nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು

    September 19, 2026

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026
    Facebook Twitter Instagram
    ಟ್ರೆಂಡಿಂಗ್
    • ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ
    • ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು
    • ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!
    • ಔರಾದ್ ತಾಲೂಕಿನ ಖಾಸೆಂಪೂರ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ‘ರೋಜ್ಗಾರ್ ದಿನಾಚರಣೆ’
    • ಹೊಳೆನರಸೀಪುರ: ಸೂರ್ಯ ನಾರಾಯಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2ನೇ ವರ್ಷದ ಉಚಿತ ಬೃಹತ್ ವೈದ್ಯಕೀಯ ಶಿಬಿರ ಯಶಸ್ವಿ
    • ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ
    • ಬೀದರ್‌: ಶಿಷ್ಟಾಚಾರ ಉಲ್ಲಂಘನೆ ಆರೋಪ – ಡಿಎಚ್‌ ಒ ಸೇರಿದಂತೆ ಇಬ್ಬರು ಅಧಿಕಾರಿಗಳು ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು
    ಚಿಕ್ಕನಾಯಕನಹಳ್ಳಿ September 19, 2026

    ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು

    By Ganesh TumkuruSeptember 19, 2026No Comments2 Mins Read
    c b suresh babu

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಸುದೀರ್ಘ ಮನವಿಗೆ ತಕ್ಷಣವೇ ಸ್ಪಂದಿಸಿರುವ ಶಾಸಕ ಸಿ.ಬಿ.ಸುರೇಶ್‌ ಬಾಬು, ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ ನಾಗತೀಕೆರೆಗಳಿಗೆ ರಂಗನಾಥಪುರದ ಮಾರ್ಗವಾಗಿ ಎತ್ತಿನಹೊಳೆ ಯೋಜನೆಯ ನೀರನ್ನು ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಪಟ್ಟಣದ ಪ್ರವಾಸಿ ಮಂದಿರದ ಬಳಿ ಭಾವನಹಳ್ಳಿ, ಹೊಸಹಳ್ಳಿ, ಹೊನ್ನೇಬಾಗಿ, ಕೋಡಿಹಳ್ಳಿ ಹಾಗೂ ತಿಮ್ಮನಹಳ್ಳಿ ಭಾಗದ ರೈತರು ಶಾಸಕರನ್ನು ಭೇಟಿಯಾಗಿ ನೀರಿನ ಸಮಸ್ಯೆಯ ಕುರಿತು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸಾವಿರಾರು ಅಡಿ ಆಳಕ್ಕೆ ಕೊಳವೆಬಾವಿ ಕೊರೆಸಿದರೂ ನೀರು ಸಿಗದ ಜಟಿಲ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈ ಭಾಗದ ಜನರಿಗೆ ಕುಡಿಯುವ ನೀರು ಒದಗಿಸಲು ದುರ್ಗದಕೆರೆ ಹಾಗೂ ನಾಗತೀಕೆರೆಗಳನ್ನು ತುಂಬಿಸುವುದು ಅತ್ಯಗತ್ಯವಾಗಿದೆ. ಈ ಕೆರೆಗಳನ್ನು ತುಂಬಿಸುವುದರಿಂದ ಸುತ್ತಮುತ್ತಲ ಪ್ರದೇಶದ ಅಂತರ್ಜಲ ಮಟ್ಟ ಹೆಚ್ಚುವುದರ ಜೊತೆಗೆ ಕುಡಿಯುವ ನೀರಿನ ಅಭಾವಕ್ಕೂ ಮುಕ್ತಿ ಸಿಗಲಿದೆ ಎಂದು ತಿಳಿಸಿದರು.

    ಎತ್ತಿನಹೊಳೆ ಯೋಜನೆಯ ನೀರನ್ನು ರಂಗನಾಥಪುರ ಮಾರ್ಗವಾಗಿ ಈ ಕೆರೆಗಳಿಗೆ ತಲುಪಿಸುವ ಸಾಧ್ಯತೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳೊಂದಿಗೆ ಈಗಾಗಲೇ ಸುದೀರ್ಘ ಚರ್ಚೆ ನಡೆಸಲಾಗಿದೆ. ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಭಾಗಕ್ಕೆ ಎತ್ತಿನಹೊಳೆ ನೀರು ತಲುಪಿದರೆ ಸಾವಿರಾರು ರೈತರ ಕೃಷಿ ಭೂಮಿಗೆ ನೀರಾವರಿ ಅನುಕೂಲವಾಗುವುದರ ಜೊತೆಗೆ, ಹಲವು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ.

    ಶಾಸಕರ ಈ ತಕ್ಷಣದ ನಿರ್ಧಾರ ಹಾಗೂ ಸ್ಪಂದನೆಗೆ ಹರ್ಷ ವ್ಯಕ್ತಪಡಿಸಿದ ರೈತರು ಮತ್ತು ಮುಖಂಡರು ಮೆಚ್ಚುಗೆ ಸೂಚಿಸಿದರು. ಜೊತೆಗೆ ಸಾಧ್ಯವಾದಷ್ಟು ಬೇಗ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ನೀರು ಹರಿಸುವಂತೆ ವಿನಂತಿಸಿದರು.

    ಈ ಸಂದರ್ಭದಲ್ಲಿ ಪಿ.ಎಲ್.ಡಿ. ಬ್ಯಾಂಕ್ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಹೊನ್ನೆಬಾಗಿ ಹೆಚ್.ಆರ್. ಶಶಿಧರ್, ಲೋಕೋಪಯೋಗಿ ಇಲಾಖೆಯ ತಿಮ್ಮಣ್ಣ, ಮುಖಂಡ ತಿಮ್ಮನಹಳ್ಳಿಯ ಶ್ರೀಹರ್ಷ ಮತ್ತು ಎತ್ತಿನಹೊಳೆ ಯೋಜನೆಯ ಇಂಜಿನಿಯರ್‌ ಗಳು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು

    September 18, 2026

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!

    August 19, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸದೆ ಜಿಲ್ಲಾಡಳಿತ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿ, ಶಾಸಕ ಸುರೇಶ್…

    ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು

    September 19, 2026

    ಕೊರಟಗೆರೆಗೂ ಬಂತು ಕೆ.ಎಸ್‌.ಆರ್‌.ಟಿ.ಸಿ. ಉಪವಿಭಾಗ ಭಾಗ್ಯ: ಹುಲಿಕುಂಟೆ ಸ.ನಂ. 60 ರಲ್ಲಿ 6 ಎಕರೆ ಜಾಗ ಗುರುತು

    September 19, 2026

    ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಮಾನ್ಯತೆ, ₹32,611 ಕೋಟಿ ಯೋಜನೆಗಳಿಗೆ ಅಸ್ತು!

    September 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.