ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಕರ್ನಾಟಕ ಹಸಿರು ಸೇನೆ, ರೈತ ಸಂಘಟನೆ ಹಾಗೂ ಪ್ರಗತಿಪರ, ಸಂಘಟನೆಗಳು , ತುರುವೇಕೆರೆ ತಾಲೂಕು ರೈತ ಸಂಘಟನೆಯ ಅಧ್ಯಕ್ಷ ಶ್ರೀನಿವಾಸ್ ಗೌಡರ ನೇತೃತ್ವದಲ್ಲಿ, ಭ್ರಷ್ಟ ಬೆಸ್ಕಾಂ ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರಮುಖ ರಸ್ತೆಯಲ್ಲಿ ನೂರಾರು ಪ್ರತಿಭಟನಾಕಾರರು, ಕಾಲ್ನಡಿಗೆ ,ಮೂಲಕ ಸಂಚರಿಸಿ, ಬೆಸ್ಕಾಂ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಬಳಿಕ ಬೆಸ್ಕಾಂ ಕಚೇರಿಯ ಬಳಿ ತೆರಳಿ,ಕಚೇರಿಯ ಮುಂಭಾಗದಲ್ಲಿ, ನೂರಾರು ಹೋರಾಟದ ರೈತರು, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು, ಕಾರ್ಮಿಕ ಸಂಘಟನೆಗಳು ಜಮಾಯಿಸಿ, ಧರಣಿ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಉದ್ದೇಶಿಸಿ ಮಾತನಾಡಿದ, ಸಿ.ಐ. ಟಿ. ಯು.ಕಾರ್ಮಿಕ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಸತೀಶ್, ತುರುವೇಕೆರೆ ತಾಲೂಕಿನ, ರೈತರು ಶಾಂತಿ ಪ್ರಿಯರು ಎಂಬುದು ಇಡೀ ನಾಡಿಗೆ ಗೊತ್ತಿದೆ. ಅದನ್ನು ದುರುಪಯೋಗಪಡಿಸಿಕೊಂಡು ನಮ್ಮನ್ನು ಯಾರು ಕೇಳುತ್ತಾರೆ ಅನ್ನೋ ತಾತ್ಸಾರ ತೋರಲಾಗುತ್ತಿದೆ. ರೈತರು ಸಿಡಿದು ನಿಂತ್ರೆ ಕಚೇರಿಯ ಕಟ್ಟಡನೆ ಇರಲ್ಲ. ನಾವು ಕಟ್ಟುತ್ತಿರುವ ಟ್ಯಾಕ್ಸ್ ಹಣದಲ್ಲಿ ಅಧಿಕಾರಿಗಳು ಸಂಬಳ ಪಡೆಯುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್ ತೆಗೆಯುತ್ತಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಲೈನ್ ಬಿಚ್ಚಲು ಲಂಚ, ಹಾಕಲು ಲಂಚ, ಟಿ.ಸಿ.ಕೆಟ್ಟರೆ ಅದನ್ನು ಸರಿಪಡಿಸಲೂ ಲಂಚ ಕೊಡಬೇಕಾದ ಪರಿಸ್ಥಿತಿ ಇಲ್ಲಿದೆ. ಅಧಿಕಾರಿಗಳಿಗೆ ಸರ್ಕಾರ ಸಂಬಳ ಕೊಡುತ್ತಿಲ್ವಾ ಎಂದು ಪ್ರಶ್ನಿಸಿದ ಅವರು, ಲಂಚಕೋರ , ಭ್ರಷ್ಟ ಎಂಜಿನಿಯರ್ ಕಾಂತರಾಜನನ್ನು ಕೂಡಲೇ ಸೇವೆಯಿಂದ, ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಈ ಪ್ರತಿಭಟನೆಯಲ್ಲಿ , ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಗೌಡ, ರೈತ ಸಂಘದ ಅಸ್ಲಾಮ್ ಪಾಷಾ, ತುರುವೇಕೆರೆ ತಾಲ್ಲೂಕು ಅಭಿವೃದ್ಧಿ ವೇದಿಕೆಯ ರಾಮೇಗೌಡ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಜಗದೀಶ್, ಬೀದಿ ಬದಿಯ ವ್ಯಾಪಾರಿಗಳ ಸಂಘದ ಮಾರುತಿ, ಕಟ್ಟಡ ಕಾರ್ಮಿಕರ ಸಂಘದ ಮಂಜುನಾಥ್ ಮೊದಲಾದವರು ಇದ್ದರು.
ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB