ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಮೇಕೆ ನುಂಗಲು ಸಾಧ್ಯವಾಗದೇ ಮೇಕೆಯನ್ನು ಬಿಟ್ಟು ಹೆಬ್ಭಾವು ತೆರಳಿದ ಘಟನೆ ನಡೆದಿದೆ.
ಆಹಾರ ಅರಸಿ ನಾಡಿಗೆ ಬಂದಿದ್ದ ಭಾರೀ ಗಾತ್ರದ ಹೆಬ್ಬಾವು ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಮೇಕೆಯೊಂದನ್ನು ಬೇಟೆಯಾಡಿದ್ದು ಹಿಡಿದ ಮೇಕೆಯನ್ನು ನುಂಗಲು ಸುಮಾರು ಒಂದು ತಾಸು ಸೆಣಸಾಡಿ ವಿಫಲವಾಗಿ, ನುಂಗಲು ಸಾಧ್ಯವಾಗದೆ ತೆರಳಿದೆ. ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಮೇಕೆ ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


