ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸ್ಟುಡಿಯೋ ಸ್ಥಾಪಕರು ಹಾಗೂ ತಿಪಟೂರಿನ ಖ್ಯಾತಿಯ ‘ಕಲಾ ಕಂಠೀರವ’ ದಿವಂಗತ ಟಿ.ಎಸ್. ಕರಿಬಸಯ್ಯ ಅವರ ಕಂಚಿನ ಪುತ್ತಳಿಯನ್ನು ಅತ್ಯಂತ ಗೌರವಪೂರ್ವಕವಾಗಿ ಅನಾವರಣಗೊಳಿಸಲಾಯಿತು.
ಈ ವಿಶೇಷ ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಮಂಜುನಾಥ್ ಹಾಗೂ ವಾರ್ತಾ ಇಲಾಖೆಯ ಆಯುಕ್ತರಾದ ಶ್ರೀ ಅನುಚೇತ್ ಮುಖ್ಯ ಅತಿಷ್ಠಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ದಿವಂಗತ ಟಿ.ಎಸ್. ಕರಿಬಸಯ್ಯ ಅವರ ಮಕ್ಕಳಾದ ಟಿ.ಕೆ. ಪ್ರಕಾಶ್, ಶಶಿಶೇಖರ್, ಪ್ರಭು ಸೇರಿದಂತೆ ಅವರ ಕುಟುಂಬದ ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು.
ಜೊತೆಗೆ, ಕಂಠೀರವ ಸ್ಟುಡಿಯೋ ಅಧ್ಯಕ್ಷರಾದ ಮಹಬೂಬ್ ಪಾಷಾ, ಗಂಡಸಿ ಸದಾನಂದ ಸ್ವಾಮಿ, ಕಿರುತೆರೆ ನಟ ತಿಪಟೂರು ದಯಾನಂದ ಸಾಗರ್ ಸೇರಿದಂತೆ ಕನ್ನಡ ಚಲನಚಿತ್ರ ರಂಗದ ಹಾಗೂ ಸರ್ಕಾರದ ಹಲವು ಗಣ್ಯರು ಉಪಸ್ಥಿತರಿದ್ದು, ಕರಿಬಸಯ್ಯ ಅವರ ಸೇನೆಯನ್ನು ಸ್ಮರಿಸಿದರು.
ವರದಿ: ಆನಂದ್, ತಿಪಟೂರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
