ಮಧುಗಿರಿ: ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಹಿನ್ನೆಲೆ ಪಾವಗಡ ಗೇಟ್ ಸರ್ಕಲ್ ನಲ್ಲಿ ಇರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆಯನ್ನು ಇಂದು ನೇರವೇರಿಸಲಾಯಿತು.
ಸಂವಿಧಾನ ಜಾಗೃತಿ ಜಾಥಾ ವಾಹನ ಮಧುಗಿರಿಗೆ ಬಂದ ಹಿನ್ನೆಲೆ ಶಾಲಾ, ಕಾಲೇಜಿನ ಮಕ್ಕಳು ಹಾಗೂ ವಿವಿಧ ಜಾನಪದ ಕಲಾ ತಂಡಗಳು ನೃತ್ಯದ ಮೂಲಕ ಜಾಥಾ ರಥವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ಈ ಸಮಯದಲ್ಲಿ ಸ್ತಬ್ಧ ಚಿತ್ರ ವಾಹನದಲ್ಲಿ ಇರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ಮಾಲೆಯನ್ನು ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು ಆಡಳಿತದ ವಿವಿಧ ಅಧಿಕಾರಿಗಳು, ತಾಲ್ಲೂಕಿನ ಮುಖಂಡರು ಸಾರ್ವಜನಿಕರು ಹಾಜರಿದ್ದರು.