ಸರಗೂರು: ಇಲ್ಲಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಮಾನವ ಹಕ್ಕುಗಳ ಮಿಷನ್ ಸರಗೂರು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಪಿ. ಚಿನ್ನಣ್ಣ (ಹಳೆಯೂರು) ಅವರನ್ನು ಸರ್ವಾನುಮತದಿಂದ ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾದ ಶ್ರೀನಿವಾಸ್ (ಯಶವಂತಪುರ) ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಆದಿಕರ್ನಾಟಕ ಮಹಾಸಭಾ ಎಚ್.ಡಿ. ಕೋಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಸೋಮೇಶ್ (ಭೀಮನಹಳ್ಳಿ) ಹಾಗೂ ರವೀಂದ್ರ ಅವರ ಉಪಸ್ಥಿತಿಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆರವೇರಿತು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಪಿ. ಚಿನ್ನಣ್ಣ ಅವರು, ಮಾನವ ಹಕ್ಕುಗಳು ಪ್ರತಿಯೊಬ್ಬ ವ್ಯಕ್ತಿಯ ಜನ್ಮಸಿದ್ಧ ಹಕ್ಕಾಗಿದ್ದು, ಮೂಲಭೂತ ಹಕ್ಕುಗಳ ರಕ್ಷಣೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು. ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕಿನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದ್ದು, ಅನ್ಯಾಯಕ್ಕೊಳಗಾದ ಪ್ರತಿಯೊಬ್ಬರಿಗೂ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತಮ್ಮ ಸಂಘಟನೆ ನಿರಂತರವಾಗಿ ಶ್ರಮಿಸಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.
ಸಂಸ್ಥೆಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪ್ರಭಾಕರ್ ದೇವಲಾಪುರ, ಸಹ ಕಾರ್ಯದರ್ಶಿಯಾಗಿ ಸೂರ್ಯಕುಮಾರ್ ಮಸಹಳ್ಳಿ, ಉಪಾಧ್ಯಕ್ಷರುಗಳಾಗಿ ಗಣೇಶ್ (ಮೊಳೆಯೂರು), ಶಿವಣ್ಣ (ಚೆನ್ನಿಪುರ), ಸೋಮಣ್ಣ (ಹೆಗ್ಗುಡಿಲು) ಹಾಗೂ ಶ್ರೀನಿವಾಸ್ (ಲಂಕೆ) ಆಯ್ಕೆಯಾಗಿದ್ದಾರೆ. ಜೊತೆಗೆ ಸಂಘಟನೆ ಸಂಚಾಲಕರಾಗಿ ಶಿವರಾಜು (ಚೆನ್ನಿಪುರ) ಮತ್ತು ಉಸ್ತುವಾರಿಯಾಗಿ ಮರೀಲಿಂಗಯ್ಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಷಕಂಠ (ಲಿಂಗೇನಹಳ್ಳಿ), ಸೋಮು (ಲಂಕೆ), ಸೋಮೇಶ್, ಚೆಲುರಾಜು (ನರಸೀಪುರ), ರಾಮಚಂದ್ರ (ನಿಲುವಾಗಿಲು), ಈಶ್ವರ (ಲಂಕೆ), ಮಹೇಶ್ (ಆಗುತ್ತೂರು), ಇಂದ್ರಕುಮಾರ್ ಹಾಗೂ ಮಾದೇವಕುಮಾರ್ (ಹೂವಿನಕೊಳ) ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿ ನೂತನ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


