nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    • ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    • ಬೆಳೆ ನಷ್ಟ ತಪ್ಪಿಸಲು ಫಸಲ್ ಬಿಮಾ ತಪ್ಪದೇ ನೋಂದಾಯಿಸಿ: ರೈತರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ
    ಜಿಲ್ಲಾ ಸುದ್ದಿ July 30, 2026

    ಪತ್ರಕರ್ತರು ಸಮಾಜದ ಕಣ್ಣು, ಕಿವಿಯಾಗಿ ಕಾರ್ಯನಿರ್ವಹಿಸಲಿ: ಶಾಸಕ ಪ್ರಭು ಚವ್ಹಾಣ

    By Ganesh TumkuruJuly 30, 2026No Comments2 Mins Read
    bidar

    ಔರಾದ್: ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಪತ್ರಕರ್ತರು ಸಮಾಜದ ಕಣ್ಣು ಮತ್ತು ಕಿವಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಜಿ ಸಚಿವರು ಹಾಗೂ ಔರಾದ್ ಶಾಸಕರಾದ ಪ್ರಭು ಚವ್ಹಾಣ ಕರೆ ನೀಡಿದರು.

    ಔರಾದ್ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದ ವತಿಯಿಂದ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಸನ್ಮಾನ ಹಾಗೂ ‘ಕನ್ನಡ ಜಂಗಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಜನರ ಕುಂದುಕೊರತೆಗಳು, ಶಿಕ್ಷಣ, ನೀರಾವರಿ, ಕೃಷಿ ಹಾಗೂ ಕಾರ್ಮಿಕರ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುವ ಕೆಲಸ ಮಾಧ್ಯಮಗಳಿಂದ ಆಗಬೇಕಿದ್ದು, ತಾಲೂಕಿನ ಅಭಿವೃದ್ಧಿಯಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.

    ಅಲ್ಲದೆ, ತಾಲೂಕಿನಲ್ಲಿ ಪತ್ರಕರ್ತರ ಅನುಕೂಲಕ್ಕಾಗಿ ಪತ್ರಿಕಾ ಭವನ ನಿರ್ಮಾಣಕ್ಕೆ ನಿವೇಶನ ದೊರೆತರೆ, ಭವ್ಯ ಕಟ್ಟಡ ನಿರ್ಮಿಸಲು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.

    ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ದೇವರು ಮಾತನಾಡಿ, ಪತ್ರಿಕೋದ್ಯಮವು ಸಮಾಜದ ಕನ್ನಡಿಯಾಗಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುವ ಕೆಲಸ ಮಾಧ್ಯಮಗಳಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ಪ್ರತಿಯೊಬ್ಬರೂ ದಿನಪತ್ರಿಕೆ ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

    ಇದೇ ಸಂದರ್ಭದಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ ಕಲಬುರಗಿ ವಿಭಾಗದ ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ಸ್ಮರಣಾರ್ಥ ರಾಜ್ಯ ಮಟ್ಟದ ‘ಕನ್ನಡ ಜಂಗಮ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

    ವಿಶೇಷ ಉಪನ್ಯಾಸ ನೀಡಿದ ಬಾಬುರಾವ ಯಡ್ರಾಮಿ ಅವರು, ಪತ್ರಕರ್ತರು ಅರೆಬರೆ ಅಥವಾ ಪರಿಶೀಲಿಸದ ಸುದ್ದಿಗಳನ್ನು ಪ್ರಕಟಿಸದೆ, ಸತ್ಯ ಮತ್ತು ನಿಖರತೆಗೆ ಆದ್ಯತೆ ನೀಡಬೇಕು ಎಂದರು. ವೈಯಕ್ತಿಕ ವಿಚಾರಗಳಿಗಿಂತ ಸಾರ್ವಜನಿಕ ಹಿತಾಸಕ್ತಿ ಹಾಗೂ ಜನರ ಸಮಸ್ಯೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತರುವ ಜವಾಬ್ದಾರಿಯುತ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

    ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳ ಪಾತ್ರ ಅನನ್ಯವಾಗಿತ್ತು. ಗಡಿಭಾಗದಲ್ಲಿ ಅನ್ಯ ಭಾಷೆಗಳ ಪ್ರಭಾವ ಹೆಚ್ಚಿರುವುದರಿಂದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯೂ ಪತ್ರಕರ್ತರ ಮೇಲಿದೆ ಎಂದರು. ಊಹಾಪೋಹಗಳಿಗೆ ಆಸ್ಪದ ನೀಡದೆ ಪ್ರಾಮಾಣಿಕ ಹಾಗೂ ವಸ್ತುನಿಷ್ಠ ಸುದ್ದಿಗಳನ್ನು ತಲುಪಿಸುವಂತೆ ಮನವಿ ಮಾಡಿದರು.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅಧ್ಯಕ್ಷತೆ ವಹಿಸಿ, ಗ್ರಾಮೀಣ ಪತ್ರಕರ್ತರ ಹಿತರಕ್ಷಣೆಗೆ ಸಂಘವು ಬದ್ಧವಾಗಿದ್ದು ಶೀಘ್ರದಲ್ಲೇ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದರು. ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮಹೇಶ್ ಪಾಟೀಲ್, ತಾಲೂಕು ಪಂಚಾಯಿತಿ ಇಒ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಸಂಘದ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕಿನ ಪತ್ರಕರ್ತರು ಉಪಸ್ಥಿತರಿದ್ದರು. ಮಲ್ಲಪ್ಪ ಗೌಡಾ ಸ್ವಾಗತಿಸಿದರೆ, ರಿಯಾಜಪಾಶಾ ಕೊಳ್ಳೂರು ನಿರೂಪಿಸಿ, ಮನ್ಮಥ ಸ್ವಾಮಿ ವಂದಿಸಿದರು.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಹಡಪದ ಅಪ್ಪಣ್ಣರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪ: ತಹಶೀಲ್ದಾರ್ ಮೋಹನಕುಮಾರಿ

    July 29, 2026

    ಸಂತಪೂರ ಗ್ರಾಮ ಪಂಚಾಯತಿಯಲ್ಲಿ ‘ನನ್ನ ಸ್ವತ್ತು ನನ್ನ ಹಕ್ಕು’ ಅಭಿಯಾನಕ್ಕೆ ಚಾಲನೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    ಪಾವಗಡ: ತಾಲೂಕಿನ ಪಳವಳ್ಳಿ ಗ್ರಾಮದ ಬಳಿಯಿರುವ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ವರ್ಗಗಳ ವಸತಿ ಶಾಲೆಯಲ್ಲಿ ಮಂಗಳವಾರ ಮೂವರು ವಿದ್ಯಾರ್ಥಿಗಳು…

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.