ತುಮಕೂರು: ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿ ಬಿ ಜಿ ರಾಮ್ ಜಿ ಯೋಜನೆಯಡಿ ಸೆಪ್ಟೆಂಬರ್ 15ರವರೆಗೂ ಗ್ರಾಮೀಣ ರೋಜಗಾರ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಲಾಗುವುದು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನಾದ್ಯಂತ ಕಾರ್ಡ್ ವಿತರಿಸಲು ಸೆ.15ರವರೆಗೂ ಜಾಬ್ ಕಾರ್ಡ್ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಕುಟುಂಬಗಳು ಈ ಮೇಳದಲ್ಲಿ ಭಾಗವಹಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಜಾಬ್ ಕಾರ್ಡ್ ಹೊಂದಿಲ್ಲದ ಅರ್ಹ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ಉದ್ಯೋಗ ಚೀಟಿ ವಿತರಿಸಲಾಗುವುದು. ಈಗಾಗಲೇ ಜಾಬ್ ಕಾರ್ಡ್ ಹೊಂದಿದ್ದು, ಇ-ಕೆವೈಸಿ ಪ್ರಕ್ರಿಯೆ ಬಾಕಿಯಿರುವವರು ಈ ಮೇಳದಲ್ಲಿ ಇ–ಕೆವೈಸಿ ಪೂರ್ಣಗೊಳಿಸಿಕೊಳ್ಳಬಹುದು.
ಪಂಚಾಯತಿ ಅಭಿವೃದ್ಧಿ ಅಧಿಕಾರಿ, ತಾಲೂಕು ಇಐಸಿ ಸಂಯೋಜಕರು, ಗ್ರಾಮ ಪಂಚಾಯತಿ ಸಿಬ್ಬಂದಿ ಮನೆ–ಮನೆಗೆ ಭೇಟಿ ನೀಡಿ ವಿ ಬಿ ಜಿ ರಾಮ್ ಜಿ ಯೋಜನೆ ಕುರಿತು ಜನ ಜಾಗೃತಿ ಮೂಡಿಸಲಿದ್ದಾರೆ. ಈ ಯೋಜನೆಯಡಿ ಅಕುಶಲ ಕೂಲಿ ಅವಧಿಯನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಿ ಪ್ರತಿದಿನಕ್ಕೆ ಕೂಲಿ ಮೊತ್ತವನ್ನೂ ಸಹ 370 ರೂ.ಗಳಿಂದ 382 ರೂ.ಗಳಿಗೆ ಹೆಚ್ಚಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
