nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜೆಟ್ ಮೇಲೆ ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ: ಎಂ.ಪಿ. ನಟೇಶ್ ಕುಮಾರ್
    ತುರುವೇಕೆರೆ March 12, 2022

    ಬಜೆಟ್ ಮೇಲೆ ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ: ಎಂ.ಪಿ. ನಟೇಶ್ ಕುಮಾರ್

    By adminMarch 12, 2022No Comments2 Mins Read
    thuruvecare

    ತುರುವೇಕೆರೆ: ಬಜೆಟ್ ಮೇಲಿನ ವಿಕಲಚೇತನ ನಿರೀಕ್ಷೆ ಹುಸಿಯಾಗಿದೆ. ವಿಕಲಚೇತನರ ಜನಸಂಖ್ಯೆ ಅನುಗುಣವಾಗಿ ವಿಕಲಚೇತನರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕೆಂದು ಶ್ರೀವಿವೇಕಾನಂದ ಅಂಗವಿಕಲರ ಸಂಘದ ಕಾರ್ಯದರ್ಶಿ ಎಂ.ಪಿ. ನಟೇಶ್ ಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾದ ಬಸವರಾಜ ಎಸ್.ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಕಲಚೇತನರಿಗೆ ಅನೇಕ ನಿರೀಕ್ಷೆಗಳಿದ್ದವು.


    Provided by
    Provided by
    Provided by

    ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಕಲಚೇತನರ ಬಗ್ಗೆ ಒಲವು ತೋರಿ, ಅನೇಕ ಭರವಸೆಗಳೊಂದಿಗೆ ನಿರೀಕ್ಷೆಯಲ್ಲಿದ್ದವರಿಗೆ ಬಹಳ ನೋವಾಗಿದೆ. ಶೇ. 75%ಹೆಚ್ಚು ಮನೋವೈಕಲ್ಯ ಹೊಂದಿದ್ದವರಿಗೆ 1,400 ರೂ. ಗಳಿಂದ, 2,000 ರೂ.ಗಳಿಗೆ ಮಾಶಾಸನ ಹೆಚ್ಚಿಸುವ ಭರವಸೆ ಮತ್ತು ಬಸ್ ಪಾಸ್ ಪ್ರಸ್ತುತ ದರದಲ್ಲಿಯೇ ಹೆಚ್ಚಿನ ದೂರದ ಪ್ರಯಾಣ ನೀಡುವುದರ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆಗಳು ಹುಸಿಯಾಗಿವೆ.

    ಸದನದಲ್ಲಿ ರಾಜ್ಯದ ಎಲ್ಲಾ ಶಾಸಕರು ತಮ್ಮ ವೇತನವನ್ನು ಹೆಚ್ಚಿಸಿಕೊಂಡರು. ಆದರೆ ಅಂಗವಿಕಲರ ಸಮಸ್ಯೆಯ ಬಗ್ಗೆ ಯಾರು ಪರಿಗಣಿಸಲಿಲ್ಲ. ಶೇ.75% ಮತ್ತು 25%ನ ತಾರತಮ್ಯವನ್ನು ಹೋಗಲಾಡಿಸಬೇಕು. ಗ್ರಾಮೀಣ ಪ್ರದೇಶದ ಪುನರ್ವಸತಿ ಕೇಂದ್ರಗಳ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಬೇಕು. ಸಮಾಜದಲ್ಲಿ ತಂದೆ-ತಾಯಿಗೆ ಬೇಡವಾದ ಕಟ್ಟಕಡೆಯ ವ್ಯಕ್ತಿಗಳೆಂದರೆ ವಿಕಲಚೇತನರಾಗಿದ್ದೇವೆ. ವಿಕಲಚೇತನರ ಆರ್ಥಿಕ ಸಬಲೀಕರಣ ಸೇರಿದಂತೆ ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಪ್ರಯತ್ನ ಮಾಡದೇ ಇರುವುದು ಖಂಡನೀಯವಾಗಿದೆ. ಸ್ಥಳೀಯ ಶಾಸಕರು ಸಹ ವಿಕಲಚೇತನರ ಅನುದಾನದಲ್ಲಿ ದೊರೆಯುವ ಯಾವುದೇ ಸೌಲಭ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಈ ಸಂಬಂಧ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಜೊತೆಗೂಡಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಸಂಘದ ಸಹಕಾರ್ಯದರ್ಶಿ ಎಸ್. ಗುರುಲಿಂಗಮೂರ್ತಿ ಮತ್ತು ಖಜಾಂಚಿ ವಿ.ಎಸ್. ಲಕ್ಷ್ಮಿಕಾಂತ್ ಮಾತನಾಡಿ, ತೈಲ ಬೆಲೆ ಏರಿಕೆ ಮತ್ತು ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ದುಡಿಯುವ ಮಧ್ಯಮ ಮತ್ತು ಕಾರ್ಮಿಕ ವರ್ಗ ಜೀವನ ನಡೆಸಲು ಹೈರಾಣಾಗಿದೆ. ಇಂತಹ ಸಂದರ್ಭದಲ್ಲಿ ಮಾಶಾಸನದ ಮೇಲೆ ಅವಲಂಬಿತರಾಗಿರುವ ವಿಕಲಚೇತನರ ಮಾಶಾಸನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವಿಕಲಚೇತನರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಾದ ಬಸವರಾಜು ಎಸ್. ಬೊಮ್ಮಾಯಿ ಅವರು ಮುಂದಾಗಬೇಕು. ತಾಲೂಕಿನಲ್ಲಿ ಕೋವಿಡ್ ನಂತಹ ಪರಿಸ್ಥಿತಿಯಲ್ಲಿಯೂ ಸಹ ನಮಗೆ ಸ್ಥಳೀಯ ಶಾಸಕರಾಗಲಿ, ಯಾವುದೇ ಜನಪ್ರತಿನಿಧಿಗಳಾಗಲಿ ನೆರವಾಗಿಲ್ಲ ಎಂದು ದೂರಿದರು.

    ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಮಹಾಲಿಂಗಪ್ಪ, ಅಧ್ಯಕ್ಷರಾದ ಟಿ.ಎಲ್.ನಾಗರಾಜು ಉಪಾಧ್ಯಕ್ಷರಾದ ರವಿಕುಮಾರ್., ನಿರ್ದೇಶಕರುಗಳಾದ ಕೃಷ್ಣಮೂರ್ತಿ, ಲತಾ ಕುಮಾರ್, ಶಿವಬಸವಯ್ಯ, ಮಂಗಳ ಗೌರಮ್ಮ, ಸಂತೋಷ್ ಕುಮಾರ್, ಶಾಂತಕುಮಾರ್, ರಮೇಶ್, ಮಹೇಶ್, ಮುಗಳೂರು ಪರಮೇಶ್ ಸೇರಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ವಿ.ಆರ್. ಡಬ್ಲ್ಯೂ./ ಯೂ.ಆರ್. ಡಬ್ಲ್ಯೂ./ ಎಂ.ಆರ್.ಡಬ್ಲ್ಯೂ. ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.