ತುಮಕೂರು: ಮಾನಸಿಕ ಅಸ್ವಸ್ಥನಿಂದ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟಿರವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.
ಅನಿಲ್ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಮಾನಸಿಕ ಅಸ್ವಸ್ಥನಾಗಿದ್ದು ಶಂಕರಪ್ಪ ಎಂಬುವರಿಗೆ ದೊಣ್ಣೆಯಿಂದ ಥಳಿಸಿದ್ದನು.
ತೀವ್ರ ರಕ್ತ ತ್ರಾವದಿಂದ. ಶಂಕರಪ್ಪ ಮೃತಪಟ್ಟಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ಅನಿಲ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
6 ವರ್ಷದ ಹಿಂದೆ ತಂದೆ ತಲೆ ಮೇಲೆ ಕಲ್ಲು ಎತ್ತಿ ಹಾಕಿಕೊಲೆ ಮಾಡಿದ್ದ ಅನಿಲ್, ಜೈಲು ಶಿಕ್ಷೆ ಅನುಭವಿಸಿ ಹೊರ ಬಂದಿದ್ದನು. ಬಳಿಕ ಮಾನಸಿಕ ಅಸ್ವಸ್ಥನಾಗಿ ಕೊರಟಗೆರೆಯಲ್ಲಿ ಅಲೆದಾಡುತ್ತಿದ್ದನು.
ನಿನ್ನೆ ರಾತ್ರಿ ಶನಿಮಹಾತ್ಮ ದೇವಸ್ಥಾನದ ಬಳಿ ನಡೆದುಕೊಂಡು ಹೋಗುತ್ತಿದ್ದ ಶಂಕರಪ್ಪ ಮೇಲೆ ಹಲ್ಲೆ ಮಾಡಿದ್ದನು. ಹಿಂದಿನಿಂದ ಬಂದು ದೊಣ್ಣೆಯಿಂದ ಶಂಕರಪ್ಪ ತಲೆಗೆ ಬಲವಾಗಿ ಹೊಡೆದಿದ್ದನು. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.