ಕೊಪ್ಪಳ: ಪೈಪ್ ನ ಮೇಲೆ ತುಂಗಭದ್ರಾ ಎಡದಂಡೆ ಕಾಲುವೆ ದಾಟಲು ಮುಂದಾಗಿದ್ದ ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕರೆಕಲ್ ಕ್ಯಾಂಪ್ ಬಳಿಯಲ್ಲಿ ನಡೆದಿದೆ.
ಚೈತ್ರಾ ಯಾದವ್(13) ನೀರುಪಾಲಾದ ಬಾಲಕಿಯಾಗಿದ್ದಾಳೆ. ಕಾಲುವೆ ಎಡಭಾಗದಲ್ಲಿ ಬಾಲಕಿಯ ಪಾಲಕರು ಕುರಿಯ ಹಟ್ಟಿಯನ್ನು ಹಾಕಿಕೊಂಡಿದ್ದರು. ಕಾಲುವೆಗೆ ಅಡ್ಡಲಾಗಿ ಹಾಕಿರುವ ಪೈಪ್ ಮೂಲಕ ಕಾಲುವೆಯ ಬಲಭಾಗಕ್ಕೆ ಬಂದು, ತಮ್ಮ ದಿನಬಳಕೆ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಎಂದಿನಂತೆ ಮಂಗಳವಾರ ಬಾಲಕಿಯು ಪೈಪ್ ಮೇಲಿಂದ ಕಾಲುವೆ ದಾಟಲು ಹೋಗಿದ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಈ ದುರಂತ ಸಂಭವಿಸಿದೆ.
ಮಾಹಿತಿ ತಿಳಿದ ಕೂಡಲೇ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕಿಗಾಗಿ ಹುಡುಕಾಟ ನಡೆಸಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


