nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    ತುಮಕೂರು July 6, 2026

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    By adminJuly 6, 2026No Comments2 Mins Read
    d k shivakumar.jpg

    — ರಾಘವೇಂದ್ರ ಅಡಿಗ ಎಚ್ಚೆನ್.

    ಚನ್ನಪಟ್ಟಣದ ಶಾಸಕರು ಹಾಗೂ ನಟರಾದ ಸಿ.ಪಿ. ಯೋಗೇಶ್ವರ್ ಅವರು ಹಾಗೂ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅಭಿನಯಿಸಲಿರುವ ಸೈನಿಕ –2 ಹಾಗೂ ಕರ್ಣಾಟಬಲಂ ಚಲನಚಿತ್ರದ ಮುಹೂರ್ತ ಸಮಾರಂಭ ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಅದ್ದೂರಿಯಾಗಿ ನಡೆಯಿತು. ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು. ಬಮೂಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಭಾಗವಹಿಸಿ, ಚಿತ್ರತಂಡಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ, ಮಾಜಿ ಸಚಿವ, ಶಾಸಕರಾದ ಸುಧಾಕರ್, ಉದಯ್ ಕದಲೂರು, ಎಂಎಲ್ಸಿಗಳಾದ ಎಸ್ ರವಿ, ಮೋಹನ್, ನಟ ಜಗಪತಿ ಬಾಬು ಜನಪ್ರತಿನಿಧಿಗಳು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ . ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಹೇಳಿದರು. ಸಿ.ಪಿ.ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಶುಭ ಕೋರಿದರು.

    ಇನ್ನು . ‘ನಾನೊಬ್ಬ ವಿತರಕನಾಗಿದ್ದೆ. ಈಗಲೂ ವಿತರಕನಾಗಿ ಕೆಲಸ ಮಾಡುತ್ತಾ ಇದ್ದೇನೆ’ ಎಂದು ಡಿಕೆಶಿ ಅವರು ಹೇಳಿದರು. ಅಲ್ಲದೆ ಥಿಯೇಟರ್ ಮಾಲೀಕರು ಭೇಟಿ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದಾರೆ. ಜಯಮಾಲಾ ಕೂಡ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಪ್ರೇಕ್ಷಕರು ಕೂಡ ಸಾಥ್ ನೀಡಬೇಕು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಈ ಹೊತ್ತಿನಲ್ಲಿ ಸಿ.ಪಿ.ಯೋಗೇಶ್ವರ್ ಪುತ್ರ ಧ್ಯಾನ್ ಸ್ಯಾಂಡಲ್ ವುಡ್ ಗೆ ಹೊಸ ಹೀರೋ ಆಗಿ ಎಂಟ್ರಿಯಾಗಿದ್ದಾರೆ. ಧ್ಯಾನ್ ಅವರ ಚೊಚ್ಚಲ ಪ್ರವೇಶದಲ್ಲಿಯೇ ಒಟ್ಟೊಟ್ಟಿಗೆ ಎರಡು ಅದ್ದೂರಿ ಸಿನಿಮಾಗಳು ಘೋಷಣೆಯಾಗಿದ್ದು, ಎರಡೂ ಚಿತ್ರಗಳಲ್ಲಿ ತಂದೆ–ಮಗ ಒಟ್ಟಿಗೆ ಸ್ಕ್ರೀನ್ ಶೇರ್ ಮಾಡಲಿರುವುದು ವಿಶೇಷ.

    ಪಿ.ಎಂ.ಜಿ ಫಿಲಂ ಪ್ರೊಡಕ್ಷನ್ ಪ್ರೈ. ಲಿ. ಸಂಸ್ಥೆಯ ಬ್ಯಾನರ್ ಅಡಿಯಲ್ಲಿ ಧ್ಯಾನ್ ಯೋಗೇಶ್ವರ್ ಅವರನ್ನು ನಾಯಕನನ್ನಾಗಿ ಪರಿಚಯಿಸಲಾಗುತ್ತಿದೆ. ಹಿರಿಯ ನಿರ್ದೇಶಕ ನಾಗಣ್ಣ ಆ್ಯಕ್ಷನ್ ಕಟ್ ಹೇಳಲಿರುವ ಈ ಚಿತ್ರಕ್ಕೆ ‘ಕರ್ಣಾಟಬಲಂ ಅಜೇಯಂ’ ಎಂದು ಹೆಸರಿಡಲಾಗಿದೆ. ಈ ಚಿತ್ರದ ಮೂಲಕ ಸಿ. ಪಿ. ಯೋಗೇಶ್ವರ್ ಅವರು ಸುಮಾರು 25 ವರ್ಷಗಳ ಸುದೀರ್ಘ ಬಿಡುವಿನ ಬಳಿಕ ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳುತ್ತಿರುವುದು ವಿಶೇಷ. ಚಿತ್ರದಲ್ಲಿ ಧ್ಯಾನ್ ಜೊತೆಗೆ ಯೋಗೇಶ್ವರ್ ಕೂಡ ಪ್ರಮುಖ ಪಾತ್ರದಲ್ಲಿದ್ದು, ಮಿಸ್ ಯೂನಿವರ್ಸ್ ಇಂಡಿಯಾ ಮಣಿಕ ವಿಶ್ವಕರ್ಮ, ಮಿಸ್ ಯೂನಿವರ್ಸ್ ಇಂಡಿಯಾ ರನ್ನರ್ ಅಪ್ ರೇಖಾ ಪಾಂಡೆ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಜಗಪತಿ ಬಾಬು ಪ್ರಮುಖ ತಾರಾಗಣದಲ್ಲಿದ್ದಾರೆ.

    ಸಿ. ಪಿ.ಯೋಗೇಶ್ವರ್ ಅವರ ಹೋಮ್ ಬ್ಯಾನರ್ ‘ರಾಜಯೋಗಿ ಫಿಲಂಸ್’ ಮೂಲಕ 25 ವರ್ಷಗಳ ಹಿಂದೆ ತೆರೆಕಂಡು ಸೂಪರ್ ಹಿಟ್ ಆಗಿದ್ದ ‘ಸೈನಿಕ’ ಚಿತ್ರದ ಮುಂದುವರಿದ ಭಾಗ ‘ಸೈನಿಕ 2’ ಚಿತ್ರವನ್ನೂ ಘೋಷಣೆ ಮಾಡಲಾಗಿದೆ. ಈ ಚಿತ್ರವನ್ನು ಪುನೀತ್ ರುದ್ರನಾಗ್ ನಿರ್ದೇಶಿಸಲಿದ್ದು, ಸಿ. ಪಿ. ಯೋಗೇಶ್ವರ್ ಹಾಗೂ ಪುತ್ರ ಧ್ಯಾನ್ ಇಬ್ಬರೂ ಪ್ರಮುಖ ಪಾತ್ರಗಳಲ್ಲಿ ಬಣ್ಣ ಹಚ್ಚಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ

    July 5, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸರಗೂರು: ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ, ಜಾನುವಾರುಗಳನ್ನು ಬಲಿಪಡೆದು ಇಡೀ ಭಾಗದಲ್ಲಿ ಭೀತಿ ಸೃಷ್ಟಿಸಿದ್ದ 12 ವರ್ಷದ…

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.