ಮಣಿಪಾಲ: ಎರಡು ತಂಡಗಳ ಮಧ್ಯೆ ಮಣಿಪಾಲದಲ್ಲಿ ಅ.1ರಂದು ರಾತ್ರಿ ವೇಳೆ ನಡೆದ ಚೂರಿ ಇರಿತ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟ್ಪಾಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ, ಬೈಕಾಡಿಯ ಹರ್ಷಿತ್, ತಿಲಕ್ ಹಾಗೂ ರಿತೇಷ್ ಬಂಧಿತ ಆರೋಪಿಗಳು. ಚೂರಿ ಇರಿತಕ್ಕೆ ಒಳಗಾದ ಪ್ರತಾಪ್(19) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಳಿಕ ಪ್ರತಾಪ್, ತಿಲಕ್ ಮತ್ತು ಹರ್ಷಿತ್ ನೊಂದಿಗೆ ರಾತ್ರಿ ಮಣಿಪಾಲದ ಎಡ್ಜ್ ಹೊಟೇಲ್ ಬಳಿ ಹೋದಾಗ ಕಾರಿನಲ್ಲಿ ಬಂದ ಇದೇ ಮೂರು ಜನ ಹಾಗೂ ಇತರರು ಪ್ರತಾಪ್ ಗೆ ಕೈಯಿಂದ ಹೊಡೆದು ಚೂರಿಯಿಂದ ಕೈಗೆ ಇರಿದು ಗಾಯಗೊಳಿಸಿದ್ದಾರೆ ಎಂದು ದೂರಲಾಗಿದೆ.


