ಔರಾದ: ತಾಲೂಕಿನ ಮಹಾರಾಜವಾಡಿ ಗ್ರಾಮದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನಗಳ ಕುರಿತು ವಿದ್ಯಾರ್ಥಿಗಳು ಭಾಷಣ ಮಾಡಿದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಮೂಡಿಬಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಗ್ರಾಮಸ್ಥರ ಹಾಗೂ ಸಾರ್ವಜನಿಕರ ಗಮನ ಸೆಳೆದವು.
ಶಾಲೆಯ ಮುಖ್ಯಶಿಕ್ಷಕ ಗುರಯ್ಯ ಸ್ವಾಮಿ ಮಾತನಾಡಿ, “ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವನ್ನು ಪ್ರತಿಯೊಬ್ಬರೂ ಸದಾ ಸ್ಮರಿಸಬೇಕು. ದೇಶದ ಏಕತೆ, ಶಾಂತಿ ಹಾಗೂ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ತಮ್ಮದೇ ಆದ ಕೊಡುಗೆ ನೀಡಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಓಂಕಾರ್ ಮಾತನಾಡಿ, “ಮಹನೀಯರ ತ್ಯಾಗವನ್ನು ಸ್ಮರಿಸುವ ಮೂಲಕ ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ದೇಶಭಕ್ತಿ ಹಾಗೂ ಉತ್ತಮ ನಾಗರಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ” ಎಂದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಬಾಲಾಜಿ, ಲಕ್ಷ್ಮಣ್, ಗ್ರಾಮಸ್ಥರಾದ ಸಂದೀಪ್ ಪಾಟೀಲ್, ಮಲ್ಲಯ್ಯ ಸ್ವಾಮಿ, ಓಂಕಾರ್ ಗೋಡೆ, ಸಂಗಪ್ಪ, ರಜಾಕ್ ಮಿಯಾ, ಯೂಸುಫ್, ಚಂದ್ರಕಾಂತ್, ತುಕಾರಾಮ್, ಫೇರೋಜ್ ಸೇರಿದಂತೆ ಹಲವು ಮುಖಂಡರು, ಶಾಲಾ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
