ಬೆಂಗಳೂರು: ಅಡ್ಡ ಬಂದ ಬೈಕ್ ಸವಾರನ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಪಲ್ಟಿ ಹೊಡೆದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲಗಣಿ ಕ್ರಾಸ್ ಬಳಿ ನಡೆದಿದೆ.
ಬಸ್ ನ ವೊಳಗೆ ಸಿಲುಕಿಕೊಂಡಿದ್ದವರನ್ನು ಸ್ಥಳೀಯರು ಕೂಡಲೇ ರಕ್ಷಿಸಿದ್ದಾರೆ. ಬಸ್ ನಲ್ಲಿದ್ದ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಂಬ್ಯುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಬಸ್ ಜಮಖಂಡಿಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


