ಬೆಂಗಳೂರು ನಗರದಲ್ಲಿ ನಿನ್ನೆ ಸಂಜೆ ವೇಳೆ ಸುರಿದ ಸಾಧಾರಣ ಮಳೆಗೆ ಬೃಹತ್ ಮರವೊಂದು ಧರೆಗುರುಳಿ ಅನಾಹುತ ಸೃಷ್ಟಿಸಿದ ಘಟನೆ ನಡೆದಿದೆ.
ಕನ್ನಿಂಗ್ ಹ್ಯಾಮ್ ರಸ್ತೆಯ ಚಂದ್ರಿಕಾ ಹೋಟೆಲ್ ಕಾರ್ನರ್ ಬಳಿ ಸಂಜೆ 7: 30ರ ಸುಮಾರಿಗೆ ಘಟನೆ ನಡೆದಿದ್ದು, ರಾಜಶೇಖರ (18) ಎಂಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರ ಬಿದ್ದ ರಭಸಕ್ಕೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಗೂ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಏಳೆಂಟು ಕಾರುಗಳು ಜಖಂಗೊಂಡಿವೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಹಲವರು ಪಾರಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮರ ಬಿದ್ದ ಹಿನ್ನೆಲೆಯಲ್ಲಿ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಸಂಚಾರ ದಟ್ಟಣೆವುಂಟಾಗಿದ್ದು, ಸ್ಥಳಕ್ಕೆ ಹೈಗೌಂಡ್ಸ್ ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ. ವಿದ್ಯುತ್ ಸಂಪರ್ಕ ಸಹ ಕಡಿತಗೊಂಡಿದ್ದು, ಸ್ಥಳಕ್ಕೆ ಆಗಮಿಸಿರುವ ಬಿಬಿಎಂಪಿ ಹಾಗೂ ಬೆಸ್ಕಾಂ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


