ಪಾವಗಡ: ತಾಲೂಕಿಗೆ ಶಾಶ್ವತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಕಳೆದ ಹತ್ತು ವರ್ಷಗಳ ಹಿಂದೆ ಪಾವಗಡದಿಂದ ಬೆಂಗಳೂರಿನವರಿಗೂ ಪಾದಯಾತ್ರೆ ನಡೆಸಿದಂತಹ ಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆ, ರೈತ ಸಂಘ, ಪ್ರಗತಿಪರ ಸಂಘಟನೆಗಳು ಸೇರಿದಂತೆ ಮತ್ತಿತರ ಹೋರಾಟಗಾರರ ಹೋರಾಟದ ಫಲವಾಗಿ ಪಾವಗಡ ತಾಲೂಕಿಗೆ ತುಂಗಭದ್ರಾ ಡ್ಯಾಮ್ ನಿಂದ ಶುದ್ಧ ಕುಡಿಯುವ ನೀರು ಸರಬರಾಜಾಗಲು ಕ್ಷಣಗಣನೆ ಶುರುವಾಗಿದೆ.
ಈ ಹಿನ್ನಲೆಯಲ್ಲಿ ಪಟ್ಟಣದ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಏ.21ನೇ ತಾರೀಕಿನ ಸೋಮವಾರದಂದು ಬೃಹತ್ ಸನ್ಮಾನ ಕಾರ್ಯಕ್ರಮವನ್ನು ಪಾವಗಡ ತಾಲೂಕು ಸಮಗ್ರ ನೀರು ಹೋರಾಟ ವೇದಿಕೆಯಿಂದ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಎಸ್.ಶಿವಪ್ರಸಾದ್ ತಿಳಿಸಿದರು
ಪಟ್ಟಣದ ನಿರಕ್ಷಣಾ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾವಗಡ ತಾಲೂಕು ಅನೇಕ ವರ್ಷಗಳಿಂದ ಶಾಶ್ವತ ಕುಡಿಯಲು ಮತ್ತು ಕೃಷಿಗೆ ನೀರಿಲ್ಲದೆ ನಲುಗಾಡಿದ್ದು 10 ವರ್ಷಗಳ ಹಿಂದೆ ನಡೆದ ಅನೇಕ ಪ್ರತಿಭಟನೆ,ಹೋರಾಟಗಳ ಫಲವಾಗಿ ತುಂಗಭದ್ರಾ ಕುಡಿಯುವ ನೀರು ಬರುತ್ತಿದ್ದು, ಈ ಶುಭಗಳಿಗೆಯಲ್ಲಿ ಹೋರಾಟಗಾರರ ಸನ್ಮಾನಿಸಲು ತೀರ್ಮಾನಿಸಲಾಗಿದ್ದು ಅದೇ ಸಂದರ್ಭದಲ್ಲಿ ಇನ್ನಿತರ ನೀರಾವರಿ ಯೋಜನೆಗಳನ್ನ ಶೀಘ್ರವಾಗಿ ಜಾರಿಗೊಳಿಸಲು ಹಕ್ಕೋತಾಯ ಮಂಡಿಸಲಾಗುವುದೆಂದು ತಿಳಿಸಿದರು
ವೇದಿಕೆಯ ಕಾರ್ಯದರ್ಶಿ ಸೊಗಡು ವೆಂಕಟೇಶ್ ಮಾತನಾಡಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಪಟ್ಟಣದ ಗುರುಭವನ ಮೈದಾನದಿಂದ ಬಳ್ಳಾರಿ ರಸ್ತೆಯ ಮೂಲಕ ವಿವಿಧ ಸಂಸ್ಕೃತಿಕ ಕಲಾತಂಡಗಳು ರೈತರು ಹೋರಾಟಗಾರರ ಬೃಹತ್ ಮೆರವಣಿಗೆಯ ನಂತರ ಎಸ್ ಎಸ್ ಕೆ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ 200 ಕ್ಕೂ ಅಧಿಕ ಜನ ಹೋರಾಟಗಾರರನ್ನು ಸನ್ಮಾನಿಸಲಾಗುವುದು ಈ ಒಂದು ಸನ್ಮಾನ್ಯ ಮುಂದಿನ ಪೀಳಿಗೆಗೆ ದಿಟ್ಟ ಹೆಜ್ಜೆಯಂತಿರಲು ಸ್ಪೂರ್ತಿಯೋಗಲು ತಾವೆಲ್ಲ ಪಾಲ್ಗೊಂಡು ಸಹಕರಿಸಬೇಕೆಂದು ತಾಲೂಕಿನ ಜನತೆಗೆ ವಿನಂತಿಸಿದರು
ಮೆರವಣಿಗೆಯನ್ನು ಉದ್ಘಾಟನೆಯನ್ನು ರಾಮಕೃಷ್ಣ ಸೇವಾಶ್ರಮದ ಜಪಾನಂದ ಸ್ವಾಮೀಜಿ, ಗುರುಗುಂಡ ಮಹಾ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ, ಬಾಳೆಹೊನ್ನೂರು ಶಾಖ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಏಲಾರಂಪುರ ಮಠದ ಶ್ರೀ ಹನುಮಂತನಾಥ ಮಹಾಸ್ವಾಮೀಜಿ, ಸಂಸ್ಥಾನದ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಸರ್ವಧರ್ಮ ಶಾಂತಿ ಪೀಠದ ಸಿದ್ದಾಪುರ ರಮೂರ್ತಿ ಸ್ವಾಮೀಜಿಯವರು ನೆರವೇರಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ, ರೈತ ಸಂಘದ ಅಧ್ಯಕ್ಷರಾದ ಜಿ.ನರಸಿಂಹ ರೆಡ್ಡಿ, ಚಿಂತಕರಾದ ಪುರುಷೋತ್ತಮ ರೆಡ್ಡಿ, ಜೆಡಿಎಸ್ ಪಕ್ಷದ ಗೌರವಾಧ್ಯಕ್ಷರಾದ ರಾಜಶೇಖರಪ್ಪ, ಮಾತನಾಡಿದರು
ಮುಖಂಡರಾದ ಜಿ ಟಿ ಗಿರೀಶ್, ಶಿವಕುಮಾರ್ ಸಾಕೇಲ್, ಕಾವಲಗೇರಿ ರಾಮಾಂಜಿ, ಬ್ಯಾಡನೂರು ಶಿವು, ಸೇರಿದಂತೆ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW