ಕಾರವಾರ: ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಆಯೋಜಿಸಿರುವ ‘ವಂದೇ ಮಾತರಂ ಕೋಸ್ಟ್ಸಲ್ ಸೈಕ್ಲೋಥಾನ್ -2026- ರ್ಯಾಲಿಯ ಪಶ್ಚಿಮ ಕರಾವಳಿ ಸೈಕ್ಲೋಥಾನ್ ತಂಡವು ಸೋಮವಾರ ಕಾರವಾರ ಪ್ರವೇಶಿಸಿದ್ದು, ಈ ರ್ಯಾಲಿಗೆ ಮಾಜಾಳಿ ಚೆಕ್ ಪೋಸ್ಟ್ ನಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ರ್ಯಾಲಿಯಲ್ಲಿ ಸುಮಾರು 50 ರಷ್ಟು ಮಹಿಳಾ ಸಿಬ್ಬಂದಿ ಸೇರಿದಂತೆ 120 ಸಿ.ಐ.ಎಸ್.ಎಫ್ ಸಿಬ್ಬಂದಿ ಭಾಗವಹಿಸಿದ್ದು, ಈ ತಂಡವು ಜ.28 ರಂದು ಗುಜರಾತ್ ಲಖ್ಪತ್ ಕೋಟೆಯಿಂದ ತಮ್ಮ ರ್ಯಾಲಿಯನ್ನು ಪ್ರಾರಂಭಿಸಿದ್ದು, ಸೋಮವಾರ ಮಡಗಾಂವ್–ಕಾಣಕೋಣ–ಮಾಜಾಳಿ ಮೂಲಕ ಕಾರವಾರ ಪ್ರವೇಶಿಸಿದ್ದು, ಸಿ.ಎಸ್.ಎಸ್.ಎಫ್. ಕೈಗಾದ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು, ಪೊಲೀಸ್ ಬ್ಯಾಂಡ್ ಮತ್ತು ಸ್ಥಳೀಯ ಜಾನಪದ ಕಲಾತಂಡಗಳ ಮೆರವಣಿಗೆಯ ಮೂಲಕ ಅವರನ್ನು ಸ್ವಾಗತಿಸಲಾಯಿತು.
ಸೈಕ್ಲೋಥಾನ್ ತಂಡದಲ್ಲಿದ್ದ ಸಿ.ಐ.ಎಸ್.ಎಫ್ ಸಿಬ್ಬಂದಿಯನ್ನು ಗೋಟ್ನೆಭಾಗ್ ಕ್ರಾಸ್ನಲ್ಲಿ ಮೀನುಗಾರ ಮಹಿಳೆಯರು ತಿಲಕವಿಟ್ಟು, ಪುಷ್ಪವೃಷ್ಠಿ ಮಾಡಿ ಸ್ವಾಗತಿಸಿದರು.
ಸಿ.ಐ.ಎಸ್.ಎಫ್. ಘಟಕ ಎನ್.ಪಿ.ಸಿ. ಕೈಗಾದ ಸೀನಿಯರ್ ಕಮಾಂಡೆಂಟ್ ಅಜಯ್ ಕುಮಾರ್ ಝಾ, ಬೆಂಗಳೂರಿನ ಸ್ಯಾಟಲೈಟ್ ಕೇಂದ್ರದ ಸೀನಿಯರ್ ಕಮಾಂಡೆಂಟ್ ಆರ್.ಪಿ. ಸಿಂಗ್, ಡೆಪ್ಯುಟಿ ಕಮಾಂಡೆಂಟ್ ಬಿರೇಂದ್ರ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯಕ್, ಡಿವೈಎಸ್ಪಿ ಗಿರೀಶ್ ಮತ್ತಿತರರು ಭಾಗವಹಿಸಿದ್ದರು.
ನಂತರ ಈ ಸೈಕ್ಲೋಥಾನ್ ತಂಡವು ಮಾಜಾಳಿ ಚೆಕ್ ಫೋಸ್ಟ್ -– ನೆಚ್ಚನ್ಬಾಗ್ಲ — ಹಿಪ್ಪಲಿ -– ದಂಡೇಬಾಗ್ — ಬವಾಲ್ — ದೇವ್ಬಾಗ್ — ಸದಾಶಿವಗಡ — ಶಿವಾಜಿ ಕ್ರಾಸ್- – ಚಿಂಚೇವಾಡ — ರಾಮನಾಥ್ ವೃತ್ತ — ವಂಗಡ -ಮಾಜಾಳಿ ಮಾರ್ಗದ ಮೂಲಕ ಸರ್ಕಾರಿ ಎಂಜಿನಿಯರಿAಗ್ ಕಾಲೇಜು ಮಾಜಾಳಿಗೆ ತೆರಳಿತು, ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಫೆ.17 ರಂದು ಬೆ.7 ಗಂಟೆಗೆ ಗಣ್ಯರ ಸಮ್ಮುಖದಲ್ಲಿ ನಡೆಯುವ ಧ್ವಜಾರೋಹಣ ಸಮಾರಂಭದ ನಂತರ ಸೈಕ್ಲೋಥಾನ್ ತಂಡವು ಮುರುಡೇಶ್ವರದ ಕಡೆಗೆ ತೆರಳಲಿದೆ.
ಕೋಸ್ಟಲ್ ಸೈಕ್ಲೋಥಾನ್ನಲ್ಲಿ ಭಾಗವಹಿಸಿದ್ದ ಸಿಐಎಸ್ಎಫ್ ಕಾನ್ಸ್ಟೇಬಲ್ ರಾಹುಲ್ ಮಾತನಾಡಿ, ಗುಜರಾತನಿಂದ ಪ್ರಾರಂಭವಾದ ನಮ್ಮ ರ್ಯಾಲಿಯು ಕೇರಳದ ಕೊಚ್ಚಿ ತನಕ ನಡೆಯಲಿದ್ದು, ಈ ರ್ಯಾಲಿಯ ಮುಖ್ಯ ಉದ್ದೇಶ ಸುರಕ್ಷಿತ ಸಮೃದ್ಧ ಭಾರತ. ಕರಾವಳಿ ತೀರ ಪ್ರದೇಶ ಎಲ್ಲಿಯವರೆಗೆ ಸುರಕ್ಷಿತವಾಗಿರತ್ತೋ ಅಲ್ಲಿಯವರೆಗೆ ಭಾರತ ಸಮೃದ್ಧವಾಗಿರುತ್ತದೆ. ದೇಶದ ಮೀನುಗಾರರು ಸಹಕಾರ ಮಹತ್ವದಾಗಿದ್ದು, ಪ್ರತಿ ಕ್ಷಣ ಅವರು ಸಮುದ್ರದಲ್ಲಿ ಇರುವುದರಿಂದ ಕರಾವಳಿ ತೀರ ಪ್ರದೇಶದ ಆಗುಹೋಗುಗಳ ಬಗ್ಗೆ ಅವರಿಗೆ ಮಾಹಿತಿ ಇದ್ದು, ಅವರ ಜೊತೆ ಬೇರತು ದೇಶದ ಭದ್ರತೆಗೆ ಅವರ ಸಹಕಾರ ಪಡೆಯಲು ಸೈಕ್ಲೋಥಾನ್ ಆಯೋಜಿಸಲಾಗಿದೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್ಎಫ್) ದೇಶದ ಪ್ರಮುಖ ನಿರ್ಣಾಯಕ ಸ್ಥಳಗಳಲ್ಲಿ ನಿಯೋಜನೆ ಮಾಡಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


