ತುಮಕೂರು: ತುಮಕೂರಿನ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಡಾ.ವಿದ್ಯಾಕುಮಾರಿ ನೇತೃತ್ವದಲ್ಲಿ ಎಸೆಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಪರಿಶೀಲನೆ ಸಭೆ ನಡೆಯಿತು.
ಈ ವೇಳೆ ಮಾತನಾಡಿದ ಸಿಇಓ ಡಾ.ವಿದ್ಯಾಕುಮಾರಿ, ಎಸೆಸೆಲ್ಸಿ ಮಕ್ಕಳು ಪರೀಕ್ಷೆ ಬರೆಯುವುದನ್ನು ಖಾತರಿಪಡಿಸುವುದು ಮುಖ್ಯ ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ. ಎಲ್ಲೆಲ್ಲಿ ಪರೀಕ್ಷೆ ನಡೆಯುತ್ತದೆ ಅಲ್ಲಿನ ಕೇಂದ್ರಗಳಲ್ಲಿ ಸಮರ್ಪಕವಾದ ವ್ಯವಸ್ಥೆಯನ್ನು ಮಾಡಬೇಕು ಎಂದರು.
ಸರ್ಕಾರದ ಮಾರ್ಗಸೂಚಿಯ ಪ್ರಕಾರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಯಾವ ರೀತಿ ಮಾಡಬೇಕು ಅದಕ್ಕೆ ಎಲ್ಲರೂ ಬದ್ಧವಾಗಿರಬೇಕಾಗುತ್ತದೆ. ಎಲ್ಲರೂ ಕೂಡ ಅದನ್ನು ಪಾಲಿಸಬೇಕಾಗುತ್ತದೆ. ಮಕ್ಕಳಿಗೆ ಕುಡಿಯುವ ನೀರನ್ನು ಇಡಬೇಕು ಮತ್ತುಸಣ್ಣ ಸಣ್ಣಅಂಶಗಳನ್ನು ನಾವು ಪಾಲಿಸಬೇಕಾಗುತ್ತದೆ ಎಂದರು.
ವರದಿ: ಎ.ಎನ್. ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB