ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರಿಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತ ಪಡಿಸಿಕೊಳ್ಳುವಂತೆ ವಿನಂತಿಸಲಾಗಿದ್ದು, ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ 12 ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,559 ಮತದಾರರ ಪತ್ತೆಗಾಗಿ ಸಹಾಯಕ ಮತದಾರರ ನೋದಣಾಧಿಕಾರಿಗನ್ನ ನೇಮಿಸಿದ್ದು, ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ನೋಟಿಸ್ ನೀಡುವಿಕೆ ಹಾಗೂ ವಿಲೇವಾರಿ ಪ್ರಕ್ರಿಯೆ: 24-08-2026 ರಿಂದ 22-10.-2026 ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕೈ ಬಿಟ್ಟಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ನಿಗದಿತ ಅವಧಿಯೊಳಗೆ ಭರ್ತಿ ಮಾಡಿದ ಎನ್ಯೂಮರೇಷನ್ ನಮೂನೆಯನ್ನು ಸಲ್ಲಿಸಲು ಸಾಧ್ಯವಾಗದ ಮತದಾರರು. ಆ. 24. 2026 ರಿಂದ ಸೆ. 23. 2026 ರವರೆಗೆ ಹಕ್ಕು/ ಆಕ್ಷೇಪಣೆಗಳ ಅವಧಿಯಲ್ಲಿ ನಿಗದಿತ ಘೋಷಣಾ ಪತ್ರದೊಂದಿಗೆ ನಮೂನೆ–6 ಅನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಬಹುದು ಎಂದರು.
ತಹಶೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ಯಾವುದೇ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿದ್ದು ವಿಚಾರಣೆ ನಂತರ ಮತದಾರರ ಪಟ್ಟಿಯಿಂದ ಕೈಬಿಟ್ಟಲ್ಲಿ, ಮತದಾರ ನೋಂದಣಾಧಿಕಾರಿಯ ಆದೇಶದ ದಿನಾಂಕದಿಂದ 15 ಸಂಬಂಧಿತ ಜಿಲ್ಲಾ ದಂಡಾಧಿಕಾರಿಗಳು/ ಜಿಲ್ಲಾಧಿಕಾರಿಗಳ ಮುಂದೆ ಮೊದಲ ಮೇಲ್ಮನವಿಯನ್ನು ಸಲ್ಲಿಸಬಹುದು. ಮೊದಲ ಮೇಲ್ಮನವಿಯ ಆದೇಶದ ದಿನಾಂಕದಿಂದ 30 ದಿನಗಳೊಳಗೆ, ಮುಖ್ಯ ಚುನಾವಣಾಧಿಕಾರಿಯವರ ಮುಂದೆ ಎರಡನೇ ಮೇಲ್ಮನವಿಯನ್ನು ಸಲ್ಲಿಸಬಹುದು ಎಂದು ತಿಳಿಸಿದರು.
ನಮೂನೆ 6- ಹೊಸ ಮತದಾರರಾಗಿ ನೋದಾಯಿಸಲು, ನಮೂನೆ 6ಎ – ಹೊಸ ಸಾಗರೋತ್ತರ ಮತದಾರರಾಗಿ ನೋಂದಾಯಿಸಲು, ನಮೂನೆ 7 – ಹೆಸರು ತೆಗೆದುಹಾಕುವಿಕೆ, ನಮೂನೆ 8 -ನಿವಾಸ ಸ್ಥಳ ಬದಲಾವಣೆ/ನಮೂದುಗಳ ತಿದ್ದುಪಡಿ/ಎಪಿಕ್ ಬದಲಾವಣೆ/ಪಿಡಬ್ಲ್ಯೂಡಿ ಗುರುತು ದಾಖಲಿಸುವುದು ಎಂದು ಹೇಳಿದರು.
