ರಾಯಚೂರು: ಎರಡು ಕುಟುಂಬಗಳ ಮಧ್ಯೆ ನಡೆದಿದ್ದ ಮಾರಾಮಾರಿಯನ್ನು ಬಿಡಿಸಲು ಹೋಗಿದ್ದ ವ್ಯಕ್ತಿಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದಲ್ಲಿ ನಡೆದಿದೆ.
ಮಡುವು ಗ್ರಾಮದಲ್ಲಿ ಮಾರ್ಚ್ 3ರ ರಾತ್ರಿ ನಡೆದಿದ್ದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಮಾನ್ವಿ ಪೊಲೀಸರು ಉರುಕುಂದ, ವೇಂಕಟೇಶ್, ಗೋಕಯ್ಯ, ತಿಮ್ಮಪ್ಪ ಸೇರಿ ಏಳು ಜನರು ಬಂಧಿಸಿದ್ದಾರೆ. ದೂರು, ಪ್ರತಿ ದೂರು ದಾಖಲಾಗಿದೆ.
ಗ್ರಾಮದ ಹೊರ ಭಾಗದಲ್ಲಿ ಹಳ್ಳದ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾಮಗಾರಿಯ ಬೋರ್ಡ್ಗೆ ಆರೋಪಿ ವಿರೇಶ್ ಟ್ರ್ಯಾಕ್ಟರ್ ಗುದ್ದಿಸಿದ್ದ ಈ ವಿಚಾರವಾಗಿ ಕಾಮಗಾರಿ ಮಾಡಿಸುತ್ತಿದ್ದ ವೆಂಕೋಬಾ ಹಾಗೂ ವಿರೇಶ್ ನಡುವೆ ಗಲಾಟೆ ನಡೆದಿದೆ.
ವೆಂಕೋಬಾ ಹಾಗೂ ವಿರೇಶ್ ನ ಕುಟುಂಬಗಳ ನಡುವೆ ಈ ವಿಚಾರಕ್ಕೆ ಹೊಡೆದಾಟ ನಡೆದಿತ್ತು. ಈ ವೇಲೆ ಜಗಳ ಬಿಡಿಸಲು ಭೀಮಪ್ಪ ಹೋಗಿದ್ದು, ಈ ವೇಳೆ ಭೀಮಪ್ಪನನ್ನು ದೊಣ್ಣೆ, ರಾಡ್ ಗಳಿಂದ ಹೊಡೆದು ವಿರೇಶ್ ಹಾಗೂ ಆತನ ಕಡೆಯವರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4