ವಿಜಯಪುರ: ಅರ್ಜಣಗಿಯ ಬಳಿ ಕಾರ್ ಮತ್ತು ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರವಿನಾಥ ಸುನಿಲಾಲ್ ಪತ್ತಾರ(52), ಅರ್ಜುನ್ ಕುಶಾಲ್ ಸಿಂಗ್ ರಜಪೂತ(32), ಪುಷ್ಪಾ(40) ಹಾಗ ಮೇಘರಾಜ್ ರಜಪೂತ(12) ಮೃತ ದುರ್ದೈವಿಗಳಾಗಿದ್ದಾರೆ.
ಟ್ರಕ್ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲಿಯ ಮೃತಪಟ್ಟಿದ್ದಾರೆ. ಬೆಳಗ್ಗೆ ವಿಜಯನದಿಂದ ಜಮಖಂಡಿಗೆ ಅರ್ಜುನ್ ಸಿಂಗ್ ತಮ್ಮ ಪೋಷಕರು ಹಾಗೂ ಮಗನೊಂದಿಗೆ ತೆರಳುತ್ತಿದ್ದರು. ಈ ವೇಳೆ ಜಮಖಂಡಿಯಿಂದ ಬರುತ್ತಿದ್ದ ಟ್ರಕ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಬಬಲೇಶ್ವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296