ಕೊರಟಗೆರೆ: ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಪಕ್ಕದಲ್ಲಿರುವ ದೇವಸ್ಥಾನದ ಬಳಿ ಕಾರು ನಿಲ್ಲಿಸಿ, ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಹಾಗೂ ಲಕ್ಕಯ್ಯನಪಾಳ್ಯದ ಯುವತಿ ಅನನ್ಯ (19) ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.
ಮೂರು ದಿನದ ಹಿಂದೆ ಮನೆ ಬಿಟ್ಟು ಇಬ್ಬರು ಬಂದಿದ್ದರು. ಇದೀಗ ಕೆರೆಯ ಬಳಿಯಲ್ಲಿ ಕಾರು ಹಾಗೂ ಚಪ್ಪಲಿ ಪತ್ತೆಯಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ಮೂಡಿದೆ.
ಘಟನೆ ಹಿನ್ನೆಲೆ ಅಗ್ನಿಶಾಮಕ ದಳದ ಕೆಲವು ಈಜುಪಟುಗಳುಮಾವತ್ತೂರು ಕೆರೆಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿದರು. ಬೋಟ್ ಸಹಾಯದಿಂದ ಹುಡುಕಾಟ ನಡೆಸಲಾಯಿತು.
ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಲ ಪೊಲೀಸ್ ಠಾಣೆಯ ಪಿಎಸ್ ಐ ಯೋಗೇಶ್, ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA