nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    ತುಮಕೂರು July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    By adminJuly 6, 2026No Comments2 Mins Read
    g parameshwar.jpg

    ತುಮಕೂರು: ಎಸ್ ಐಆರ್ (Special Intensive Revision) ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ ಭುವನಾ ಅವರ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ನೌಕರರನ್ನು ರಾಜ್ಯದ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ, ಅವರ ಮನವಿ ಸ್ವೀಕರಿಸಿ ಹಲವು ಭರವಸೆಗಳನ್ನು ನೀಡಿದರು.

    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವರು ಮೊದಲು ಭುವನಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ, ಅವರ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸಿದರು.
    ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಭುವನಾ ಅವರ ಸಾವಿಗೆ ಕಾರಣವಾದ ಘಟನೆ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಯಾವುದೇ ಹಂತದಲ್ಲಿ ಕರ್ತವ್ಯದ ಒತ್ತಡ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

    ಶನಿವಾರ ಚಿತ್ರದುರ್ಗದಲ್ಲಿ ಪೂರ್ವನಿಗದಿತ ಪ್ರಗತಿ ಪರಿಶೀಲನಾ ಸಭೆ ಇದ್ದ ಕಾರಣ ಹಾಗೂ ಆರೋಗ್ಯ ಸಮಸ್ಯೆಯಿಂದ ತಕ್ಷಣ ತುಮಕೂರಿಗೆ ಬರಲು ಸಾಧ್ಯವಾಗಲಿಲ್ಲ ಎಂದು ಉಪಮುಖ್ಯ ಮಂತ್ರಿಯವರು ತಿಳಿಸಿದರು. ಆದರೆ ಅಪಘಾತದ ಸುದ್ದಿ ತಿಳಿದ ಕೂಡಲೇ ಗಾಯಾಳುವಿಗೆ ತುರ್ತು ಚಿಕಿತ್ಸೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಹೇಳಿದರು. ದುರದೃಷ್ಟವಶಾತ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ವಿಷಾದ ವ್ಯಕ್ತಪಡಿಸಿದರು.

    “ತುಮಕೂರು ಜಿಲ್ಲೆಯಿಂದ ಕಂದಾಯ ಸಚಿವನಾಗಿರುವ ಎರಡನೇ ವ್ಯಕ್ತಿ ನಾನು. ನಾಲ್ಕು ದಶಕಗಳ ರಾಜಕೀಯ ಅನುಭವದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ತತ್ವದೊಂದಿಗೆ ಕೆಲಸ ಮಾಡಿದ್ದೇನೆ. ಸರ್ಕಾರಿ ನೌಕರರನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಅವರು ಹೇಳಿದರು.

    ಕಂದಾಯ ಇಲಾಖೆಯ ಬಡ್ತಿ ಪ್ರಕ್ರಿಯೆ ಕುರಿತು ಮಾತನಾಡಿದ ಸಚಿವರು, ಎಂಟು ವರ್ಷಗಳಿಂದ ಬಾಕಿ ಉಳಿದಿದ್ದ ತಹಶೀಲ್ದಾರ್ ಗ್ರೇಡ್-2 ರಿಂದ ಗ್ರೇಡ್-1ಕ್ಕೆ ಬಡ್ತಿಯನ್ನು ತಮ್ಮ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದರು. ಇದೇ ರೀತಿಯಲ್ಲಿ ಒಂದು ವಾರದೊಳಗೆ ಗ್ರಾಮ ಆಡಳಿತಾಧಿಕಾರಿಗಳಿಗೆ ಕಂದಾಯ ನಿರೀಕ್ಷಕ (ಆರ್ ಐ) ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯೂ ಆರಂಭವಾಗಲಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
    ಇದರ ಜೊತೆಗೆ ಒಂದೂವರೆ ವರ್ಷಗಳಿಂದ ಸ್ಥಗಿತಗೊಂಡಿದ್ದ ಪತಿ–ಪತ್ನಿ ವರ್ಗಾವಣೆ ಪ್ರಕ್ರಿಯೆಯನ್ನು ಪುನರಾರಂಭಿಸಿರುವುದಾಗಿ ತಿಳಿಸಿದ ಅವರು, ಇಲಾಖೆಯ ವೃಂದ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ಎಸ್ ಐಆರ್ ಕಾರ್ಯಕ್ಕೆ ನೀಡಲಾಗಿದ್ದ ಕಡಿಮೆ ಅವಧಿಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಈ ಕಾರ್ಯ ಪೂರ್ಣಗೊಳಿಸಲು ಎರಡು ತಿಂಗಳ ಕಾಲಾವಕಾಶ ನೀಡಬಹುದಾಗಿತ್ತು. ಆದರೆ ಕೇವಲ ಒಂದು ತಿಂಗಳ ಗಡುವು ನೀಡಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ತೀವ್ರ ಒತ್ತಡದಲ್ಲಿ ಕೆಲಸ ಮಾಡಬೇಕಾಯಿತು” ಎಂದು ಅಭಿಪ್ರಾಯಪಟ್ಟರು.
    ಮೃತ ಭುವನಾ ಅವರ ಕುಟುಂಬಕ್ಕೆ ಚುನಾವಣಾ ಆಯೋಗದಿಂದ ₹30 ಲಕ್ಷ ಪರಿಹಾರ, 15 ದಿನಗಳೊಳಗೆ ವಿಮೆ ಮೊತ್ತ ಹಾಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ಸೇರಿದಂತೆ ಸರ್ಕಾರದಿಂದ ದೊರೆಯುವ ಎಲ್ಲ ನೆರವು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

    “ನಾವು ಮತ್ತು ನೀವು ಬೇರೆ ಬೇರೆ ಅಲ್ಲ; ಎಲ್ಲರೂ ಸೇರಿದ್ದೇ ಸರ್ಕಾರ. ಸರ್ಕಾರಿ ನೌಕರರು ಸಮಸ್ಯೆ ಇಟ್ಟುಕೊಂಡು ಕೆಲಸ ಮಾಡುವುದು ಸಾಧ್ಯವಿಲ್ಲ. ನಿಮ್ಮ ಎಲ್ಲ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸುತ್ತೇವೆ. ಸದಾ ನಿಮ್ಮೊಂದಿಗೆ ಇರುತ್ತೇನೆ. ಯಾವುದೇ ವಿಷಯಕ್ಕೆ ಮುಕ್ತವಾಗಿ ನನ್ನನ್ನು ಭೇಟಿ ಮಾಡಬಹುದು” ಎಂದು ಸಚಿವರು ಹೇಳಿದರು.

    ಸಚಿವರ ಭರವಸೆಯ ನಂತರ ಪ್ರತಿಭಟನಾ ನಿರತ ಸರ್ಕಾರಿ ನೌಕರರು ತಮ್ಮ ಹೋರಾಟವನ್ನು ಹಿಂಪಡೆಯುವ ನಿರ್ಧಾರ ಕೈಗೊಂಡರು. ಸರ್ಕಾರ ನೀಡಿದ ಭರವಸೆಗಳು ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂಬ ನಿರೀಕ್ಷೆಯನ್ನು ನೌಕರರು ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ

    July 5, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸರಗೂರು: ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ, ಜಾನುವಾರುಗಳನ್ನು ಬಲಿಪಡೆದು ಇಡೀ ಭಾಗದಲ್ಲಿ ಭೀತಿ ಸೃಷ್ಟಿಸಿದ್ದ 12 ವರ್ಷದ…

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.