ಹೈದರಾಬಾದ್: 2016 ರಲ್ಲಿ ಶಂಕುಸ್ಥಾಪನೆಗೊಂಡು ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕಿದ್ದ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಮನೈರ್ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ಸೇತುವೆಯು ದಿಢೀರ್ ಕುಸಿದು ಬಿದ್ದಿದೆ. ಮಾಹಿತಿಯ ಪ್ರಕಾರ,ಸೇತುವೆಯ ಎರಡು ಸಿಮೆಂಟ್ ಗರ್ಡರ್ ಗಳು ಜೋರಾಗಿ ಬೀಸಿದ ಗಾಳಿಗೆ ಬಿದ್ದಿವೆ ಎನ್ನಲಾಗಿದೆ.
ಈ ಘಟನೆಯು ತಡರಾತ್ರಿ ನಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮದುವೆಗೆ ಹೊರಡುತ್ತಿದ್ದ ಬಸ್ ಪ್ರಯಾಣಿಸಿದ ಸ್ವಲ್ಪ ಹೊತ್ತಲ್ಲೇ ಸೇತುವೆ ಕುಸಿದು ಬಿದ್ದಿದ್ದು, ಬಸ್ ನಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಒಂದು ವರ್ಷದೊಳಗೆ ಪೂರ್ಣಗೊಳ್ಳಬೇಕಿದ್ದ ಸೇತುವೆಯ ಅಂದಾಜು ವೆಚ್ಚ 46 ಕೋಟಿ ರೂ ಆಗಿದ್ದು, ಗುತ್ತಿಗೆದಾರರು ಕಾಮಗಾರಿ ಅರ್ಧಕ್ಕೆ ನಿಲ್ಲಿಸಿದ್ದರಿಂದ ಎಂಟು ವರ್ಷ ಕಳೆದರೂ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296