nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು

    July 21, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    ಗುಬ್ಬಿ July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    By adminJuly 20, 2026No Comments2 Mins Read
    shubha kalyan.jpg

    ಗುಬ್ಬಿ: ತಾಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸಂದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಭೇಟಿ ನೀಡಿ ಶಾಲೆ ಹಾಗೂ ವಸತಿ ನಿಲಯದ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ನಿಲಯದ ನಿರ್ವಹಣೆ ಹಾಗೂ ಶೈಕ್ಷಣಿಕ ವಾತಾವರಣದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

    ಭೇಟಿಯ ವೇಳೆ ವಸತಿ ನಿಲಯದ ಅಡುಗೆಮನೆ, ಊಟದ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯಕರ ವಾತಾವರಣವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ಗುಣಮುಟ್ಟದ ಆಹಾರ ಒದಗಿಸುವುದರೊಂದಿಗೆ ವಸತಿ ನಿಲಯದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಕುರಿತು ಅಧಿಕಾರಿಗಳು ಗಮನ ಸೆಳೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಆಡಳಿತದೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹೊಸ ಕೊಳವೆಬಾವಿ ಕೊರೆಯುವ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸುಮಾರು 1,600 ಅಡಿ ಆಳದವರೆಗೆ ಕೊರೆಸಿದರೂ ನೀರು ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ಈ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ನಿರಂತರ ಕುಡಿಯುವ ನೀರಿನ ಪೂರೈಕೆ ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿರುವ ವಾಲಿಬಾಲ್ ಕ್ರೀಡಾಂಗಣ ಸೇರಿದಂತೆ ಕ್ರೀಡಾ ಸೌಲಭ್ಯಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳ ದೈಹಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ಕ್ರೀಡಾ ಸೌಲಭ್ಯಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಾಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ

    July 21, 2026

    ಸರಗೂರು: ಇಲ್ಲಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಮಾನವ ಹಕ್ಕುಗಳ ಮಿಷನ್ ಸರಗೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ…

    ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು

    July 21, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.