ತುಮಕೂರು: ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವು ಜನರನ್ನು ಭಯಭೀತಗೊಳಿಸಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.
ಹೆಬ್ಬಾವನ್ನು ಕಂಡು ಗಾಬರಿಗೊಂಡ ಸಾರ್ವಜನಿಕರು ಸ್ಥಳೀಯರಿಂದ ಅರಣ್ಯ ಇಲಾಖೆ ಹಾಗು ಉರಗತಜ್ಞರಿಗೆ ಕರೆ ಮಾಡಿದ್ದಾರೆ.
ವಿಷಯ ತಿಳಿದ ತಕ್ಷಣ ತುಮಕೂರು ವನ್ಯಜೀವಿ ಉರಗ ಜಾಗೃತಿ ಸಂಸ್ಥೆಯ ತಜ್ಞ ದಿಲೀಪ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸುರಕ್ಷಿತವಾಗಿ ಹೆಬ್ಬಾವನ್ನು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಕೊರಟಗೆರೆ ಪಟ್ಟಣದ ಹೊರವಲಯದ ಡಿಗ್ರಿ ಕಾಲೇಜ್ ಸಮೀಪ ಕಾಣಿಸಿಕೊಂಡ ಬೃಹತ್ ಹೆಬ್ಬಾವು, ಟೀ ಅಂಗಡಿಯ ಮುಂಭಾಗದಲ್ಲಿರುವ ಕಲ್ಲುಗಳ ಅಡಿಯಲ್ಲಿ ಸೇರಿಕೊಂಡಿತ್ತು. ಸುಮಾರು ಹತ್ತು ವರ್ಷದಿಂದ ಅನೇಕ ಭಾಗಗಳಲ್ಲಿ ಬೃಹತ್ ಗಾತ್ರದ ಹಾವುಗಳು ಕಾಣಿಸಿಕೊಳ್ಳುತ್ತಿವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q