nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026
    Facebook Twitter Instagram
    ಟ್ರೆಂಡಿಂಗ್
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    ಕೊರಟಗೆರೆ July 15, 2026

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    By adminJuly 15, 2026No Comments2 Mins Read
    hanumanta natha swamiji

    ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ ಬದುಕಿನತ್ತ ಇಡುವ ಮೊದಲ ಹೆಜ್ಜೆಯಾಗಿದೆ. ಅದರಲ್ಲೂ ದೇವಾಲಯದ ಪವಿತ್ರ ವಾತಾವರಣದಲ್ಲಿ ಗುರುಗಳ ಸಮ್ಮುಖದಲ್ಲಿ ಅಕ್ಷರಾಭ್ಯಾಸ ಮಾಡಿಸುವುದು ಮಕ್ಕಳ ಭವಿಷ್ಯಕ್ಕೆ ಅತ್ಯಂತ ಶುಭಾರಂಭವನ್ನು ನೀಡುತ್ತದೆ,” ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.

    ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬುಧವಾರದಂದು ಕೊರಟಗೆರೆ ಪಟ್ಟಣದ ಕನ್ನಿಕಾ ವಿದ್ಯಾಪೀಠ ಶಾಲೆಯ ಪೂರ್ವಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳಿಗಾಗಿ ಆಯೋಜಿಸಿದ್ದ ವಿಶೇಷ ಅಕ್ಷರಾಭ್ಯಾಸ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

    “ಮಕ್ಕಳ ಶಿಕ್ಷಣವು ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಹಾಗೂ ಭಾರತೀಯ ಪರಂಪರೆಯೊಂದಿಗೆ ಆರಂಭವಾದಾಗ ಮಾತ್ರ ಅವರ ವ್ಯಕ್ತಿತ್ವವು ಸದೃಢವಾಗಿ ರೂಪುಗೊಳ್ಳಲು ಸಾಧ್ಯ. ಅಕ್ಷರಾಭ್ಯಾಸವು ಮಗುವಿನ ಜೀವನದ ಮಹತ್ವದ ಸಂಸ್ಕಾರಗಳಲ್ಲಿ ಒಂದಾಗಿದ್ದು, ದೇವರ ಸನ್ನಿಧಿಯಲ್ಲಿ ‘ಓಂ’, ‘ಶ್ರೀ’ ಮತ್ತು ಮೊದಲ ಅಕ್ಷರಗಳನ್ನು ಬರೆಯುವ ಮೂಲಕ ಜ್ಞಾನಾರ್ಜನೆಯ ಪವಿತ್ರ ಪಯಣ ಆರಂಭವಾಗುತ್ತದೆ,” ಎಂದು ಶ್ರೀಗಳು ತಿಳಿಸಿದರು.

    ಇದೇ ವೇಳೆ ಪೋಷಕರಿಗೆ ಕಿವಿಮಾತು ಹೇಳಿದ ಅವರು, “ಇಂದಿನ ಆಧುನಿಕ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ, ಧಾರ್ಮಿಕ ಮೌಲ್ಯಗಳು ಮತ್ತು ಗುರು-ಶಿಷ್ಯ ಪರಂಪರೆಯನ್ನು ಮಕ್ಕಳಲ್ಲಿ ಬೆಳೆಸುವುದು ಅತ್ಯಗತ್ಯವಾಗಿದೆ. ಪೋಷಕರು ಮಕ್ಕಳಿಗೆ ಕೇವಲ ಪದವಿ ಆಧಾರಿತ ಶಿಕ್ಷಣವನ್ನಷ್ಟೇ ನೀಡದೆ, ಉತ್ತಮ ಸಂಸ್ಕಾರವನ್ನೂ ನೀಡಿದರೆ ಅವರು ಮುಂದೆ ಸಮಾಜಕ್ಕೆ ಆದರ್ಶ ನಾಗರಿಕರಾಗಿ ಬೆಳೆಯುತ್ತಾರೆ,” ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಆಗಮಿಕರಾದ ಸುದರ್ಶನ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿದವು. ತದನಂತರ ಪೂರ್ವಪ್ರಾಥಮಿಕ ಮಕ್ಕಳಿಗೆ ಅತ್ಯಂತ ಸಂಪ್ರದಾಯಬದ್ಧವಾಗಿ ಅಕ್ಷರಾಭ್ಯಾಸ ಮಾಡಿಸಲಾಯಿತು. ಪುಟಾಣಿ ಮಕ್ಕಳು ತಟ್ಟೆಯಲ್ಲಿ ಹರಡಿದ್ದ ಅಕ್ಕಿಯ ಮೇಲೆ ಬೆರಳಿನಿಂದ ತಮ್ಮ ಮೊದಲ ಅಕ್ಷರಗಳನ್ನು ಬರೆಯುವ ಮೂಲಕ ವಿದ್ಯಾಭ್ಯಾಸಕ್ಕೆ ಭಕ್ತಿಪೂರ್ವಕವಾಗಿ ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ಕನ್ನಿಕಾ ವಿದ್ಯಾಪೀಠದ ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗ, ನೂರಾರು ಪೋಷಕರು ಹಾಗೂ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಮಠದ ವತಿಯಿಂದ ಆಗಮಿಸಿದ್ದ ಮಕ್ಕಳಿಗೆ ವಿಶೇಷ ಆಶೀರ್ವಾದದೊಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ…

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.