟನಾಕಾರರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಪ್ರತಿಕ್ರಿಯಿಸಿ, “ಭುವನಾ ಸಾವು ನನಗೆ ವೈಯಕ್ತಿಕವಾಗಿ ಹಾಗೂ ಇಲಾಖೆಗೆ ತುಂಬಾ ನೋವು ತಂದಿದೆ. ಇದು ಆಕಸ್ಮಿಕವಾಗಿ ನಡೆದ ಅಪಘಾತ. ಅಪಘಾತ ನಡೆದ ಜಾಗ ಬ್ಲಾಕ್ ಸ್ಪಾಟ್ ಎಂದು ಪೊಲೀಸರು ಹೇಳುತ್ತಿದ್ದಾರೆ. ರಾತ್ರಿ 7.30ರವರೆಗೆ ಮೀಟಿಂಗ್ ಮಾಡಿದ್ದು ನಿಜ. ನಮ್ಮ ಉದ್ದೇಶ ಎಲ್ಲಾ ಮತದಾರರಿಗೆ ಒಳ್ಳೆಯದಾಗಲಿ ಅನ್ನೋದು. ಸಾವು–ಹುಟ್ಟು ನಮ್ಮ ಕೈಯಲ್ಲಿಲ್ಲ, ನಮಗೂ ಕುಟುಂಬ ಇದೆ, ಅವರ ನೋವು ನಮಗೂ ಅರ್ಥವಾಗುತ್ತದೆ” ಎಂದಿದ್ದಾರೆ.

    ಖಾಲಿ ಹುದ್ದೆ ಭರ್ತಿ ಮಾಡಿ:

    ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್ ಹಾಗೂ ಪದಾಧಿಕಾರಿಗಳು ಮಾತನಾಡಿ, ನಿತ್ಯದ ಕಚೇರಿ ಕೆಲಸಗಳ ಜೊತೆಗೆ ಚುನಾವಣೆ, ಗಣತಿ, ಎಸ್‌ ಐಆರ್, ಸಾಧನಾ ಸಮಾವೇಶಗಳು, ಖಾತೆ ಆಂದೋಲನ ಹೀಗೆ ಹತ್ತಾರು ಕೆಲಸಗಳನ್ನು ನೌಕರರ ಮೇಲೆ ಹೇರಲಾಗುತ್ತಿದೆ. ಸರ್ಕಾರ ಮೊದಲು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಅಲ್ಲದೆ, “ಯಾರದ್ದೋ ಒತ್ತಡಕ್ಕೆ ಸಿಲುಕಿ ಕೆಲಸ ಮಾಡಬೇಡಿ, ನಿಮ್ಮ ಆರೋಗ್ಯ ಮತ್ತು ಕುಟುಂಬ ಮುಖ್ಯ” ಎಂದು ಸಹೋದ್ಯೋಗಿಗಳಿಗೆ ಸಲಹೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ನಿಮ್ಮ ರ‍್ಯಾಂಕಿಂಗ್ ಆಸೆಗೆ ನಮ್ಮ ಮಕ್ಕಳ ಬಲಿ ತಗೊತೀರಾ?” | ಎಸ್ ಐಆರ್ ಕರ್ತವ್ಯ ನಿರತ ವಿಎ ಸಾವು ಹಿನ್ನೆಲೆ ಪೋಷಕರಿಂದ ತೀವ್ರ ಆಕ್ರೋಶ

    July 5, 2026

    ತುಮಕೂರು: ಕರ್ತವ್ಯದ ಒತ್ತಡಕ್ಕೆ ಸಿಲುಕಿ ಬೆಳ್ಳಂಬೆಳಗ್ಗೆಯೇ ಕೆಲಸಕ್ಕೆ ಹೊರಟಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿ (VA) ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ…

    ಡ್ರಾಮ: ಮಿತ್ರರು ಕಳ್ಳತನಕ್ಕೆ ಹೋದಾಗ..! | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 5)

    July 5, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.