ಕೊರಟಗೆರೆ ವಿಧಾಸಭಾ ಕ್ಷೇತ್ರಕ್ಕೆ ಒಟ್ಟು 12 ಜನ ಹೆಚ್ಚುವರಿ ಸಹಾಯಕ ಮತದಾರರ ನೋದಣಾಧಿಕಾರಿಗಳನ್ನ ನೇಮಕ ಮಾಡಿದ್ದು, ಇಒ ಅಪೂರ್ವ ಅನಂತರಾಮು ಅವರು ಹೊಳವನಹಳ್ಳಿ, ಕ್ಯಾಮೇನಹಳ್ಳಿ, ಅಕ್ಕಿರಾಂಪುರ, ಮಾವತ್ತುರು, ತಾಪಂ ಯೋಜನಾಧಿಕಾರಿ ಅರಸಾಪುರ, ದೊಡ್ಡಸಾಗ್ಗೆರೆ, ಬೋಮ್ಮಲದೇವಿಪುರ, ಬೈಚಾಪುರ, ಕೃಷಿ ಅಧಿಕಾರಿ ಕಲ್ಲೇಶ್ ಪ್ರಸಾದ್, ವಡ್ಡಗೆರೆ, ತುಂಬಾಡಿ, ಹಂಚಿಹಳ್ಳಿ, ಬಿ,ಆರ್ಸಿ ರುದ್ರೇಶ್, ಪುರಸಭೆ ಕಾರ್ಯಲಯ, ಪಶು ಅಧಿಕಾರಿ ಸುಧಾಕರ್, ಎಲೆರಾಂಪುರ, ನೀಲಗೊಂಡನಹಳ್ಳಿ, ವಜ್ಜನಕುರಿಕೆ, ತೀತಾ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಅನಂತರಾಜು, ಪಾತಗಾನಹಳ್ಳಿ, ಚಿನ್ನಹಳ್ಳಿ, ಕೋಳಾಲ, ಸಿಡಿಪಿಒ ಗಂಗಾಧರ್, ಬೆಳದರ, ಓಬಳಪುರ, ಚಿಕ್ಕತೋಟ್ಲುಕೆರೆ, ಪಿಡಬ್ಲ್ಯುಡಿ ಎಇಇ ದೀಪಕ್, ಕೋರಾ, ದೇವಲಾಪುರ, ಕೆಸ್ತೂರು, ರೇಷ್ಮೆ ಇಲಾಖೆಯ ರಾಜಣ್ಣ, ಬ್ಯಾಲ್ಯ, ಗೊಂದಿಹಳ್ಳಿ, ಕೊಡಗದಾಲ, ಜಿಪಂ ಎಇಇ ದಯಾನಂದ್, ಕೊಡ್ಲಾಪುರ, ಕೊಂಡವಾಡಿ, ಪುರವಾರ, ಸಮಾಜ ಕಲ್ಯಾಣಾಧಿಕಾರಿ ಯಮುನಾ ಥರಟಿ, ಬುಕ್ಕಪಟ್ಟಣ, ಕರಂಕೋಟೆ, ತೋವಿನಕೆರೆ, ತಾಪಂ ಲೆಕ್ಕಾಧಿಕಾರಿ ಶ್ರೀಧರ್ ತೋವಿನಕೆರೆ, ಬೂದಗವಿ ಗ್ರಾಪಂ ಗಳಲ್ಲಿ ಇವರುಗಳು ಬೆ.10 ರಿಂದ ಸಂಜೆ 4ಗಂಟೆವರೆಗೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸಮಿತಿಯ ಅಧ್ಯಕ್ಷ ವೆಂಕಟೇಶ್, ಅರವಿಂದ್, ಜೆಡಿಎಸ್ ತಾಲೂಕು ಅಧ್ಯಕ್ಷ ಕಾಮರಾಜು, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಲಕ್ಷ್ಮಣ್, ರಂಗಣ್ಣ, ಚುನಾವಣಾ ಶಿರಸ್ತೆದಾರ್ ಮಂಜುನಾಥ್, ಅರುಣ್ ಕುಮಾರ್ ಸೇರಿದಂತೆ ತಾಲೂಕು ಮಟ್ಟದ 12 ಅಧಿಕಾರಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
