ಸರಗೂರು: ಸಾಮಾಜಿಕ ಸೇವೆ ಹಾಗೂ ವೃತ್ತಿಪರ ಸಾಧನೆಗಳ ಮೂಲಕ ಜಿಲ್ಲೆಗೆ ಕೀರ್ತಿ ತಂದಿರುವ ಜಂಗಲ್ ಲಾಡ್ಜ್ ಬಂಡೀಪುರದ ಮ್ಯಾನೇಜರ್ ಪ್ರಸನ್ನ ಕುಮಾರ್ ಅವರನ್ನು ಸರಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ‘ಪಟ್ಟಣದ ಸ್ನೇಹಿತರು’ ಬಳಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಈ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಸನ್ಮಾನ ನೆರವೇರಿಸಿ ಮಾತನಾಡಿದ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಅವರು, “ಪ್ರಸನ್ನ ಕುಮಾರ್ ಅವರು ತಮ್ಮ ನಿರಂತರ ಸೇವಾ ಮನೋಭಾವ, ಸಮಾಜಮುಖಿ ಕಾರ್ಯಗಳು ಹಾಗೂ ಸಾಧನೆಗಳ ಮೂಲಕ ಇಡೀ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಅವರಿಗೆ ಲಭಿಸಿರುವ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಗೌರವವು ನಮ್ಮೆಲ್ಲರಿಗೂ ಅತ್ಯಂತ ಸಂತಸ ತಂದಿದೆ” ಎಂದರು.
ಮುಂದುವರಿದು ಮಾತನಾಡಿದ ಅವರು, “ಪ್ರಸನ್ನ ಕುಮಾರ್ ಅವರು ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನಿರಂತರವಾಗಿ ನೆರವು ನೀಡುತ್ತಾ ಬಂದಿದ್ದು, ಅವರ ಈ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ. ಬೆಟ್ಟದ ತಾಯಿ ಚಿಕ್ಕದೇವಮ್ಮ ಹಾಗೂ ಸಾಗರೆ ಮಾರಮ್ಮ ದೇವಿಯವರು ಅವರಿಗೆ ಆಯುಷ್ಯ, ಆರೋಗ್ಯ, ಸುಖ–ಶಾಂತಿ ನೀಡಿ ಕಾಪಾಡಲಿ. ಮುಂದೆಯೂ ಅವರು ಇಂತಹ ಉನ್ನತ ಸಾಧನೆಗಳನ್ನು ಮಾಡುತ್ತಾ ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಲಿ” ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪಟ್ಟಣದ ಸ್ನೇಹಿತರಾದ ಮಣಿ ಮಾಗುಡಿಲು, ಬಿ. ಮಟಕರೆ ವಿಎಸ್ ಎಸ್ ಎನ್ ಸಂಘದ ನಿರ್ದೇಶಕ ಕಂದಲಿಕೆ ನಿಜಪ್ಪ, ಶಂಕರಲಿಂಗಪ್ಪ, ಕುಮಾರ್, ನಾಗೇಗೌಡ, ಕೃಷ್ಣಮೂರ್ತಿ ಸೇರಿದಂತೆ ಹಲವು ಗಣ್ಯರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
