nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ವರ್ಷದ ಬಾಲಕ, ಕಾರ್ಮಿಕನಿಂದ ಮಲ ಬಾಚಿಸಿದ ಕೆಎಸ್ ಆರ್ ಟಿಸಿ ಅಧಿಕಾರಿಗಳು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಹೇಯ ಘಟನೆ
    ಕೊರಟಗೆರೆ November 7, 2024

    10 ವರ್ಷದ ಬಾಲಕ, ಕಾರ್ಮಿಕನಿಂದ ಮಲ ಬಾಚಿಸಿದ ಕೆಎಸ್ ಆರ್ ಟಿಸಿ ಅಧಿಕಾರಿಗಳು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಹೇಯ ಘಟನೆ

    By adminNovember 7, 2024No Comments2 Mins Read
    ksrtc

    ಕೊರಟಗೆರೆ: ಕೆಎಸ್ ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿಯಿಂದ ತುಂಬಿ ಹರಿಯುತ್ತಿದ್ದ ಮಲವನ್ನು ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ.

    ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ನಾಗರಿಕ ‌ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿಲ್ದಾಣದ ಒಳಗಿರುವ ಸಾರ್ವಜನಿಕ ಶೌಚಾಲಯದ ಪಿಟ್ ತುಂಬಿ ಹರಿಯುತ್ತಿದ್ದನ್ನ ದಲಿತರಿಂದ ಸ್ವಚ್ಚಗೊಳಿಸುವ ಕೆಲಸ ಮಾಡಿಸಲಾಗಿದೆ. ತುಮಕೂರು ಮೂಲದ ಪರಿಶಿಷ್ಟ ಜಾತಿಗೆ ಸೇರಿದ 10 ವರ್ಷದ ಬಾಲಕಾರ್ಮಿಕ ಹಾಗೂ ಓರ್ವ ವ್ಯಕ್ತಿ ನಿಲ್ದಾಣದಲ್ಲಿ ಮಲವನ್ನ ಸ್ವಚ್ಚಗೊಳಿಸುತ್ತಿದ್ದ ದೃಶ್ಯ ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ.


    Provided by
    Provided by

    ದಲಿತರಿಂದ ಮಲ ಸ್ವಚ್ಚಗೊಳಿಸುವ ಕೆಲಸ ಮಾಡಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ಮಾಧ್ಯಮದವರನ್ನ ಕಂಡ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ. ಮಾಧ್ಯಮದವರು ಬಾಲಕನನ್ನ ಮಾತನಾಡಿಸಿದ ವೇಳೆ, ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕುಮಾರಣ್ಣ ಎಂಬುವರು ನಮಗೆ ಈ ಕೆಲಸ ಮಾಡುವಂತೆ ಹೇಳಿದ್ದಾರೆ, ನಾನು ಪರಿಶಿಷ್ಟ ಜಾತಿಗೆ  ಸೇರಿದ್ದು ತನಗೆ 10 ವರ್ಷ ವಯಸ್ಸು ಎಂದು ಬಾಲಕ ಹೇಳಿಕೊಂಡಿದ್ದಾನೆ.

    ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದ ಬಾಲಕನಿಗೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ದೂರದಿಂದಲೇ ಕೈಸನ್ನೆ ಮಾಡಿ ಮಾತನಾಡದಂತೆ ಗದರಿಸುತ್ತಾನೆ. ಕೂಡಲೇ ಬಾಲಕ ತಾವು ಕೆಲಸ ಮಾಡಲು ಬಳಸುತ್ತಿದ್ದ ಗುದ್ದಲಿ, ಬಾಣಲಿ ತೆಗೆದುಕೊಂಡು ಅಸಹಾಯಕತೆಯಿಂದ ಅಲ್ಲಿಂದ ಶೌಚಾಲಯದ ಕಡೆ ತೆರಳಿದ್ದು ಸಿಬ್ಬಂದಿಯ ದೌರ್ಜನ್ಯಕ್ಕೆ ಸಾಕ್ಷಿಯಾಯಿತು.

    ಪಟ್ಟಣ ಪಂಚಾಯ್ತಿಯಲ್ಲಿ ಇರುವ ಸೆಪ್ಟಿಕ್ ಟ್ಯಾಂಕ್ ಯಂತ್ರದ ಮೂಲಕ ತುಂಬಿದ ಶೌಚಗುಂಡಿಯನ್ನ ಸ್ವಚ್ಛಗೊಳಿಸದೇ ನಿಲ್ದಾಣದ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ. ಶೌಚಗುಂಡಿ ತುಂಬಿ ನಿಲ್ದಾಣದ ಫ್ಲಾಟ್ ಫಾರಂಗೆ ಹರಿಯತೊಡಗಿದೆ. ಇದು ನಿಲ್ದಾಣದಲ್ಲಿ ದುರ್ನಾತ ಆವರಿಸಿ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಒಡಾಡುವಂತ ಪರಿಸ್ಥಿತಿ ಉಂಟುಮಾಡಿದೆ. ಈ ನಿಲ್ದಾಣಕ್ಕೆ ಬರುವ ಅದೆಷ್ಟು ಜನ ಪ್ರಯಾಣಿಕರು ರೋಗ ರುಜಿನಗಳಿಗೆ ತುತ್ತಾಗಿದ್ದರೋ ದೇವರೆ ಬಲ್ಲ. ಇಂತಹ ಸ್ಥಿತಿಯಲ್ಲಿ ಬಡವರು ದಲಿತರ ಅಸಹಾಯಕತೆಯನ್ನ ದುರ್ಬಳಕೆ ಮಾಡಿಕೊಂಡು ಅವರಿಂದ ಬರಿಗೈಯಲ್ಲಿ ಸ್ವಚ್ಚತೆ ಮಾಡಿಸಿರುವುದು ನಿಜಕ್ಕೂ ಖಂಡನಾರ್ಹವಾಗಿದೆ.

    ಬಸ್ ನಿಲ್ದಾಣದೊಳಗೆ ನೂರಾರು ಪ್ರಯಾಣಿಕರ ಸಮ್ಮುಖದಲ್ಲೆ ಸುಡುವ ಬಿಸಿಲಿನಲ್ಲಿ ಬರಿ ಮೈಯಲ್ಲಿದ್ದ ಆ ದಲಿತ ಬಾಲಕ ಮಲವನ್ನ ಬಾಚುತ್ತಿದ್ದದ್ದು ಮಾತ್ರ ಇಡೀ ಮನುಕುಲವನ್ನೆ ಪ್ರಶ್ನಿಸಿದೆ. ಬಾಲಕ ಹಾಗೂ ವ್ಯಕ್ತಿ ಇಬ್ಬರಿಂದ ಬರಿ ಕೈಗಳಲ್ಲಿ ನಿಲ್ದಾಣದಿಂದ ಬೇರೆಡೆಗೆ ಮಲ ಎತ್ತುವ ಕೆಲಸ ಮಾಡಿಸುವ ಮೂಲಕ ಮಾನವ ಹಕ್ಕು ಉಲ್ಲಂಘನೆ, ಹಾಗೂ ಮಲ ಹೊರುವ ಪದ್ದತಿ ನಿಷೇಧ ಕಾನೂನು ಉಲ್ಲಂಘನೆ ಮಾಡಲಾಗಿದೆ.

    ಮಾನವನಿಂದ ಮಲ ಹೊರುವ ಪದ್ದತಿ ನಿಷೇಧ ಹಾಗೂ ಬಾಲಕಾರ್ಮಿಕ ಪದ್ದತಿ ನಿಷೇಧ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಅಧಿಕಾರಿಗಳ ಸಮ್ಮುಖದಲ್ಲೆ ಉಲ್ಲಂಘನೆಯಾಗಿರುವುದು ನಿಜಕ್ಕೂ ದುರಂತ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರದಲ್ಲಿರುವ ಬಸ್ ನಿಲ್ದಾಣದಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಅಧಿಕಾರಿ, ಸಿಬ್ಬಂದಿಗಳು ನಿರ್ಭೀತಿಯಿಂದ ದಲಿತರ ಕೈಯಲ್ಲಿ ಇಂತಹ ಅನಿಷ್ಟದ ಕೆಲಸ ಮಾಡಿಸಿರುವುದು ಸಚಿವರ ಕಾರ್ಯದಕ್ಷತೆಯನ್ನೇ ಅಣಕಿಸುವಂತೆ ಮಾಡಿದೆ.

    ಇಂತಹ ಘಟನೆ ರಾಜ್ಯದ ಯಾವುದೇ ಗ್ರಾಮಗಳಲ್ಲೂ ಸಂಭವಿಸಬಾರದು.ಈ ಘಟನೆ ನಾಗರೀಕ ಸಮಾಜದ ತಲೆ ತಗ್ಗಿಸುವಂತಾಗಿದೆ. ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ಮಲ ಹೊರುವ ಪದ್ದತಿ ಜಾತಿ ಪದ್ದತಿ ಜೀವಂತವಾಗಿರುವುದಕ್ಕೆ ಘಟನೆಯೇ ಸಾಕ್ಷಿ. ಸಾಮಾಜಿಕ ಹೋರಾಟಗಾರನಾದ ನಾನು ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇನೆ. ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಇಂತಹ ಘಟನೆಗಳಿಗೆ ತಾರ್ಕಿಕ ಅಂತ್ಯ ಕಾಣಲು ಇನ್ನೂ ವಿಶೇಷ ಕಾನೂನು ತರುವುದು ಅನಿವಾರ್ಯವಾಗಿದೆ .

    –ಜೆಟ್ಟಿ ಅಗ್ರಹಾರ ನಾಗರಾಜು, ಸಾಮಾಜಿಕ ಹೋರಾಟಗಾರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.