ಬೆಂಗಳೂರು- ಸೇಲಂ ರಾಷ್ಟ್ರೀಯ ಹೆದ್ದಾರಿಯ ಧರ್ಮಪುರಿ ಜಿಲ್ಲೆಯ ತೊಕ್ಕೂರು ಕಣಿವೆಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಧಾರುಣ ಸಾವನ್ನಪ್ಪಿದ ಘಟನೆ ನಡೆದಿದೆ.
ಎರಡು ಲಾರಿಗಳ ನಡುವೆ ಭೀಕರ ಅಪಘಾತವಾಗಿದ್ದು, ಬಳಿಕ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಒಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡರೆ, ಇನ್ನೊಂದು ಲಾರಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ಇನ್ನು ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಗೆ ದಾಖಲಿಸಲಾಗಿದೆ.


